<p><strong>ದಾವಣಗೆರೆ: </strong>ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಯಡಿ ಫಲಾನುಭವಿಗಳಿಗೆ ಚಿಕಿತ್ಸೆ ಒದಗಿಸಲು ಜಿಲ್ಲೆಯಲ್ಲಿ 13 ಸರ್ಕಾರಿ ಹಾಗೂ 27 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಸಿಕೊಂಡಿದ್ದು, ಆರೋಗ್ಯ ಸೇವೆ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಎಸ್. ತ್ರಿಪುಲಾಂಭ ತಿಳಿಸಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಶನಿವಾರ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಸಂಯೋಜಿತ ಯೋಜನೆ ಕುರಿತು ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಹಾಗೂ ವೈದ್ಯರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯಡಿ ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆ ಇನ್ನೂ ನಡೆಯಬೇಕಿದೆ. ಈ ಕಾರ್ಯ ಪೂರ್ಣಗೊಂಡರೆ ಯೋಜನೆಯ ಅನುಷ್ಠಾನ ಪರಿಣಾಮಕಾರಿಯಾಗಿ ಆರಂಭಗೊಳ್ಳಲಿದೆ ಎಂದರು.</p>.<p>ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪಬೇಕಾದರೆ ಆಸ್ಪತ್ರೆಗಳ ಆಡಳಿತ ಮಂಡಳಿ ಮತ್ತು ವೈದ್ಯರ ಪಾತ್ರ ಮಹತ್ವದ್ದಾಗಿರುತ್ತದೆ. ಹೀಗಾಗಿ, ಆಯುಷ್ಮಾನ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಗಳ ನಿಯಮಾವಳಿಗಳನ್ನು ಸರಿಯಾಗಿ ತಿಳಿದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಚಿಗಟೇರಿ ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ. ನೀಲಾಂಬಿಕೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ವೈದ್ಯಕೀಯ ನಿರ್ದೇಶಕ ಡಾ.ಬಿ. ಮಂಜುನಾಥ್, ವಿಚಕ್ಷಣಾಧಿಕಾರಿ ಡಾ.ಎಸ್. ರಾಜಣ್ಣ, ಜಿಲ್ಲಾ ಸಂಯೋಜಕ ಎಂ.ಎಂ. ಮೋಹನ್ ಅವರೂ ಇದ್ದರು.</p>.<p>ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ 150 ಮಂದಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p>* * *</p>.<p class="Briefhead"><strong>ಫಲಾನುಭವಿಗಳು ಯಾರು?<br />ಅರ್ಹ ರೋಗಿಗಳು:</strong> 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಪ್ರಕಾರ ಅರ್ಹತೆ ಪಡೆದ, ರಾಜ್ಯದಲ್ಲಿ ವಾಸವಿರುವ ಕುಟುಂಬದ ಸದಸ್ಯರು (ಬಿಪಿಎಲ್ ಪಡಿತರ ಚೀಟಿ ಪಡೆದವರು).</p>.<p><strong>ಸಾಮಾನ್ಯ ರೋಗಿಗಳು:</strong> ಎಪಿಎಲ್ ಪಡಿತರ ಚೀಟಿ ಹೊಂದಿರುವವರು, ಆಹಾರ ಭದ್ರತಾ ಕಾಯ್ದೆಯಡಿ ಸೌಲಭ್ಯ ಪಡೆಯಲು ಸಾಧ್ಯವಾಗದವರು.</p>.<p class="Briefhead"><strong>ಸರ್ಕಾರದಿಂದ ಸಿಗುವ ವೈದ್ಯಕೀಯ ವೆಚ್ಚ<br />ಅರ್ಹತಾ ರೋಗಿಗಳು:</strong> ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಪ್ರತಿ ವರ್ಷಕ್ಕೆ ಕುಟುಂಬಕ್ಕೆ ₹ 5 ಲಕ್ಷವನ್ನು ಸರ್ಕಾರದಿಂದ ಭರಿಸಲಾಗುವುದು.</p>.<p><strong>ಸಾಮಾನ್ಯ ರೋಗಿಗಳು: </strong>ಎಪಿಎಲ್ ಪಡಿತರ ಚೀಟಿ ಹೊಂದಿರುವವರಿಗೂ ಸಹಪಾವತಿ ಆಧಾರದ ಮೇಲೆ ಚಿಕಿತ್ಸೆ ಪಡೆಯಲು ಅವಕಾಶವಿದೆ. ಪ್ಯಾಕೇಜ್ ದರಗಳ ಶೇ 30ರಷ್ಟನ್ನು ಸರ್ಕಾರ ಕೊಡಲಿದೆ. ಉಳಿದ ಶೇ 70ರಷ್ಟನ್ನು ರೋಗಿ ಪಾವತಿಸಬೇಕು. ಒಟ್ಟಾರೆ ಒಂದು ಕುಟುಂಬಕ್ಕೆ ಒಂದು ವರ್ಷಕ್ಕೆ ಸರ್ಕಾರ ₹ 1.5 ಲಕ್ಷ ಮೀಸಲಿಡಲಿದೆ.</p>.<p>ಅರ್ಹತಾ ಮತ್ತು ಸಾಮಾನ್ಯ ರೋಗಿಗಳ ಚಿಕಿತ್ಸೆಗೆ ರಾಜ್ಯ ಸರ್ಕಾರ ಶೇ 40ರಷ್ಟು ಹಾಗೂ ಕೇಂದ್ರ ಸರ್ಕಾರ ಶೇ 60ರಷ್ಟು ಹಣವನ್ನು ಫಲಾನುಭವಿಗಳ ಚಿಕಿತ್ಸೆಗಾಗಿ ಪಾವತಿಸಲಾಗುತ್ತದೆ.</p>.<p><strong>ರೋಗಿಗಳ ನೋಂದಣಿ ಹೇಗೆ?</strong><br />ಅರ್ಹ ಫಲಾನುಭವಿಗಳು ಸಾರ್ವಜನಿಕ ಆಸ್ಪತ್ರೆಗಳಲ್ಲಿ ನೋಂದಣಿ ಮಾಡಿಸಿಕೊಂಡು ಹೆಲ್ತ್ ಕಾರ್ಡ್ ಪಡೆಯಬೇಕು. ಈ ಕಾರ್ಡ್ ಜತೆಗೆ ಆಧಾರ್ ಸಂಖ್ಯೆ, ಮತದಾರರ ಗುರುತಿನ ಚೀಟಿ ನೀಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ನೋಂದಣಿ ಮಾಡಿಸಿಕೊಳ್ಳಬಹುದು.</p>.<p>ಸರ್ಕಾರಿ ಆಸ್ಪತ್ರೆಗಳ ವೈದ್ಯರು ಶಿಫಾರಸು ಮಾಡಿದರಷ್ಟೇ ಯೋಜನೆಯಡಿ ನೋಂದಾಯಿಸಿರುವ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿದೆ.</p>.<p>ತುರ್ತು ಸಂದರ್ಭದಲ್ಲಿ ಮಾತ್ರ ನೇರವಾಗಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅವಕಾಶವಿದೆ.</p>.<p>*<br />ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಡಿ 62 ಲಕ್ಷ ಕುಟುಂಬಗಳಿಗೆ ಸೌಲಭ್ಯ ಸಿಗುತ್ತಿತ್ತು. ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಸಂಯುಕ್ತ ಯೋಜನೆಯಡಿಯೂ ಇಷ್ಟೇ ಕುಟುಂಬಗಳಿಗೆ ಆರೋಗ್ಯ ಸೇವೆ ನೀಡಲಾಗುವುದು.<br /><em><strong>–ಡಾ.ಬಿ. ಮಂಜುನಾಥ್, ವೈದ್ಯಕೀಯ ನಿರ್ದೇಶಕ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಯಡಿ ಫಲಾನುಭವಿಗಳಿಗೆ ಚಿಕಿತ್ಸೆ ಒದಗಿಸಲು ಜಿಲ್ಲೆಯಲ್ಲಿ 13 ಸರ್ಕಾರಿ ಹಾಗೂ 27 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಸಿಕೊಂಡಿದ್ದು, ಆರೋಗ್ಯ ಸೇವೆ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಎಸ್. ತ್ರಿಪುಲಾಂಭ ತಿಳಿಸಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಶನಿವಾರ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಸಂಯೋಜಿತ ಯೋಜನೆ ಕುರಿತು ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಹಾಗೂ ವೈದ್ಯರಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯಡಿ ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆ ಇನ್ನೂ ನಡೆಯಬೇಕಿದೆ. ಈ ಕಾರ್ಯ ಪೂರ್ಣಗೊಂಡರೆ ಯೋಜನೆಯ ಅನುಷ್ಠಾನ ಪರಿಣಾಮಕಾರಿಯಾಗಿ ಆರಂಭಗೊಳ್ಳಲಿದೆ ಎಂದರು.</p>.<p>ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪಬೇಕಾದರೆ ಆಸ್ಪತ್ರೆಗಳ ಆಡಳಿತ ಮಂಡಳಿ ಮತ್ತು ವೈದ್ಯರ ಪಾತ್ರ ಮಹತ್ವದ್ದಾಗಿರುತ್ತದೆ. ಹೀಗಾಗಿ, ಆಯುಷ್ಮಾನ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಗಳ ನಿಯಮಾವಳಿಗಳನ್ನು ಸರಿಯಾಗಿ ತಿಳಿದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.</p>.<p>ಚಿಗಟೇರಿ ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ. ನೀಲಾಂಬಿಕೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ವೈದ್ಯಕೀಯ ನಿರ್ದೇಶಕ ಡಾ.ಬಿ. ಮಂಜುನಾಥ್, ವಿಚಕ್ಷಣಾಧಿಕಾರಿ ಡಾ.ಎಸ್. ರಾಜಣ್ಣ, ಜಿಲ್ಲಾ ಸಂಯೋಜಕ ಎಂ.ಎಂ. ಮೋಹನ್ ಅವರೂ ಇದ್ದರು.</p>.<p>ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ 150 ಮಂದಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p>* * *</p>.<p class="Briefhead"><strong>ಫಲಾನುಭವಿಗಳು ಯಾರು?<br />ಅರ್ಹ ರೋಗಿಗಳು:</strong> 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಪ್ರಕಾರ ಅರ್ಹತೆ ಪಡೆದ, ರಾಜ್ಯದಲ್ಲಿ ವಾಸವಿರುವ ಕುಟುಂಬದ ಸದಸ್ಯರು (ಬಿಪಿಎಲ್ ಪಡಿತರ ಚೀಟಿ ಪಡೆದವರು).</p>.<p><strong>ಸಾಮಾನ್ಯ ರೋಗಿಗಳು:</strong> ಎಪಿಎಲ್ ಪಡಿತರ ಚೀಟಿ ಹೊಂದಿರುವವರು, ಆಹಾರ ಭದ್ರತಾ ಕಾಯ್ದೆಯಡಿ ಸೌಲಭ್ಯ ಪಡೆಯಲು ಸಾಧ್ಯವಾಗದವರು.</p>.<p class="Briefhead"><strong>ಸರ್ಕಾರದಿಂದ ಸಿಗುವ ವೈದ್ಯಕೀಯ ವೆಚ್ಚ<br />ಅರ್ಹತಾ ರೋಗಿಗಳು:</strong> ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಪ್ರತಿ ವರ್ಷಕ್ಕೆ ಕುಟುಂಬಕ್ಕೆ ₹ 5 ಲಕ್ಷವನ್ನು ಸರ್ಕಾರದಿಂದ ಭರಿಸಲಾಗುವುದು.</p>.<p><strong>ಸಾಮಾನ್ಯ ರೋಗಿಗಳು: </strong>ಎಪಿಎಲ್ ಪಡಿತರ ಚೀಟಿ ಹೊಂದಿರುವವರಿಗೂ ಸಹಪಾವತಿ ಆಧಾರದ ಮೇಲೆ ಚಿಕಿತ್ಸೆ ಪಡೆಯಲು ಅವಕಾಶವಿದೆ. ಪ್ಯಾಕೇಜ್ ದರಗಳ ಶೇ 30ರಷ್ಟನ್ನು ಸರ್ಕಾರ ಕೊಡಲಿದೆ. ಉಳಿದ ಶೇ 70ರಷ್ಟನ್ನು ರೋಗಿ ಪಾವತಿಸಬೇಕು. ಒಟ್ಟಾರೆ ಒಂದು ಕುಟುಂಬಕ್ಕೆ ಒಂದು ವರ್ಷಕ್ಕೆ ಸರ್ಕಾರ ₹ 1.5 ಲಕ್ಷ ಮೀಸಲಿಡಲಿದೆ.</p>.<p>ಅರ್ಹತಾ ಮತ್ತು ಸಾಮಾನ್ಯ ರೋಗಿಗಳ ಚಿಕಿತ್ಸೆಗೆ ರಾಜ್ಯ ಸರ್ಕಾರ ಶೇ 40ರಷ್ಟು ಹಾಗೂ ಕೇಂದ್ರ ಸರ್ಕಾರ ಶೇ 60ರಷ್ಟು ಹಣವನ್ನು ಫಲಾನುಭವಿಗಳ ಚಿಕಿತ್ಸೆಗಾಗಿ ಪಾವತಿಸಲಾಗುತ್ತದೆ.</p>.<p><strong>ರೋಗಿಗಳ ನೋಂದಣಿ ಹೇಗೆ?</strong><br />ಅರ್ಹ ಫಲಾನುಭವಿಗಳು ಸಾರ್ವಜನಿಕ ಆಸ್ಪತ್ರೆಗಳಲ್ಲಿ ನೋಂದಣಿ ಮಾಡಿಸಿಕೊಂಡು ಹೆಲ್ತ್ ಕಾರ್ಡ್ ಪಡೆಯಬೇಕು. ಈ ಕಾರ್ಡ್ ಜತೆಗೆ ಆಧಾರ್ ಸಂಖ್ಯೆ, ಮತದಾರರ ಗುರುತಿನ ಚೀಟಿ ನೀಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ನೋಂದಣಿ ಮಾಡಿಸಿಕೊಳ್ಳಬಹುದು.</p>.<p>ಸರ್ಕಾರಿ ಆಸ್ಪತ್ರೆಗಳ ವೈದ್ಯರು ಶಿಫಾರಸು ಮಾಡಿದರಷ್ಟೇ ಯೋಜನೆಯಡಿ ನೋಂದಾಯಿಸಿರುವ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿದೆ.</p>.<p>ತುರ್ತು ಸಂದರ್ಭದಲ್ಲಿ ಮಾತ್ರ ನೇರವಾಗಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅವಕಾಶವಿದೆ.</p>.<p>*<br />ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಡಿ 62 ಲಕ್ಷ ಕುಟುಂಬಗಳಿಗೆ ಸೌಲಭ್ಯ ಸಿಗುತ್ತಿತ್ತು. ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಸಂಯುಕ್ತ ಯೋಜನೆಯಡಿಯೂ ಇಷ್ಟೇ ಕುಟುಂಬಗಳಿಗೆ ಆರೋಗ್ಯ ಸೇವೆ ನೀಡಲಾಗುವುದು.<br /><em><strong>–ಡಾ.ಬಿ. ಮಂಜುನಾಥ್, ವೈದ್ಯಕೀಯ ನಿರ್ದೇಶಕ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>