ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕ ಅರಕೆರೆ: ಸಿಡಿಲಿಗೆ ರೈತ ಸಾವು

Last Updated 27 ಏಪ್ರಿಲ್ 2022, 4:14 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನ ಚಿಕ್ಕಅರಕೆರೆ ಗ್ರಾಮದಲ್ಲಿ ಜಮೀನಿನಲ್ಲಿ ಶೇಂಗಾ ಕಟಾವು ಮಾಡುತ್ತಿದ್ದ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಸೋಮವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ರಾಮದ ರಾಜಪ್ಪ (42) ಮೃತರು. ಹೊಲದಲ್ಲಿ ಶೇಂಗಾ ಕಟಾವು ಮಾಡುತ್ತಿದ್ದಾಗ ಭಾರಿ ಗುಡುಗು ಸಿಡಿಲಿನ ಹೊಡೆತಕ್ಕೆ ರಾಜಪ್ಪ ಸಾವನ್ನಪ್ಪಿದ್ದಾರೆ.

ಮೃತ ರಾಜಪ್ಪ ಅವರಿಗೆ ಇಬ್ಬರು ಮಕ್ಕಳು ಹಾಗು ಪತ್ನಿ ಇದ್ದಾರೆ. 3 ತಿಂಗಳ ಹಿಂದೆ ರಾಜಪ್ಪನ ತಂದೆ ಮತ್ತು ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದೀಗ ರಾಜಪ್ಪ ಸಾವಿನಿಂದ ಕುಟುಂಬ ಕಂಗಾಲಾಗಿದೆ.

ಬಿಳಿಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT