<p><strong>ಮಲೇಬೆನ್ನೂರು</strong>: ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹೋಬಳಿ ವ್ಯಾಪ್ತಿಯ ಹಲವೆಡೆ ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಮೆಕ್ಕೆ ಜೋಳದ ಹೊಲ, ಭತ್ತದಗದ್ದೆ, ತಂಗು, ಅಡಿಕೆ ತೋಟ ಜಲಾವೃತವಾಗಿವೆ.</p>.<p>4 ಗಂಟೆಗೂ ಹೆಚ್ಚುಕಾಲ ಎಡಬಿಡದೆ ಮಳೆಯಾಗಿದ್ದು, ಹಳ್ಳದಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದೆ ಎಂದು ರೈತ ಜಿಗಳಿ ಹನುಮಗೌಡ ಮಾಹಿತಿ ನೀಡಿದರು.</p>.<p>ಕಟಾವಿಗೆ ಸಿದ್ಧವಾಗಿದ್ದ ಮೆಕ್ಕೆಜೋಳ ತೊಯ್ದು ತೊಪ್ಪೆಯಾಗಿದ್ದು, ಹೊಲದೊಳಗೆ ಕಾಲಿಡಲು ಸಾಧ್ಯವಾಗುತ್ತಿಲ್ಲ. ತೆನೆ ಮೊಳಕೆ ಬರುವ ಪರಿಸ್ಥಿತಿ ಎದುರಾಗಿದೆ ಎಂದು ಕೊಪ್ಪದ ಬೀರಪ್ಪ ಬೇಸರ ವ್ಯಕ್ತಪಡಿಸಿದರು.</p>.<p>ಮಳೆಯಿಂದ ಭತ್ತಕ್ಕೆ ಕಾಡುತ್ತಿದ್ದ ರೋಗ ನಿಯಂತ್ರಣಕ್ಕೆ ಬಂದಿದೆ ಎಂದು ಕುಂಬಳೂರಿನ ಶರಣ ಮುದ್ದಣ ಸಾವಯವ ಕೃಷಿಕರ ಬಳಗದ ಸಂಚಾಲಕ ಆಂಜನೇಯ ತಿಳಿಸಿದರು.</p>.<p>ಚೆನ್ನಾಗಿ ಬಿಸಿಲು ಬಿದ್ದು ನಂತರ ಮಳೆಯಾಗುತ್ತಿರುವುದರಿಂದ ಅಡಿಕೆ ತೋಟಕ್ಕೆ ಅನುಕೂಲವಾಗಿದೆ. ತೆಂಗಿನ ಬೆಳೆಗೆ ಕಾಡುವ ನುಸಿ ಪೀಡೆ ನಿಯಂತ್ರಣಕ್ಕೆ ಸಹಕಾರಿಯಾಗಿದೆ ಕುಂಬಳೂರಿನ ಚಂದ್ರು ತಿಳಿಸಿದರು.</p>.<p>ಸೂಳೆಕೆರೆ, ಸಂಕ್ಲೀಪುರದ ಹಳ್ಳ, ಭದ್ರಾ ನಾಲೆ ಭರ್ತಿಯಾಗಿ ಹರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು</strong>: ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹೋಬಳಿ ವ್ಯಾಪ್ತಿಯ ಹಲವೆಡೆ ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಮೆಕ್ಕೆ ಜೋಳದ ಹೊಲ, ಭತ್ತದಗದ್ದೆ, ತಂಗು, ಅಡಿಕೆ ತೋಟ ಜಲಾವೃತವಾಗಿವೆ.</p>.<p>4 ಗಂಟೆಗೂ ಹೆಚ್ಚುಕಾಲ ಎಡಬಿಡದೆ ಮಳೆಯಾಗಿದ್ದು, ಹಳ್ಳದಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದೆ ಎಂದು ರೈತ ಜಿಗಳಿ ಹನುಮಗೌಡ ಮಾಹಿತಿ ನೀಡಿದರು.</p>.<p>ಕಟಾವಿಗೆ ಸಿದ್ಧವಾಗಿದ್ದ ಮೆಕ್ಕೆಜೋಳ ತೊಯ್ದು ತೊಪ್ಪೆಯಾಗಿದ್ದು, ಹೊಲದೊಳಗೆ ಕಾಲಿಡಲು ಸಾಧ್ಯವಾಗುತ್ತಿಲ್ಲ. ತೆನೆ ಮೊಳಕೆ ಬರುವ ಪರಿಸ್ಥಿತಿ ಎದುರಾಗಿದೆ ಎಂದು ಕೊಪ್ಪದ ಬೀರಪ್ಪ ಬೇಸರ ವ್ಯಕ್ತಪಡಿಸಿದರು.</p>.<p>ಮಳೆಯಿಂದ ಭತ್ತಕ್ಕೆ ಕಾಡುತ್ತಿದ್ದ ರೋಗ ನಿಯಂತ್ರಣಕ್ಕೆ ಬಂದಿದೆ ಎಂದು ಕುಂಬಳೂರಿನ ಶರಣ ಮುದ್ದಣ ಸಾವಯವ ಕೃಷಿಕರ ಬಳಗದ ಸಂಚಾಲಕ ಆಂಜನೇಯ ತಿಳಿಸಿದರು.</p>.<p>ಚೆನ್ನಾಗಿ ಬಿಸಿಲು ಬಿದ್ದು ನಂತರ ಮಳೆಯಾಗುತ್ತಿರುವುದರಿಂದ ಅಡಿಕೆ ತೋಟಕ್ಕೆ ಅನುಕೂಲವಾಗಿದೆ. ತೆಂಗಿನ ಬೆಳೆಗೆ ಕಾಡುವ ನುಸಿ ಪೀಡೆ ನಿಯಂತ್ರಣಕ್ಕೆ ಸಹಕಾರಿಯಾಗಿದೆ ಕುಂಬಳೂರಿನ ಚಂದ್ರು ತಿಳಿಸಿದರು.</p>.<p>ಸೂಳೆಕೆರೆ, ಸಂಕ್ಲೀಪುರದ ಹಳ್ಳ, ಭದ್ರಾ ನಾಲೆ ಭರ್ತಿಯಾಗಿ ಹರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>