ಸಂಘದ ರಾಜ್ಯಾಧ್ಯಕ್ಷ ಡಾ.ಆರ್. ಶಂಕರ್, ‘ರಾಜ್ಯದ 22 ಜಿಲ್ಲೆಗಳಲ್ಲಿ ಸಂಘಟನೆಗಳಿಗೆ ಚಾಲನೆ ನೀಡಲಾಗಿದೆ. ಅನಾರೋಗ್ಯಕ್ಕೆ ತುತ್ತಾದ ಬಡ ಕಲಾವಿದರಿಗೆ ರಾಜ್ಯ ಸಂಘದ ಮೂಲಕ ₹ 10 ಸಾವಿರ ವಿತರಿಸಲಾಗಿದೆ. ಸಂಘದ ಸದಸ್ಯರಾದವರಿಗೆ ವಿಮೆ, ಸಾಲಸೌಲಭ್ಯ ಕಲ್ಪಿಸಲಾಗುತ್ತದೆ. ಸರ್ಕಾರದ ಸವಲತ್ತುಗಳನ್ನು ದೊಡ್ಡ ದೊಡ್ಡ ಕಲಾವಿದರೇ ಪಡೆಯುತ್ತಿದ್ದಾರೆ. ಎಲ್ಲ ಊರುಗಳಲ್ಲಿ ಇರುವ ಬಡ ಕಲಾವಿದರಿಗೂ ತಲುಪಿಸಲು ಶ್ರಮಿಸಬೇಕು’ ಎಂದರು.