<p><strong>ದಾವಣಗೆರೆ</strong>: ಕೊರೊನಾ ಎಂಬ ಸೋಂಕು ಕೆಲವರ ಜೀವ, ಹಲವರ ಜೀವನವನ್ನು ಕಸಿದುಕೊಂಡಿದೆ. ಕಲಾವಿದರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅಂಥವರ ನೆರವಿಗೆ ಸಂಘ, ಸರ್ಕಾರ ಬರಬೇಕು ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.</p>.<p>ದಾವಣಗೆರೆಯ ಪಾಲಿಕೆ ಕಚೇರಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಕರ್ನಾಟಕ ವಾದ್ಯಗೋಷ್ಠಿ ಕಲಾವಿದರ ಮಹಾ ಸಂಘದ ಜಿಲ್ಲಾ ಘಟಕ ಉದ್ಘಾಟನೆ, ಎಸ್.ಪಿ. ಬಾಲಸುಬ್ರಹ್ಮಣ್ಯ ಮತ್ತು ರಾಜನ್ ನಾಗೇಂದ್ರ ಅವರ ಸ್ಮರಣಾರ್ಥವಾಗಿ ಆಯೋಜಿಸಿದ್ದ ಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಾದ್ಯಗೋಷ್ಠಿಯ ರಾಜ್ಯ ಮತ್ತು ಜಿಲ್ಲಾ ಘಟಕ ಆರಂಭಗೊಂಡಿರುವುದು ಉತ್ತಮ ವಿಚಾರ. ಎಲ್ಲರೂ ಸಂಘಟಿತರಾಗಿ ಸರ್ಕಾರದ ಮುಂದೆ ಸಮಸ್ಯೆಗಳನ್ನು ಇಡಲು ಸಾಧ್ಯವಾದರೆ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.</p>.<p>ಸಂಘದ ರಾಜ್ಯಾಧ್ಯಕ್ಷ ಡಾ.ಆರ್. ಶಂಕರ್, ‘ರಾಜ್ಯದ 22 ಜಿಲ್ಲೆಗಳಲ್ಲಿ ಸಂಘಟನೆಗಳಿಗೆ ಚಾಲನೆ ನೀಡಲಾಗಿದೆ. ಅನಾರೋಗ್ಯಕ್ಕೆ ತುತ್ತಾದ ಬಡ ಕಲಾವಿದರಿಗೆ ರಾಜ್ಯ ಸಂಘದ ಮೂಲಕ ₹ 10 ಸಾವಿರ ವಿತರಿಸಲಾಗಿದೆ. ಸಂಘದ ಸದಸ್ಯರಾದವರಿಗೆ ವಿಮೆ, ಸಾಲಸೌಲಭ್ಯ ಕಲ್ಪಿಸಲಾಗುತ್ತದೆ. ಸರ್ಕಾರದ ಸವಲತ್ತುಗಳನ್ನು ದೊಡ್ಡ ದೊಡ್ಡ ಕಲಾವಿದರೇ ಪಡೆಯುತ್ತಿದ್ದಾರೆ. ಎಲ್ಲ ಊರುಗಳಲ್ಲಿ ಇರುವ ಬಡ ಕಲಾವಿದರಿಗೂ ತಲುಪಿಸಲು ಶ್ರಮಿಸಬೇಕು’ ಎಂದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ಎಸ್.ಟಿ. ವೀರೇಶ್, ಮಾಜಿ ಮೇಯರ್ ಬಿ.ಜಿ. ಅಜಯ್ಕುಮಾರ್, ಉಪನ್ಯಾಸಕರಾದ ಡಾ.ಎಚ್. ವಿಶ್ವನಾಥ್, ಡಾ.ಎ.ಬಿ. ರಾಮಚಂದ್ರಪ್ಪ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೊರೊನಾ ಎಂಬ ಸೋಂಕು ಕೆಲವರ ಜೀವ, ಹಲವರ ಜೀವನವನ್ನು ಕಸಿದುಕೊಂಡಿದೆ. ಕಲಾವಿದರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅಂಥವರ ನೆರವಿಗೆ ಸಂಘ, ಸರ್ಕಾರ ಬರಬೇಕು ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.</p>.<p>ದಾವಣಗೆರೆಯ ಪಾಲಿಕೆ ಕಚೇರಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಅಖಿಲ ಕರ್ನಾಟಕ ವಾದ್ಯಗೋಷ್ಠಿ ಕಲಾವಿದರ ಮಹಾ ಸಂಘದ ಜಿಲ್ಲಾ ಘಟಕ ಉದ್ಘಾಟನೆ, ಎಸ್.ಪಿ. ಬಾಲಸುಬ್ರಹ್ಮಣ್ಯ ಮತ್ತು ರಾಜನ್ ನಾಗೇಂದ್ರ ಅವರ ಸ್ಮರಣಾರ್ಥವಾಗಿ ಆಯೋಜಿಸಿದ್ದ ಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಾದ್ಯಗೋಷ್ಠಿಯ ರಾಜ್ಯ ಮತ್ತು ಜಿಲ್ಲಾ ಘಟಕ ಆರಂಭಗೊಂಡಿರುವುದು ಉತ್ತಮ ವಿಚಾರ. ಎಲ್ಲರೂ ಸಂಘಟಿತರಾಗಿ ಸರ್ಕಾರದ ಮುಂದೆ ಸಮಸ್ಯೆಗಳನ್ನು ಇಡಲು ಸಾಧ್ಯವಾದರೆ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.</p>.<p>ಸಂಘದ ರಾಜ್ಯಾಧ್ಯಕ್ಷ ಡಾ.ಆರ್. ಶಂಕರ್, ‘ರಾಜ್ಯದ 22 ಜಿಲ್ಲೆಗಳಲ್ಲಿ ಸಂಘಟನೆಗಳಿಗೆ ಚಾಲನೆ ನೀಡಲಾಗಿದೆ. ಅನಾರೋಗ್ಯಕ್ಕೆ ತುತ್ತಾದ ಬಡ ಕಲಾವಿದರಿಗೆ ರಾಜ್ಯ ಸಂಘದ ಮೂಲಕ ₹ 10 ಸಾವಿರ ವಿತರಿಸಲಾಗಿದೆ. ಸಂಘದ ಸದಸ್ಯರಾದವರಿಗೆ ವಿಮೆ, ಸಾಲಸೌಲಭ್ಯ ಕಲ್ಪಿಸಲಾಗುತ್ತದೆ. ಸರ್ಕಾರದ ಸವಲತ್ತುಗಳನ್ನು ದೊಡ್ಡ ದೊಡ್ಡ ಕಲಾವಿದರೇ ಪಡೆಯುತ್ತಿದ್ದಾರೆ. ಎಲ್ಲ ಊರುಗಳಲ್ಲಿ ಇರುವ ಬಡ ಕಲಾವಿದರಿಗೂ ತಲುಪಿಸಲು ಶ್ರಮಿಸಬೇಕು’ ಎಂದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ಎಸ್.ಟಿ. ವೀರೇಶ್, ಮಾಜಿ ಮೇಯರ್ ಬಿ.ಜಿ. ಅಜಯ್ಕುಮಾರ್, ಉಪನ್ಯಾಸಕರಾದ ಡಾ.ಎಚ್. ವಿಶ್ವನಾಥ್, ಡಾ.ಎ.ಬಿ. ರಾಮಚಂದ್ರಪ್ಪ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>