‘ವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಹೆಸ್ಕಾಂ ನಗರಗಳು, ಕೈಗಾರಿಕಾ ಪ್ರದೇಶಗಳು, ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಹದ್ದಿನ ಕಣ್ಣಿಟ್ಟಿದೆ. ಆದರೂ, ಕೆಲವರು ರಾತ್ರಿಯಾಗುತ್ತಲೇ ಕೃತ್ಯ ಎಸಗುತ್ತಾರೆ. ಈ ಕುರಿತು ಸಿಗುವ ನಿಖರ ಮಾಹಿತಿ ಮೇರೆಗೆ ಸಿಬ್ಬಂದಿ ದಾಳಿ ನಡೆಸಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗುತ್ತದೆ’ ಎಂದು ಹೇಳಿದರು.