<p><strong>ದಾವಣಗೆರೆ:</strong> ಲೋಕ ಅದಾಲತ್ನಲ್ಲಿ ಹೆಚ್ಚಿನ ಪ್ರಕರಣಗಳನ್ನು ಯಶಸ್ವಿ ಹಾಗೂ ಶಾಂತಿಯುತವಾಗಿ ಇತ್ಯರ್ಥ ಪಡಿಸಿದ್ದಕ್ಕಾಗಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಕ್ಷರಾದ ಜಿ. ನರೇಂದ್ರ ಅವರು ಜಿಲ್ಲಾ ವಕೀಲರ ಸಂಘಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p><p>ಜಿಲ್ಲಾ ವಕೀಲರ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಅವರು ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ಕುಮಾರ್ ಅವರಿಗೆ ಪ್ರಶಂಸಾ ಪತ್ರವನ್ನು ಹಸ್ತಾಂತರಿಸಿ ಅವರು ಮಾತನಾಡಿದರು.</p><p>‘ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ದಾವಣಗೆರೆ ವಕೀಲರ ಸಂಘದ ಸದಸ್ಯರು ಸಂಪೂರ್ಣ ಸಹಕಾರ ನೀಡಿದ್ದಾರೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರಣ್ಣನವರ್ ತಿಳಿಸಿದರು.</p><p>‘ಭಾರತದ ನ್ಯಾಯಾಂಗ ವ್ಯವಸ್ಥೆಯು ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಕೈಗೊಳ್ಳುವ ಎಲ್ಲಾ ಕಾರ್ಯಗಳಿಗೂ ಸಂಘದ ಸಂಪೂರ್ಣ ಸಹಕಾರವಿದೆ. ಯಶಸ್ವಿ ಹಾಗೂ ಶಾಂತಿಯುತ ಲೋಕ್ ಅದಾಲತ್ಗೆ ದಾವಣಗೆರೆಯ ಎಲ್ಲಾ ನ್ಯಾಯಾಧೀಶರು ಸಹಕಾರ ನೀಡುತ್ತಾರೆ’ ಎಂದು ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ಕುಮಾರ್ ತಿಳಿಸಿದರು.</p><p>ನ್ಯಾಯಾಧೀಶರಾದ ವಿಜಯಾನಂದ, ದಶರಥ್, ಶ್ರೀಪಾದ್, ಪ್ರವೀಣ್ಕುಮಾರ್, ಶಿವಪ್ಪ ಸಲಗೆರೆ, ನಿವೇದಿತಾ, ರೇಷ್ಮಾ, ಅಫ್ತಾಬ್, ಸಮೀರ್ ಕೊಳ್ಳಿ, ಪ್ರಶಾಂತ್, ಮಲ್ಲಿಕಾರ್ಜುನ್, ಸಿದ್ಧರಾಜು, ನಾಜಿಯಾ ಕೌಸರ್, ಸಂಘದ ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ , ಕಾರ್ಯಕಾರಿ ಸಮಿತಿ ಸದಸ್ಯರಾದ ವಾಗೀಶ್ ಕಟಗಿಹಳ್ಳಿ ಮಠ, ಮಧುಸೂದನ್, ಅಜಯ್ಕುಮಾರ್, ಭಾಗ್ಯಲಕ್ಷ್ಮೀ, ಚೌಡಪ್ಪ, ನಾಗರಾಜ್ ಎಲ್. ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಲೋಕ ಅದಾಲತ್ನಲ್ಲಿ ಹೆಚ್ಚಿನ ಪ್ರಕರಣಗಳನ್ನು ಯಶಸ್ವಿ ಹಾಗೂ ಶಾಂತಿಯುತವಾಗಿ ಇತ್ಯರ್ಥ ಪಡಿಸಿದ್ದಕ್ಕಾಗಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಕ್ಷರಾದ ಜಿ. ನರೇಂದ್ರ ಅವರು ಜಿಲ್ಲಾ ವಕೀಲರ ಸಂಘಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p><p>ಜಿಲ್ಲಾ ವಕೀಲರ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಅವರು ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ಕುಮಾರ್ ಅವರಿಗೆ ಪ್ರಶಂಸಾ ಪತ್ರವನ್ನು ಹಸ್ತಾಂತರಿಸಿ ಅವರು ಮಾತನಾಡಿದರು.</p><p>‘ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ದಾವಣಗೆರೆ ವಕೀಲರ ಸಂಘದ ಸದಸ್ಯರು ಸಂಪೂರ್ಣ ಸಹಕಾರ ನೀಡಿದ್ದಾರೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರಣ್ಣನವರ್ ತಿಳಿಸಿದರು.</p><p>‘ಭಾರತದ ನ್ಯಾಯಾಂಗ ವ್ಯವಸ್ಥೆಯು ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಕೈಗೊಳ್ಳುವ ಎಲ್ಲಾ ಕಾರ್ಯಗಳಿಗೂ ಸಂಘದ ಸಂಪೂರ್ಣ ಸಹಕಾರವಿದೆ. ಯಶಸ್ವಿ ಹಾಗೂ ಶಾಂತಿಯುತ ಲೋಕ್ ಅದಾಲತ್ಗೆ ದಾವಣಗೆರೆಯ ಎಲ್ಲಾ ನ್ಯಾಯಾಧೀಶರು ಸಹಕಾರ ನೀಡುತ್ತಾರೆ’ ಎಂದು ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ಕುಮಾರ್ ತಿಳಿಸಿದರು.</p><p>ನ್ಯಾಯಾಧೀಶರಾದ ವಿಜಯಾನಂದ, ದಶರಥ್, ಶ್ರೀಪಾದ್, ಪ್ರವೀಣ್ಕುಮಾರ್, ಶಿವಪ್ಪ ಸಲಗೆರೆ, ನಿವೇದಿತಾ, ರೇಷ್ಮಾ, ಅಫ್ತಾಬ್, ಸಮೀರ್ ಕೊಳ್ಳಿ, ಪ್ರಶಾಂತ್, ಮಲ್ಲಿಕಾರ್ಜುನ್, ಸಿದ್ಧರಾಜು, ನಾಜಿಯಾ ಕೌಸರ್, ಸಂಘದ ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ , ಕಾರ್ಯಕಾರಿ ಸಮಿತಿ ಸದಸ್ಯರಾದ ವಾಗೀಶ್ ಕಟಗಿಹಳ್ಳಿ ಮಠ, ಮಧುಸೂದನ್, ಅಜಯ್ಕುಮಾರ್, ಭಾಗ್ಯಲಕ್ಷ್ಮೀ, ಚೌಡಪ್ಪ, ನಾಗರಾಜ್ ಎಲ್. ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>