ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಅಮೃತ ಮಹೋತ್ಸವ: ಹೆದ್ದಾರಿ ಬಂದ್

Last Updated 3 ಆಗಸ್ಟ್ 2022, 12:42 IST
ಅಕ್ಷರ ಗಾತ್ರ

ದಾವಣಗೆರೆ: ಸಿದ್ದರಾಮಯ್ಯ–75 ಅಮೃತ ಮಹೋತ್ಸವಕ್ಕೆ ಜನಸಾಗರವೇ ಹರಿದು ಬಂದಿತ್ತು. ಬೆಳಿಗ್ಗೆಯಿಂದಲೇ ಬಸ್‌, ವ್ಯಾನ್‌ ಹಾಗೂ ದ್ವಿಚಕ್ರವಾಹನಗಳಲ್ಲಿ ಬಂದಿದ್ದರಿಂದ ರಾಷ್ಟ್ರೀಯ ಹೆದ್ದಾರಿ–48 ಬಂದ್ ಆಗಿ ಜನರಿಗೆ ತೊಂದರೆಯಾಯಿತು.

ನಗರದ ಹೊರವಲಯದ ಕುಂದವಾಡದ ಬಳಿ ಇರುವ ಶಾಮನೂರು ಪ್ಯಾಲೇಸ್‌ನಲ್ಲಿ ನಡೆದ ಅಮೃತ ಮಹೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು. ಸಂಚಾರ ಬಂದ್ ಆಗಿದ್ದರಿಂದ ಜನರು ಕಾಲ್ನಡಿಗೆಯಲ್ಲಿ ಹೆದ್ದಾರಿಯಲ್ಲಿ ನಡೆದುಬಂದು ದಾವಣಗೆರೆ ತಲುಪಿದರು. ಆ್ಯಂಬುಲೆನ್ಸ್‌ ಹೋಗಲು ಸಾಧ್ಯವಾಗದೇ ರೋಗಿಗಳು ಸಂಕಷ್ಟ ಅನುಭವಿಸಬೇಕಾಯಿತು.

ಶಾಮನೂರು ಪಾಲೇಸ್ ಮೈದಾನ, ಹೆದ್ದಾರಿಯುದ್ದಕ್ಕೂ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಯವರ ಕಟೌಟ್‌ಗಳು, ಬ್ಯಾನರ್‌ಗಳು ರಾರಾಜಿಸಿದವು. ಮಧ್ಯಾಹ್ನ ಮೂರು ಗಂಟೆಯಾದರೂ ವೇದಿಕೆಯತ್ತ ತಂಡೋಪತಂಡವಾಗಿ ಜನರು ಬರುತ್ತಿದ್ದು, ಮೈದಾನದಲ್ಲಿ ಜನಸ್ತೋಮವೇ ನೆರೆದಿದ್ದು, ಸಿದ್ದರಾಮಯ್ಯ, ರಾಹುಲ್‌ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT