<p><strong>ಕಡರನಾಯ್ಕನಹಳ್ಳಿ</strong>: ಸಮೀಪದ ಹಿಂಡಸಘಟ್ಟಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಡೆಂಗಿ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>ವ್ಯಕ್ತಿಯಲ್ಲಿ ಡೆಂಗಿ ಸೋಂಕು ಇರುವುದನ್ನು ಜಿಲ್ಲಾ ಕೀಟಶಾಸ್ತ್ರಜ್ಞ ಸತೀಶ್ ಮಾಳಗಿ ದೃಢಪಡಿಸಿದರು.</p>.<p>ಮುಂಜಾಗ್ರತಾ ಕ್ರಮವಾಗಿ ಗ್ರಾಮದ ಪುಷ್ಕರಿಣಿಯಲ್ಲಿ ಲಾರ್ವಾಗಳನ್ನು ನಾಶಪಡಿಸುವ ಗಪ್ಪಿ ಮತ್ತು ಗ್ಯಾಂಬೂಶಿಯಾ ಮೀನುಗಳನ್ನು ಬಿಡಲಾಗಿದೆ. ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಲು ವಾಸನ ಗ್ರಾಮ ಪಂಚಾಯಿತಿಗೆ ಸೂಚಿಸಲಾಗಿದೆ ಎಂದು ಕೊಕ್ಕನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅರ್ಚಿತ್ ತಿಳಿಸಿದರು. </p>.<p>ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡಲಾಗಿದೆ. ಸೋಂಕಿತ ವ್ಯಕ್ತಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಗಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರಯ್ಯ ತಿಳಿಸಿದ್ದಾರೆ.</p>.<p>ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿ ಆಂಜನೇಯ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಲ್ಹಾದ, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ಸಮೀಪದ ಹಿಂಡಸಘಟ್ಟಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಡೆಂಗಿ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>ವ್ಯಕ್ತಿಯಲ್ಲಿ ಡೆಂಗಿ ಸೋಂಕು ಇರುವುದನ್ನು ಜಿಲ್ಲಾ ಕೀಟಶಾಸ್ತ್ರಜ್ಞ ಸತೀಶ್ ಮಾಳಗಿ ದೃಢಪಡಿಸಿದರು.</p>.<p>ಮುಂಜಾಗ್ರತಾ ಕ್ರಮವಾಗಿ ಗ್ರಾಮದ ಪುಷ್ಕರಿಣಿಯಲ್ಲಿ ಲಾರ್ವಾಗಳನ್ನು ನಾಶಪಡಿಸುವ ಗಪ್ಪಿ ಮತ್ತು ಗ್ಯಾಂಬೂಶಿಯಾ ಮೀನುಗಳನ್ನು ಬಿಡಲಾಗಿದೆ. ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಲು ವಾಸನ ಗ್ರಾಮ ಪಂಚಾಯಿತಿಗೆ ಸೂಚಿಸಲಾಗಿದೆ ಎಂದು ಕೊಕ್ಕನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅರ್ಚಿತ್ ತಿಳಿಸಿದರು. </p>.<p>ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡಲಾಗಿದೆ. ಸೋಂಕಿತ ವ್ಯಕ್ತಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಗಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರಯ್ಯ ತಿಳಿಸಿದ್ದಾರೆ.</p>.<p>ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿ ಆಂಜನೇಯ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಲ್ಹಾದ, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>