‘ಗ್ರಾಮದಲ್ಲಿ ಆರು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ವಿವಿಧ ಜಾತಿ, ಧರ್ಮಗಳ ಜನರು ಇಲ್ಲಿ ಸಾಮರಸ್ಯದಿಂದ ಬದುಕುತ್ತಿದ್ದೇವೆ. ಇದುವರೆಗೆ ಯಾವುದೇ ಅಹಿತಕರ ಘಟನೆಗಳು ನಡೆಯಲು ಅವಕಾಶ ನೀಡಿಲ್ಲ. ಕೋಮು ಸಾಮರಸ್ಯವನ್ನು ಕದಡುವಂತಹ ಅನೇಕ ಬೆಳವಣಿಗೆಗಳು ನಾಡಿನಲ್ಲಿ ನಡೆಯುತ್ತಿರುವುದನ್ನು ಪತ್ರಿಕೆ, ಟಿ.ವಿ.ಗಳಲ್ಲಿ ಗಮನಿಸುತ್ತಿದ್ದೇವೆ. ರಾಜಕೀಯ ಲಾಭಕ್ಕಾಗಿ ಯಾವುದೇ ಪಕ್ಷ ಅಥವಾ ಸಂಘಟನೆಗಳು ಕಿಡಿಗೇಡಿ ಕೃತ್ಯಗಳನ್ನು ನಡೆಸುವುದು ತಪ್ಪು. ಮುಸ್ಲಿಮರು ಎಲ್ಲಿಂದಲೋ ಬಂದವರಲ್ಲ. ಅವರೂ ಇಲ್ಲಿಯೇ ಹುಟ್ಟಿ, ಬೆಳೆದವರು. ನಮ್ಮಂತೆಯೇ ಅವರೂ ಬದುಕಬೇಕು. ಬಸವಣ್ಣ ಸೇರಿ ಹಲವು ದಾರ್ಶನಿಕರು ಇದನ್ನೇ ಹೇಳಿದ್ದಾರೆ. ಆದರೂ ಅಹಿತಕರ ಘಟನೆಗಳು ನಡೆಯುತ್ತಿರುವುದು ಬೇಸರ ತಂದಿದೆ. ಅದಕ್ಕೆ ನಾವು ಅವಕಾಶ ಮಾಡಿಕೊಡಬಾರದು. ಎಲ್ಲರೂ ಒಟ್ಟಾಗಿ ಬಾಳಬೇಕು’ ಎನ್ನುತ್ತಾರೆ ಆಂಜನೇಯಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರೂ ಆಗಿರುವ ಗ್ರಾಮದ ಕೆ.ಸಿ. ರಾಜಪ್ಪ.