ಸೂರ್ಯೋದಯಕ್ಕೆ ಸರಿಯಾಗಿ ಸ್ವಾಮೀಜಿ ಅವರನ್ನು ಹೊತ್ತ ಪಲ್ಲಕ್ಕಿ ಮಹೋತ್ಸವವು ಮಂಗಳ
ವಾದ್ಯದೊಂದಿಗೆ ಮಠದ ಸಾಕ್ಷಿ ಗಣಪತಿ ಅವರಣಕ್ಕೆ ಆಗಮಿಸಿತು. ಬಳಿಕ ಸ್ವಾಮೀಜಿ ಅವರು ರಥಾರೋಹಣಗೈಯುತ್ತಿದ್ದಂತೆ ನೆರೆದಿದ್ದ ನೂರಾರು ಭಕ್ತರು ‘ಚನ್ನಪ್ಪ ಸ್ವಾಮೀಜಿ ಮಹಾರಾಜ್ ಕೀ ಜೈ, ಒಡೆಯರ್ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿಗೆ ಜೈ, ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂಬ ಜಯಘೋಷಗಳೊಂದಿಗೆ ರಥವನ್ನು ಎಳೆದರು. ರಥವು ಮಠದ ಅವರಣದಲ್ಲಿ ಮುಂದೆ ಸಾಗುತ್ತಿದ್ದಂತೆ ಭಕ್ತರು ಸ್ವಾಮೀಜಿ ಅವರಿಗೆ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಪ್ರಸಾದ ಸೇವೆ ನಡೆಯಿತು.