ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತವರಿನಲ್ಲೇ ಚಿ.ಮೂ ಅಂತ್ಯಕ್ರಿಯೆಗಾಗಿ ಹಿರೇಕೋಗಲೂರು ಗ್ರಾಮಸ್ಥರ ಪ್ರತಿಭಟನೆ

Last Updated 11 ಜನವರಿ 2020, 15:42 IST
ಅಕ್ಷರ ಗಾತ್ರ

ಸಂತೇಬೆನ್ನೂರು: ಖ್ಯಾತ ಸಂಶೋಧಕ ಡಾ.ಎಂ. ಚಿದಾನಂದ ಮೂರ್ತಿ ಅಂತ್ಯಸಂಸ್ಕಾರ ಅವರ ಸ್ವಗ್ರಾಮ ಹಿರೇಕೋಗಲೂರಿನಲ್ಲೇ ನಡೆಯಬೇಕು ಎಂದು ಡಾ.ಚಿದಾನಂದ ಮೂರ್ತಿ ಪ್ರತಿಷ್ಠಾನದ ಸದಸ್ಯರು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಶನಿವಾರ ಗ್ರಾಮದಲ್ಲಿ ಪ್ರತಿಭಟಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ‘ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಸಿದರೆ ಪ್ರಾಮುಖ್ಯತೆ ಇರುತ್ತದೆ. ಇಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ನಾವೆಲ್ಲ ಒಕ್ಕೊರಲಿನ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು’ ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಗದೀಶ್ ಗೌಡ, ‘ತವರೂರಿನಲ್ಲೇ ಅಂತ್ಯಕ್ರಿಯೆ ನಡೆಸಲು ಸರ್ಕಾರ ಹಾಗೂ ಕುಟುಂಬದವರು ಅವಕಾಶ ನೀಡಬೇಕು. ಸ್ಮಾರಕ ಭವನ ನಿರ್ಮಿಸಿ ಅಭಿವೃದ್ಧಿ ಪಡಿಸುವ ಶಾಶ್ವತ ಯೋಜನೆ ಹಮ್ಮಿಕೊಳ್ಳಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT