<p><strong>ಸಂತೇಬೆನ್ನೂರು:</strong> ಖ್ಯಾತ ಸಂಶೋಧಕ ಡಾ.ಎಂ. ಚಿದಾನಂದ ಮೂರ್ತಿ ಅಂತ್ಯಸಂಸ್ಕಾರ ಅವರ ಸ್ವಗ್ರಾಮ ಹಿರೇಕೋಗಲೂರಿನಲ್ಲೇ ನಡೆಯಬೇಕು ಎಂದು ಡಾ.ಚಿದಾನಂದ ಮೂರ್ತಿ ಪ್ರತಿಷ್ಠಾನದ ಸದಸ್ಯರು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಶನಿವಾರ ಗ್ರಾಮದಲ್ಲಿ ಪ್ರತಿಭಟಿಸಿದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ‘ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಸಿದರೆ ಪ್ರಾಮುಖ್ಯತೆ ಇರುತ್ತದೆ. ಇಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ನಾವೆಲ್ಲ ಒಕ್ಕೊರಲಿನ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಗದೀಶ್ ಗೌಡ, ‘ತವರೂರಿನಲ್ಲೇ ಅಂತ್ಯಕ್ರಿಯೆ ನಡೆಸಲು ಸರ್ಕಾರ ಹಾಗೂ ಕುಟುಂಬದವರು ಅವಕಾಶ ನೀಡಬೇಕು. ಸ್ಮಾರಕ ಭವನ ನಿರ್ಮಿಸಿ ಅಭಿವೃದ್ಧಿ ಪಡಿಸುವ ಶಾಶ್ವತ ಯೋಜನೆ ಹಮ್ಮಿಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬೆನ್ನೂರು:</strong> ಖ್ಯಾತ ಸಂಶೋಧಕ ಡಾ.ಎಂ. ಚಿದಾನಂದ ಮೂರ್ತಿ ಅಂತ್ಯಸಂಸ್ಕಾರ ಅವರ ಸ್ವಗ್ರಾಮ ಹಿರೇಕೋಗಲೂರಿನಲ್ಲೇ ನಡೆಯಬೇಕು ಎಂದು ಡಾ.ಚಿದಾನಂದ ಮೂರ್ತಿ ಪ್ರತಿಷ್ಠಾನದ ಸದಸ್ಯರು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಶನಿವಾರ ಗ್ರಾಮದಲ್ಲಿ ಪ್ರತಿಭಟಿಸಿದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ‘ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಸಿದರೆ ಪ್ರಾಮುಖ್ಯತೆ ಇರುತ್ತದೆ. ಇಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ನಾವೆಲ್ಲ ಒಕ್ಕೊರಲಿನ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಗದೀಶ್ ಗೌಡ, ‘ತವರೂರಿನಲ್ಲೇ ಅಂತ್ಯಕ್ರಿಯೆ ನಡೆಸಲು ಸರ್ಕಾರ ಹಾಗೂ ಕುಟುಂಬದವರು ಅವಕಾಶ ನೀಡಬೇಕು. ಸ್ಮಾರಕ ಭವನ ನಿರ್ಮಿಸಿ ಅಭಿವೃದ್ಧಿ ಪಡಿಸುವ ಶಾಶ್ವತ ಯೋಜನೆ ಹಮ್ಮಿಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>