ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋರಿ ಕದ್ದು ಸಿಕ್ಕಿಬಿದ್ದ ಆರೋಪಿಗೆ ಥಳಿತ; ಕತ್ತೆ ಮೇಲೆ ಬೆತ್ತಲೆ ಮೆರವಣಿಗೆ

Last Updated 21 ಆಗಸ್ಟ್ 2020, 13:01 IST
ಅಕ್ಷರ ಗಾತ್ರ

ಹಿರಿಯೂರು: ಹೋರಿ ಕದ್ದು ಸಿಕ್ಕಿಬಿದ್ದ ಆರೋಪಿಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿಕತ್ತೆಯ ಮೇಲೆ ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ತಾಲ್ಲೂಕಿನ ಸರಸ್ವತಿಹಟ್ಟಿಯಲ್ಲಿ ನಡೆದಿದೆ.

ಬಡಗೊಲ್ಲರಹಟ್ಟಿಯ ಈಶ್ವರ್‌ (35) ಜಾನುವಾರು ಕಳವಿಗೆ ಯತ್ನಿಸಿ ಸಿಕ್ಕಿಬಿದ್ದ ಆರೋಪಿ. ಕಂಬಕ್ಕೆ ಕಟ್ಟಿ ಥಳಿಸಿದ ಹಾಗೂ ಕತ್ತೆ ಮೇಲೆ ಮೆರವಣಿಗೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಜವನಗೊಂಡನಹಳ್ಳಿ ಹೋಬಳಿಯ ಸರಸ್ವತಿಹಟ್ಟಿಯ ಬಾಲಣ್ಣ ಎಂಬುವರರ ಹೋರಿಗಳು ಆ.19ರಂದು ರಾತ್ರಿ ಕಳವಾಗಿದ್ದವು. ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣದ ಕಲ್ಯಾಣಿ ಗುಡ್ಡದಲ್ಲಿ ಹೋರಿಗಳನ್ನು ಕಟ್ಟಿ ಹಾಕಿದ್ದು ಕುರಿಗಾಹಿಗಳ ಕಣ್ಣಿಗೆ ಬಿದ್ದಿತ್ತು. ಹೋರಿಗಳನ್ನು ಮರಳಿ ಊರಿಗೆ ತಂದಿದ ಗ್ರಾಮಸ್ಥರು, ಬಡಗೊಲ್ಲರಹಟ್ಟಿಯ ಈಶ್ವರ್‌ ಎಂಬಾತನನ್ನು ಶುಕ್ರವಾರ ಹಟ್ಟಿಗೆ ಎಳೆದು ತಂದಿದ್ದರು.

ಆರೋಪಿಗೆ ಬಣ್ಣದ ಮೀಸೆ ಹಾಗೂ ನಾಮ ಬಳಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ. ಹಿಗ್ಗಾಮುಗ್ಗಾ ಥಳಿಸಿ ವಿಚಾರಣೆ ನಡೆಸಿದ್ದಾರೆ. ವಿದ್ಯುತ್ ಕೆಲಸಕ್ಕೆ ಬಳಸುವ ಕಟ್ಟಿಂಗ್‌ ಪ್ಲೆಯರ್‌ನಿಂದ ಕಿವಿಹಿಂಡಿ ಚಿತ್ರಹಿಂಸೆ ನೀಡಲು ಯತ್ನಿಸಿದ್ದಾರೆ. ಆರೋಪಿ ತಪ್ಪೊಪ್ಪಿಕೊಂಡ ಬಳಿಕ ವಿವಸ್ತ್ರಗೊಳಿಸಿ ಕತ್ತೆ ಮೇಲೆ ಕೂರಿಸಿದ್ದಾರೆ. ತಮಟೆ, ವಾದ್ಯಗಳೊಂದಿಗೆ ಸುಮಾರು ಒಂದು ಕಿ.ಮೀ ಮೆರವಣಿಗೆ ಮಾಡಿದ್ದಾರೆ.

ಆರೋಪಿಗೆ ಚಿತ್ರಹಿಂಸೆ ನೀಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರ ಗ್ರಾಮಕ್ಕೆ ತೆರಳಿ ಮಾಹಿತಿಕಲೆ ಹಾಕುತ್ತಿದ್ದಾರೆ. ಹಲ್ಲೆಗೊಳಗಾದ ಆರೋಪಿಯನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT