<p>ಹೊನ್ನಾಳಿ: ತಾಲ್ಲೂಕಿನ ಯರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಈಗಾಗಲೇ ₹4 ಕೋಟಿ ಹಣ ಮಂಜೂರಾಗಿದೆ. ₹12 ಕೋಟಿವರೆಗೂ ಮಂಜೂರು ಮಾಡಲು ಅವಕಾಶವಿದೆ. ಹೆಚ್ಚುವರಿ ಸಾಲವನ್ನು 2–3 ತಿಂಗಳೊಳಗಾಗಿ ಮಂಜೂರು ಮಾಡಿಸಲು ಯತ್ನಿಸುತ್ತೇನೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಜಿ. ಸುರೇಂದ್ರಗೌಡ ಹೇಳಿದರು.</p>.<p>ಗುರುವಾರ ತಾಲ್ಲೂಕಿನ ಯರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಭಿವೃದ್ಧಿಪಡಿಸಿದ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಡಿಸಿಸಿ ಬ್ಯಾಂಕ್ನ ಮತ್ತೊಬ್ಬ ನಿರ್ದೇಶಕ ಕಂಚುಗಾರನಹಳ್ಳಿ ಬಸಣ್ಣ ಮಾತನಾಡಿ, ಈ ಸಂಘ ತಮ್ಮ ವ್ಯಾಪ್ತಿಗೆ ಬರವುದಿಲ್ಲವಾದರೂ ಶಾಸಕರ ಪುತ್ರ ಡಿ.ಜಿ. ಸುರೇಂದ್ರ ಅವರ ಪ್ರಯತ್ನಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.</p>.<p>ಸಂಘದ ನಿರ್ದೇಶಕರು ಸಂಘದ ಅಭಿವೃದ್ಧಿ ಹಾಗೂ ರೈತರಿಗೆ ವಿತರಿಸಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. </p>.<p>ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ವಿರೂಪಾಕ್ಷಪ್ಪ, ಉಪಾಧ್ಯಕ್ಷೆ ನೀಲಮ್ಮ, ಸಂಘದ ಸದಸ್ಯರು, ಷೇರುದಾರರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ತಾಲ್ಲೂಕಿನ ಯರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಈಗಾಗಲೇ ₹4 ಕೋಟಿ ಹಣ ಮಂಜೂರಾಗಿದೆ. ₹12 ಕೋಟಿವರೆಗೂ ಮಂಜೂರು ಮಾಡಲು ಅವಕಾಶವಿದೆ. ಹೆಚ್ಚುವರಿ ಸಾಲವನ್ನು 2–3 ತಿಂಗಳೊಳಗಾಗಿ ಮಂಜೂರು ಮಾಡಿಸಲು ಯತ್ನಿಸುತ್ತೇನೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಜಿ. ಸುರೇಂದ್ರಗೌಡ ಹೇಳಿದರು.</p>.<p>ಗುರುವಾರ ತಾಲ್ಲೂಕಿನ ಯರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಭಿವೃದ್ಧಿಪಡಿಸಿದ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಡಿಸಿಸಿ ಬ್ಯಾಂಕ್ನ ಮತ್ತೊಬ್ಬ ನಿರ್ದೇಶಕ ಕಂಚುಗಾರನಹಳ್ಳಿ ಬಸಣ್ಣ ಮಾತನಾಡಿ, ಈ ಸಂಘ ತಮ್ಮ ವ್ಯಾಪ್ತಿಗೆ ಬರವುದಿಲ್ಲವಾದರೂ ಶಾಸಕರ ಪುತ್ರ ಡಿ.ಜಿ. ಸುರೇಂದ್ರ ಅವರ ಪ್ರಯತ್ನಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.</p>.<p>ಸಂಘದ ನಿರ್ದೇಶಕರು ಸಂಘದ ಅಭಿವೃದ್ಧಿ ಹಾಗೂ ರೈತರಿಗೆ ವಿತರಿಸಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. </p>.<p>ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ವಿರೂಪಾಕ್ಷಪ್ಪ, ಉಪಾಧ್ಯಕ್ಷೆ ನೀಲಮ್ಮ, ಸಂಘದ ಸದಸ್ಯರು, ಷೇರುದಾರರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>