<p><strong>ಹೊನ್ನಾಳಿ</strong>: ಪಟ್ಟಣದ ಮನೆಯೊಂದರಲ್ಲಿ ಸ್ನಾನಕ್ಕೆಂದು ನೀರು ಕಾಯಿಸಲು ಹೋದಾಗ ಬಾಯ್ಲರ್ ಸಿಡಿದು ಸುಟ್ಟಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಸ್ವೀಕೃತಿ (11) ಮೃತಪಟ್ಟಿದ್ದಾಳೆ.</p>.<p>ಬೆನಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರೀಕ್ಷಕ ಹೂವಾನಾಯ್ಕ ಅವರ ದುರ್ಗಿಗುಡಿ ದುರ್ಗಮ್ಮ ದೇವಸ್ಥಾನದ ಬಳಿಯಿರುವ ಮನೆಯಲ್ಲಿ ಮಂಗಳವಾರ ಅವಘಡ ಸಂಭವಿಸಿತ್ತು.</p>.<p>ಮಗಳನ್ನು ಎಳೆದುಕೊಳ್ಳಲು ಹೋದ ಹೂವಾನಾಯ್ಕ, ಪತ್ನಿ ಸುನೀತಾಬಾಯಿ ಹಾಗೂ ಅಜ್ಜಿ ತೀರ್ಥಿಬಾಯಿ ಕೂಡಾ ಗಾಯಗೊಂಡಿದ್ದಾರೆ.</p>.<p>ಗಾಯಗೊಂಡವರಿಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಸ್ವೀಕೃತಿ ಮೃತಪಟ್ಟಿದ್ದಾಳೆ.</p>.<p>72 ವರ್ಷದ ಅಜ್ಜಿ ತೀರ್ಥಿಬಾಯಿಯವರಿಗೂ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ ಎಂದು ಸಿಪಿಐ ಸುನಿಲ್ಕುಮಾರ್ ತಿಳಿಸಿದ್ದಾರೆ.</p>.<p>ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ಪಟ್ಟಣದ ಮನೆಯೊಂದರಲ್ಲಿ ಸ್ನಾನಕ್ಕೆಂದು ನೀರು ಕಾಯಿಸಲು ಹೋದಾಗ ಬಾಯ್ಲರ್ ಸಿಡಿದು ಸುಟ್ಟಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಸ್ವೀಕೃತಿ (11) ಮೃತಪಟ್ಟಿದ್ದಾಳೆ.</p>.<p>ಬೆನಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿರೀಕ್ಷಕ ಹೂವಾನಾಯ್ಕ ಅವರ ದುರ್ಗಿಗುಡಿ ದುರ್ಗಮ್ಮ ದೇವಸ್ಥಾನದ ಬಳಿಯಿರುವ ಮನೆಯಲ್ಲಿ ಮಂಗಳವಾರ ಅವಘಡ ಸಂಭವಿಸಿತ್ತು.</p>.<p>ಮಗಳನ್ನು ಎಳೆದುಕೊಳ್ಳಲು ಹೋದ ಹೂವಾನಾಯ್ಕ, ಪತ್ನಿ ಸುನೀತಾಬಾಯಿ ಹಾಗೂ ಅಜ್ಜಿ ತೀರ್ಥಿಬಾಯಿ ಕೂಡಾ ಗಾಯಗೊಂಡಿದ್ದಾರೆ.</p>.<p>ಗಾಯಗೊಂಡವರಿಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಸ್ವೀಕೃತಿ ಮೃತಪಟ್ಟಿದ್ದಾಳೆ.</p>.<p>72 ವರ್ಷದ ಅಜ್ಜಿ ತೀರ್ಥಿಬಾಯಿಯವರಿಗೂ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ ಎಂದು ಸಿಪಿಐ ಸುನಿಲ್ಕುಮಾರ್ ತಿಳಿಸಿದ್ದಾರೆ.</p>.<p>ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>