<p><strong>ಹೊನ್ನಾಳಿ:</strong> ಇಲ್ಲಿನ ಪುರಸಭೆ ಆಡಳಿತವು ಕಾಂಗ್ರೆಸ್ ಪಕ್ಷದ ಕೈವಶವಾಗಿದೆ. ನೂತನ ಅಧ್ಯಕ್ಷರಾಗಿ ಎ.ಕೆ.ಮೈಲಪ್ಪ ಅವಿರೋಧವಾಗಿ ಆಯ್ಕೆಯಾದರೆ, ಸಾವಿತ್ರಮ್ಮ ವಿಜೇಂದ್ರಪ್ಪ 10 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.</p>.<p>ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 18 ಸದಸ್ಯರ ಪೈಕಿ ಎ.ಕೆ.ಮೈಲಪ್ಪ ಅವರೊಬ್ಬರೇ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರು. ಹೀಗಾಗಿ ಅವರು ಅಧ್ಯಕ್ಷ ಗಾದಿಗೆ ಏರುವುದು ಸುಲಭವಾಯಿತು. </p>.<p>ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಿಂದ ಸಾವಿತ್ರಮ್ಮ ವಿಜೇಂದ್ರಪ್ಪ ಹಾಗೂ ಬಿಜೆಪಿಯಿಂದ ರಂಜಿತಾ ಚನ್ನಪ್ಪ ವಡ್ಡಿ ಉಮೇದುವಾರಿಕೆ ಸಲ್ಲಿಸಿದ್ದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಡಿ.ಜಿ.ಶಾಂತನಗೌಡ ಹಾಗೂ ಪಕ್ಷದ ಎಂಟು ಮಂದಿ ಸದಸ್ಯರು ಕೈ ಎತ್ತುವ ಮೂಲಕ ಸಾವಿತ್ರಮ್ಮಗೆ ಬೆಂಬಲ ಸೂಚಿಸಿದರು. </p>.<p>ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ರಂಜಿತಾ ಸೇರಿದಂತೆ ಆ ಪಕ್ಷದ ಯಾವ ಸದಸ್ಯರೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸದಿರುವುದು ಅಚ್ಚರಿ ಮೂಡಿಸಿತು. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಕಾರ್ಯನಿರ್ವಹಿಸಿದರು. </p>.<p>ಪುರಸಭಾ ಸದಸ್ಯರಾದ ಧರ್ಮಪ್ಪ, ಹೊಸಕೇರಿ ಸುರೇಶ್, ಮೈಲಪ್ಪ, ತನ್ವೀರ್, ರಾಜೇಂದ್ರಕುಮಾರ್, ಎಂ. ಸುರೇಶ್, ಉಷಾ ಗಿರೀಶ್ ಹಾಗೂ ಭಾವಿಮನೆ ರಾಜಣ್ಣ ಉಪಸ್ಥಿತರಿದ್ದರು. ತಹಶೀಲ್ದಾರ್ ಪಟ್ಟರಾಜಗೌಡ, ಮುಖ್ಯಾಧಿಕಾರಿ ಟಿ.ಲೀಲಾವತಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಜಿ.ಪಂ. ಮಾಜಿ ಸದಸ್ಯ ಡಿ.ಜಿ.ವಿಶ್ವನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಸ್.ಸುರೇಂದ್ರ, ಎಚ್.ಬಿ. ಅಣ್ಣಪ್ಪ ಹಾಗೂ ದಲಿತ ಸಂಘಟನೆಗಳ ಮುಖಂಡರು, ಗಣ್ಯರು ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಇಲ್ಲಿನ ಪುರಸಭೆ ಆಡಳಿತವು ಕಾಂಗ್ರೆಸ್ ಪಕ್ಷದ ಕೈವಶವಾಗಿದೆ. ನೂತನ ಅಧ್ಯಕ್ಷರಾಗಿ ಎ.ಕೆ.ಮೈಲಪ್ಪ ಅವಿರೋಧವಾಗಿ ಆಯ್ಕೆಯಾದರೆ, ಸಾವಿತ್ರಮ್ಮ ವಿಜೇಂದ್ರಪ್ಪ 10 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.</p>.<p>ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 18 ಸದಸ್ಯರ ಪೈಕಿ ಎ.ಕೆ.ಮೈಲಪ್ಪ ಅವರೊಬ್ಬರೇ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರು. ಹೀಗಾಗಿ ಅವರು ಅಧ್ಯಕ್ಷ ಗಾದಿಗೆ ಏರುವುದು ಸುಲಭವಾಯಿತು. </p>.<p>ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಿಂದ ಸಾವಿತ್ರಮ್ಮ ವಿಜೇಂದ್ರಪ್ಪ ಹಾಗೂ ಬಿಜೆಪಿಯಿಂದ ರಂಜಿತಾ ಚನ್ನಪ್ಪ ವಡ್ಡಿ ಉಮೇದುವಾರಿಕೆ ಸಲ್ಲಿಸಿದ್ದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಡಿ.ಜಿ.ಶಾಂತನಗೌಡ ಹಾಗೂ ಪಕ್ಷದ ಎಂಟು ಮಂದಿ ಸದಸ್ಯರು ಕೈ ಎತ್ತುವ ಮೂಲಕ ಸಾವಿತ್ರಮ್ಮಗೆ ಬೆಂಬಲ ಸೂಚಿಸಿದರು. </p>.<p>ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ರಂಜಿತಾ ಸೇರಿದಂತೆ ಆ ಪಕ್ಷದ ಯಾವ ಸದಸ್ಯರೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸದಿರುವುದು ಅಚ್ಚರಿ ಮೂಡಿಸಿತು. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಕಾರ್ಯನಿರ್ವಹಿಸಿದರು. </p>.<p>ಪುರಸಭಾ ಸದಸ್ಯರಾದ ಧರ್ಮಪ್ಪ, ಹೊಸಕೇರಿ ಸುರೇಶ್, ಮೈಲಪ್ಪ, ತನ್ವೀರ್, ರಾಜೇಂದ್ರಕುಮಾರ್, ಎಂ. ಸುರೇಶ್, ಉಷಾ ಗಿರೀಶ್ ಹಾಗೂ ಭಾವಿಮನೆ ರಾಜಣ್ಣ ಉಪಸ್ಥಿತರಿದ್ದರು. ತಹಶೀಲ್ದಾರ್ ಪಟ್ಟರಾಜಗೌಡ, ಮುಖ್ಯಾಧಿಕಾರಿ ಟಿ.ಲೀಲಾವತಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಜಿ.ಪಂ. ಮಾಜಿ ಸದಸ್ಯ ಡಿ.ಜಿ.ವಿಶ್ವನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಸ್.ಸುರೇಂದ್ರ, ಎಚ್.ಬಿ. ಅಣ್ಣಪ್ಪ ಹಾಗೂ ದಲಿತ ಸಂಘಟನೆಗಳ ಮುಖಂಡರು, ಗಣ್ಯರು ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>