<p><strong>ಹೊನ್ನಾಳಿ</strong>: ಒಳ ಮೀಸಲಾತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕ್ರಾಂತಿ ರಥಯಾತ್ರೆ ಮೇ 19ರಂದು ಹೊನ್ನಾಳಿಯಲ್ಲಿ ಸಂಚರಿಸಲಿದೆ ಎಂದು ಮಾದಿಗ ದಂಡೋರ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ದಿಡಗೂರು ತಮ್ಮಣ್ಣ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಬೆಳಿಗ್ಗೆ ದೇವನಾಯಕನಹಳ್ಳಿಯ ಕನಕದಾಸ ವೃತ್ತದಿಂದ ಯಾತ್ರೆ ಹೊರಡಲಿದೆ. ಬೈಕ್ ರ್ಯಾಲಿಯು ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಲಿದೆ. ಅಲ್ಲಿ ಮುಖಂಡ ಭಾಸ್ಕರ್ ರಾವ್ ಮಾತನಾಡಲಿದ್ದಾರೆ ಎಂದು ಹೇಳಿದರು.</p>.<p>ನಂತರ ಕ್ರಾಂತಿ ರಥಯಾತ್ರೆಯು ನ್ಯಾಮತಿ ತಾಲ್ಲೂಕಿಗೆ ತೆರಳಲಿದೆ. ಅಲ್ಲಿಂದ ಸುರಹೊನ್ನೆ, ಬೆಳಗುತ್ತಿ, ಮಲ್ಲಿಗೇನಹಳ್ಳಿ, ಕೆಂಚಿಕೊಪ್ಪ, ಸೊರಟೂರು, ಹೊನ್ನಾಳಿ, ಸಾಸ್ವೇಹಳ್ಳಿಗೆ ತೆರಳಿ ಅಲ್ಲಿಂದ ಚನ್ನಗಿರಿ ತಾಲ್ಲೂಕಿಗೆ ಬೀಳ್ಕೊಡಲಾಗುವುದು ಎಂದರು.</p>.<p>ಮುಖಂಡರಾದ ಕೆಂಗಲಹಳ್ಳಿ ಪ್ರಭಾಕರ್, ತ್ಯಾಗದಕಟ್ಟೆ ಹನುಮಂತಪ್ಪ, ಕುರುವ ಮಂಜುನಾಥ್, ರಾಜು, ಮಾರಿಕೊಪ್ಪ ಮಂಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ಒಳ ಮೀಸಲಾತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕ್ರಾಂತಿ ರಥಯಾತ್ರೆ ಮೇ 19ರಂದು ಹೊನ್ನಾಳಿಯಲ್ಲಿ ಸಂಚರಿಸಲಿದೆ ಎಂದು ಮಾದಿಗ ದಂಡೋರ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ದಿಡಗೂರು ತಮ್ಮಣ್ಣ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಬೆಳಿಗ್ಗೆ ದೇವನಾಯಕನಹಳ್ಳಿಯ ಕನಕದಾಸ ವೃತ್ತದಿಂದ ಯಾತ್ರೆ ಹೊರಡಲಿದೆ. ಬೈಕ್ ರ್ಯಾಲಿಯು ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಲಿದೆ. ಅಲ್ಲಿ ಮುಖಂಡ ಭಾಸ್ಕರ್ ರಾವ್ ಮಾತನಾಡಲಿದ್ದಾರೆ ಎಂದು ಹೇಳಿದರು.</p>.<p>ನಂತರ ಕ್ರಾಂತಿ ರಥಯಾತ್ರೆಯು ನ್ಯಾಮತಿ ತಾಲ್ಲೂಕಿಗೆ ತೆರಳಲಿದೆ. ಅಲ್ಲಿಂದ ಸುರಹೊನ್ನೆ, ಬೆಳಗುತ್ತಿ, ಮಲ್ಲಿಗೇನಹಳ್ಳಿ, ಕೆಂಚಿಕೊಪ್ಪ, ಸೊರಟೂರು, ಹೊನ್ನಾಳಿ, ಸಾಸ್ವೇಹಳ್ಳಿಗೆ ತೆರಳಿ ಅಲ್ಲಿಂದ ಚನ್ನಗಿರಿ ತಾಲ್ಲೂಕಿಗೆ ಬೀಳ್ಕೊಡಲಾಗುವುದು ಎಂದರು.</p>.<p>ಮುಖಂಡರಾದ ಕೆಂಗಲಹಳ್ಳಿ ಪ್ರಭಾಕರ್, ತ್ಯಾಗದಕಟ್ಟೆ ಹನುಮಂತಪ್ಪ, ಕುರುವ ಮಂಜುನಾಥ್, ರಾಜು, ಮಾರಿಕೊಪ್ಪ ಮಂಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>