<p>ಹೊನ್ನಾಳಿ: ತಾಲ್ಲೂಕಿನ ಅರಕೆರೆ, ಎ.ಕೆ. ಕಾಲೊನಿ ಹಾಗೂ ಕುಳಗಟ್ಟೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಭಾಗಗಳಲ್ಲಿ ರೈತರಿಂದ ಕೊಳವೆಬಾವಿಯನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.</p>.<p>ಮಂಗಳವಾರ ತಾಲ್ಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕುಡಿಯುವ ನೀರು ಪೂರೈಕೆಗೆ ಹಣದ ಸಮಸ್ಯೆ ಇಲ್ಲ. ಆದ್ದರಿಂದ ಮುಂಜಾಗ್ರತಾ ಕ್ರಮ ವಹಿಸಬೇಕು. ತಾಲ್ಲೂಕಿನ ಎಸ್. ಮಲ್ಲಾಪುರ, ಮಾದೇನಹಳ್ಳಿ, ಸುಂಕದಕಟ್ಟೆ, ಬಲಮುರಿ ಮತ್ತು ಅರಬಗಟ್ಟೆಯಲ್ಲೂ ನೀರಿನ ಲಭ್ಯತೆಯ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ನೀರಿಗೆ ಹಾಹಾಕಾರವಿಲ್ಲ, ಈ ಭಾಗಗಳಲ್ಲೂ ನೀರಿನ ಸಮಸ್ಯೆ ಹೋಗಲಾಡಿಸಲು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಎಲ್ಲಾ ಗ್ರಾಮಗಳ ಪಿಡಿಒ ಜೊತೆ ಸಂಪರ್ಕದಲ್ಲಿದ್ದು, ನೀರು ಪೂರೈಸಲು ಕ್ರಮ ವಹಿಸಲಾಗಿದೆ ಎಂದು ಎಇಇ ಸೋಮ್ಲಾನಾಯ್ಕ ತಿಳಿಸಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲವು ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ, ಚಿಕಿತ್ಸೆ ನೀಡುವುದಿಲ್ಲ ಎಂದು ಕೆಲವರು ದೂರುತ್ತಿದ್ದಾರೆ ಎಂದು ಸಚಿವರು ಪ್ರಶ್ನಿಸಿದಾಗ, ‘ವೈದ್ಯರು ಬೆಳಿಗ್ಗೆ ಸ್ವಲ್ಪ ತಡವಾಗಿ ಬರುತ್ತಿದ್ದು ಉಳಿದಂತೆ ಯಾವುದೇ ಸಮಸ್ಯೆ ಇಲ್ಲ’ ಎಂದು ಡಾ. ಹನುಮಂತಪ್ಪ ಪ್ರತಿಕ್ರಿಯಿಸಿದರು.</p>.<p>‘ನಾನು ಕೆಲವು ವೈದ್ಯರಿಗೆ ಫೋನ್ ಮಾಡಿದರೆ ಕರೆ ತೆಗೆದುಕೊಳ್ಳುವುದಿಲ್ಲ. ಮುಂದೆ ಇಂತಹ ವರ್ತನೆ ಮುಂದುವರಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಬಿ. ಮಂಜಪ್ಪ ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನಲ್ಲಿ ಪೂರ್ವ ಮುಂಗಾರು ವಾಡಿಕೆಯಂತೆ 34 ಮಿ.ಮೀಟರ್ ಇದ್ದು, 39 ಮಿಲಿ ಮೀಟರ್ ಮಳೆಯಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 38 ಮಿಲಿ ಮೀಟರ್ ವಾಡಿಕೆ ಇದ್ದು, 68 ಮಿ,ಮೀ ಮಳೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥ್ ಮಾಹಿತಿ ನೀಡಿದರು.</p>.<p>ಮುಂಗಾರು ಹಂಗಾಮಿಗೆ ಯೂರಿಯಾ, ಕಾಂಪೋಸ್ಟ್, ಡಿಎಪಿ ಸೇರಿದಂತೆ ಇತರೆ ರಸಗೊಬ್ಬರಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಬೆಸ್ಕಾಂ, ನೀರಾವರಿ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ, ಪೊಲೀಸ್, ಅಕ್ಷರ ದಾಸೋಹ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ವರದಿ ಮಂಡಿಸಿದರು.</p>.<p>ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ, ಹೊನ್ನಾಳಿ ಉಪವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ, ತಹಶೀಲ್ದಾರ್ ರಾಜೇಶ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ಕುಮಾರ್, ತಾ.ಪಂ. ಇಒ ಅಶೋಕ್, ಬಿಇಒ ನಿಂಗಪ್ಪ, ಪಿಎಎಲ್ಡಿ ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ಮರಳುಸಿದ್ದಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-43-778481046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ತಾಲ್ಲೂಕಿನ ಅರಕೆರೆ, ಎ.ಕೆ. ಕಾಲೊನಿ ಹಾಗೂ ಕುಳಗಟ್ಟೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಭಾಗಗಳಲ್ಲಿ ರೈತರಿಂದ ಕೊಳವೆಬಾವಿಯನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.</p>.<p>ಮಂಗಳವಾರ ತಾಲ್ಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕುಡಿಯುವ ನೀರು ಪೂರೈಕೆಗೆ ಹಣದ ಸಮಸ್ಯೆ ಇಲ್ಲ. ಆದ್ದರಿಂದ ಮುಂಜಾಗ್ರತಾ ಕ್ರಮ ವಹಿಸಬೇಕು. ತಾಲ್ಲೂಕಿನ ಎಸ್. ಮಲ್ಲಾಪುರ, ಮಾದೇನಹಳ್ಳಿ, ಸುಂಕದಕಟ್ಟೆ, ಬಲಮುರಿ ಮತ್ತು ಅರಬಗಟ್ಟೆಯಲ್ಲೂ ನೀರಿನ ಲಭ್ಯತೆಯ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ನೀರಿಗೆ ಹಾಹಾಕಾರವಿಲ್ಲ, ಈ ಭಾಗಗಳಲ್ಲೂ ನೀರಿನ ಸಮಸ್ಯೆ ಹೋಗಲಾಡಿಸಲು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಎಲ್ಲಾ ಗ್ರಾಮಗಳ ಪಿಡಿಒ ಜೊತೆ ಸಂಪರ್ಕದಲ್ಲಿದ್ದು, ನೀರು ಪೂರೈಸಲು ಕ್ರಮ ವಹಿಸಲಾಗಿದೆ ಎಂದು ಎಇಇ ಸೋಮ್ಲಾನಾಯ್ಕ ತಿಳಿಸಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲವು ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ, ಚಿಕಿತ್ಸೆ ನೀಡುವುದಿಲ್ಲ ಎಂದು ಕೆಲವರು ದೂರುತ್ತಿದ್ದಾರೆ ಎಂದು ಸಚಿವರು ಪ್ರಶ್ನಿಸಿದಾಗ, ‘ವೈದ್ಯರು ಬೆಳಿಗ್ಗೆ ಸ್ವಲ್ಪ ತಡವಾಗಿ ಬರುತ್ತಿದ್ದು ಉಳಿದಂತೆ ಯಾವುದೇ ಸಮಸ್ಯೆ ಇಲ್ಲ’ ಎಂದು ಡಾ. ಹನುಮಂತಪ್ಪ ಪ್ರತಿಕ್ರಿಯಿಸಿದರು.</p>.<p>‘ನಾನು ಕೆಲವು ವೈದ್ಯರಿಗೆ ಫೋನ್ ಮಾಡಿದರೆ ಕರೆ ತೆಗೆದುಕೊಳ್ಳುವುದಿಲ್ಲ. ಮುಂದೆ ಇಂತಹ ವರ್ತನೆ ಮುಂದುವರಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಬಿ. ಮಂಜಪ್ಪ ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನಲ್ಲಿ ಪೂರ್ವ ಮುಂಗಾರು ವಾಡಿಕೆಯಂತೆ 34 ಮಿ.ಮೀಟರ್ ಇದ್ದು, 39 ಮಿಲಿ ಮೀಟರ್ ಮಳೆಯಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 38 ಮಿಲಿ ಮೀಟರ್ ವಾಡಿಕೆ ಇದ್ದು, 68 ಮಿ,ಮೀ ಮಳೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥ್ ಮಾಹಿತಿ ನೀಡಿದರು.</p>.<p>ಮುಂಗಾರು ಹಂಗಾಮಿಗೆ ಯೂರಿಯಾ, ಕಾಂಪೋಸ್ಟ್, ಡಿಎಪಿ ಸೇರಿದಂತೆ ಇತರೆ ರಸಗೊಬ್ಬರಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಬೆಸ್ಕಾಂ, ನೀರಾವರಿ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ, ಪೊಲೀಸ್, ಅಕ್ಷರ ದಾಸೋಹ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ವರದಿ ಮಂಡಿಸಿದರು.</p>.<p>ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ, ಹೊನ್ನಾಳಿ ಉಪವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ, ತಹಶೀಲ್ದಾರ್ ರಾಜೇಶ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ಕುಮಾರ್, ತಾ.ಪಂ. ಇಒ ಅಶೋಕ್, ಬಿಇಒ ನಿಂಗಪ್ಪ, ಪಿಎಎಲ್ಡಿ ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ಮರಳುಸಿದ್ದಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-43-778481046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>