<p><strong>ಹೊನ್ನಾಳಿ:</strong> ದೇಶ ಸೇವೆ ಸಲ್ಲಿಸಿ ನಿವೃತ್ತ ಜೀವನ ಸಾಗಿಸುತ್ತಿರುವ ಮಾಜಿ ಸೈನಿಕರಿಗೆ ನಿವೇಶನ ಕೊಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.</p>.<p>ಇಲ್ಲಿನ ದೇವನಾಯಕನಹಳ್ಳಿಯ ಸರ್ಕಾರಿ ನೌಕರರ ಭವನದಲ್ಲಿ ಅವಳಿ ತಾಲ್ಲೂಕಿನ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.</p>.<p>‘ಸೈನಿಕರು 20–30 ವರ್ಷಗಳವರೆಗೆ ತಮ್ಮ ಕುಟುಂಬದಿಂದ ದೂರ ಇದ್ದು ಗಡಿ ಕಾಯುತ್ತಾರೆ. ಅವರ ಬಗ್ಗೆ ಒಂದಿಷ್ಟು ಪ್ರೀತಿ, ಗೌರವ ಇಟ್ಟುಕೊಳ್ಳಬೇಕು’ ಎಂದರು.</p>.<p>ಮಾಜಿ ಸಚಿವ ಎಂ.ಪಿ.ರೇಣುಕಾ ಚಾರ್ಯ ಮಾತನಾಡಿ, ‘ಸೈನಿಕರು ಹಾಗೂ ರೈತರು ನಮ್ಮ ಎರಡು ಕಣ್ಣುಗಳಿದ್ದಂತೆ. ಇವರಿಬ್ಬರ ಬದುಕು ಕಠಿಣವಾಗಿದ್ದು, ಕಷ್ಟಕಾಲದಲ್ಲಿ ನಮ್ಮ ಸರ್ಕಾರಗಳು ಅವರ ನೆರವಿಗೆ ಬರಬೇಕು’ ಎಂದರು.</p>.<p>ಈಶ್ವರೀಯ ವಿಶ್ವವಿದ್ಯಾಲಯದ ಜ್ಯೋತಿ ಅಕ್ಕ, ಸಂಘದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಸ್ವರೂಪರಾಣಿ ಮಾತನಾಡಿದರು. ಸಂಘದ ಸಂಸ್ಥಾಪಕ ಎಂ. ವಾಸಪ್ಪ ಅವರು ಸಂಘದ ಬೆಳವಣಿಗೆಯ ಹಾದಿಯನ್ನು ವಿವರಿಸಿದರು. ಖಜಾಂಚಿ ವೀರೇಶ್ ಸಂಘದ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಗಂಗಾಧರ್ ಸ್ವಾಗತಿಸಿದರು, ನಿರ್ದೇಶಕ ಸಿದ್ದೇಶಪ್ಪ ವಂದಿಸಿದರು.</p>.<p>ಮಾಜಿ ಸೈನಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಈಚೆಗೆ ನಿವೃತ್ತರಾದ ಸೈನಿಕರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಗೌಡ, ಉಪಾಧ್ಯಕ್ಷ ಬಿ. ರಾಮಪ್ಪ, ಸಹಕಾರ್ಯದರ್ಶಿ ಎಂ. ಮಂಜಪ್ಪ, ನಿರ್ದೇಶಕರಾದ ಟಿ. ರಾಮೇಶ್ವರ, ಕೇಶವಮೂರ್ತಿ, ಎನ್.ವಿ. ರಾಮಪ್ಪ, ಆಂಜನೇಯ ಎಚ್., ಶಿವಮೂರ್ತಿ, ಜಯಪ್ಪ ಎಚ್., ತೋಟಪ್ಪ ಎಂ.ಆರ್., ಹನುಮಂತಪ್ಪ ಕೆ.ಎಚ್., ಎನ್. ಶಶಿಕಾಂತ್, ರಾಜೀವ್, ಮೋಹನ್ ರವಿಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-43-620421815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ದೇಶ ಸೇವೆ ಸಲ್ಲಿಸಿ ನಿವೃತ್ತ ಜೀವನ ಸಾಗಿಸುತ್ತಿರುವ ಮಾಜಿ ಸೈನಿಕರಿಗೆ ನಿವೇಶನ ಕೊಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.</p>.<p>ಇಲ್ಲಿನ ದೇವನಾಯಕನಹಳ್ಳಿಯ ಸರ್ಕಾರಿ ನೌಕರರ ಭವನದಲ್ಲಿ ಅವಳಿ ತಾಲ್ಲೂಕಿನ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.</p>.<p>‘ಸೈನಿಕರು 20–30 ವರ್ಷಗಳವರೆಗೆ ತಮ್ಮ ಕುಟುಂಬದಿಂದ ದೂರ ಇದ್ದು ಗಡಿ ಕಾಯುತ್ತಾರೆ. ಅವರ ಬಗ್ಗೆ ಒಂದಿಷ್ಟು ಪ್ರೀತಿ, ಗೌರವ ಇಟ್ಟುಕೊಳ್ಳಬೇಕು’ ಎಂದರು.</p>.<p>ಮಾಜಿ ಸಚಿವ ಎಂ.ಪಿ.ರೇಣುಕಾ ಚಾರ್ಯ ಮಾತನಾಡಿ, ‘ಸೈನಿಕರು ಹಾಗೂ ರೈತರು ನಮ್ಮ ಎರಡು ಕಣ್ಣುಗಳಿದ್ದಂತೆ. ಇವರಿಬ್ಬರ ಬದುಕು ಕಠಿಣವಾಗಿದ್ದು, ಕಷ್ಟಕಾಲದಲ್ಲಿ ನಮ್ಮ ಸರ್ಕಾರಗಳು ಅವರ ನೆರವಿಗೆ ಬರಬೇಕು’ ಎಂದರು.</p>.<p>ಈಶ್ವರೀಯ ವಿಶ್ವವಿದ್ಯಾಲಯದ ಜ್ಯೋತಿ ಅಕ್ಕ, ಸಂಘದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಸ್ವರೂಪರಾಣಿ ಮಾತನಾಡಿದರು. ಸಂಘದ ಸಂಸ್ಥಾಪಕ ಎಂ. ವಾಸಪ್ಪ ಅವರು ಸಂಘದ ಬೆಳವಣಿಗೆಯ ಹಾದಿಯನ್ನು ವಿವರಿಸಿದರು. ಖಜಾಂಚಿ ವೀರೇಶ್ ಸಂಘದ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಗಂಗಾಧರ್ ಸ್ವಾಗತಿಸಿದರು, ನಿರ್ದೇಶಕ ಸಿದ್ದೇಶಪ್ಪ ವಂದಿಸಿದರು.</p>.<p>ಮಾಜಿ ಸೈನಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಈಚೆಗೆ ನಿವೃತ್ತರಾದ ಸೈನಿಕರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಗೌಡ, ಉಪಾಧ್ಯಕ್ಷ ಬಿ. ರಾಮಪ್ಪ, ಸಹಕಾರ್ಯದರ್ಶಿ ಎಂ. ಮಂಜಪ್ಪ, ನಿರ್ದೇಶಕರಾದ ಟಿ. ರಾಮೇಶ್ವರ, ಕೇಶವಮೂರ್ತಿ, ಎನ್.ವಿ. ರಾಮಪ್ಪ, ಆಂಜನೇಯ ಎಚ್., ಶಿವಮೂರ್ತಿ, ಜಯಪ್ಪ ಎಚ್., ತೋಟಪ್ಪ ಎಂ.ಆರ್., ಹನುಮಂತಪ್ಪ ಕೆ.ಎಚ್., ಎನ್. ಶಶಿಕಾಂತ್, ರಾಜೀವ್, ಮೋಹನ್ ರವಿಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-43-620421815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>