<p><strong>ಹೊನ್ನಾಳಿ:</strong> ‘ರಾಜ್ಯದಲ್ಲಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿ ಮಾಡಲಾಗಿದೆ. ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ರೈತರು ಪರದಾಡುವಂತಾಗಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದೂರಿದರು.</p>.<p>‘ಒಂದು ಚೀಲ ಯೂರಿಯಾ ಗೊಬ್ಬರಕ್ಕೆ ₹ 266 ದರವಿದ್ದು, ಹೊನ್ನಾಳಿ ಸೇರಿದಂತೆ ಹಲವೆಡೆ ಅದನ್ನು ಕಾಳಸಂತೆಯಲ್ಲಿ ₹ 380ಕ್ಕೆ ಮಾರಾಟ ಮಾಡುತ್ತಿರುವುದಾಗಿ ರೈತರು ಮಾಹಿತಿ ಕೊಡುತ್ತಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಒಂದು ಚೀಲ ಡಿಎಪಿ ರಸಗೊಬ್ಬರಕ್ಕೆ ₹ 1,350 ಇದ್ದರೆ ಅದನ್ನು ₹ 1,600ಕ್ಕೆ ಮಾರಾಟ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಕೃತಕ ಅಭಾವ ಸೃಷ್ಟಿ ಹಾಗೂ ರಾಜ್ಯ ಸರ್ಕಾರದ ಕುಮ್ಮಕ್ಕು ಕಾರಣ’ ಎಂದು ಆರೋಪಿಸಿದರು.</p>.<p>‘ಅಧಿಕಾರಿಗಳು, ವ್ಯಾಪಾರಿಗಳು ರೈತರಿಗೆ ಅಗತ್ಯವಿರುವ ರಸಗೊಬ್ಬರ ಕೊಡುವ ಬದಲು ಅದಕ್ಕೆ ಲಿಂಕ್ ಎಂದು ಹೇಳಿ ಇತರೆ ಗೊಬ್ಬರ ಕೊಡುತ್ತಿದ್ದಾರೆ. ಇದು ರೈತರನ್ನು ಕೆರಳಿಸುತ್ತಿದೆ’ ಎಂದು ಹೇಳಿದರು.</p>.<p>‘ಮೆಕ್ಕೆಜೋಳ ಬೆಳೆದ ರೈತರು ಸೂಕ್ತ ಬೆಲೆ ಸಿಗದೇ ಕಣ್ಣೀರು ಹಾಕುತ್ತಿದ್ದಾರೆ. ಇದೀಗ ಭತ್ತದ ಬೆಳೆ ಕಟಾವು ಆಗುತ್ತಿದ್ದು, ರಾಜ್ಯ ಸರ್ಕಾರ ತಕ್ಷಣವೇ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯದ ಜನರಿಗೆ ಕೊಡಬೇಕಾದ ಅಂಗವಿಕಲ ವೇತನ, ವಿಧವಾ ವೇತನ ಸೇರಿದಂತೆ ಇತರೆ ಮಾಸಾಶನ ನಾಲ್ಕು ತಿಂಗಳಿಂದ ಬಾಕಿ ಇದ್ದು ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಶೂ–ಸಾಕ್ಸ್ ಕೊಡುವುದಕ್ಕೆ ಹಣವಿಲ್ಲ’ ಎಂದು ಟೀಕಿಸಿದರು.</p>.<p>‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುವ ಭೀತಿ ಎದುರಾಗಿದೆ. ಹೀಗಾಗಿ ಸಭೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ’ ಎಂದು ದೂರಿದರು.</p>.<p>‘ಯುದ್ಧದ ಕಾರಣದಿಂದಾಗಿ ದೇಶದಲ್ಲಿ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ವಿಧಿಸುತ್ತಿರುವ ಸುಂಕವನ್ನು ಕಡಿಮೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ನೆಲವಣ್ಣಿ ಮಂಜುನಾಥ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-43-1380499588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ‘ರಾಜ್ಯದಲ್ಲಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿ ಮಾಡಲಾಗಿದೆ. ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ರೈತರು ಪರದಾಡುವಂತಾಗಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದೂರಿದರು.</p>.<p>‘ಒಂದು ಚೀಲ ಯೂರಿಯಾ ಗೊಬ್ಬರಕ್ಕೆ ₹ 266 ದರವಿದ್ದು, ಹೊನ್ನಾಳಿ ಸೇರಿದಂತೆ ಹಲವೆಡೆ ಅದನ್ನು ಕಾಳಸಂತೆಯಲ್ಲಿ ₹ 380ಕ್ಕೆ ಮಾರಾಟ ಮಾಡುತ್ತಿರುವುದಾಗಿ ರೈತರು ಮಾಹಿತಿ ಕೊಡುತ್ತಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಒಂದು ಚೀಲ ಡಿಎಪಿ ರಸಗೊಬ್ಬರಕ್ಕೆ ₹ 1,350 ಇದ್ದರೆ ಅದನ್ನು ₹ 1,600ಕ್ಕೆ ಮಾರಾಟ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಕೃತಕ ಅಭಾವ ಸೃಷ್ಟಿ ಹಾಗೂ ರಾಜ್ಯ ಸರ್ಕಾರದ ಕುಮ್ಮಕ್ಕು ಕಾರಣ’ ಎಂದು ಆರೋಪಿಸಿದರು.</p>.<p>‘ಅಧಿಕಾರಿಗಳು, ವ್ಯಾಪಾರಿಗಳು ರೈತರಿಗೆ ಅಗತ್ಯವಿರುವ ರಸಗೊಬ್ಬರ ಕೊಡುವ ಬದಲು ಅದಕ್ಕೆ ಲಿಂಕ್ ಎಂದು ಹೇಳಿ ಇತರೆ ಗೊಬ್ಬರ ಕೊಡುತ್ತಿದ್ದಾರೆ. ಇದು ರೈತರನ್ನು ಕೆರಳಿಸುತ್ತಿದೆ’ ಎಂದು ಹೇಳಿದರು.</p>.<p>‘ಮೆಕ್ಕೆಜೋಳ ಬೆಳೆದ ರೈತರು ಸೂಕ್ತ ಬೆಲೆ ಸಿಗದೇ ಕಣ್ಣೀರು ಹಾಕುತ್ತಿದ್ದಾರೆ. ಇದೀಗ ಭತ್ತದ ಬೆಳೆ ಕಟಾವು ಆಗುತ್ತಿದ್ದು, ರಾಜ್ಯ ಸರ್ಕಾರ ತಕ್ಷಣವೇ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯದ ಜನರಿಗೆ ಕೊಡಬೇಕಾದ ಅಂಗವಿಕಲ ವೇತನ, ವಿಧವಾ ವೇತನ ಸೇರಿದಂತೆ ಇತರೆ ಮಾಸಾಶನ ನಾಲ್ಕು ತಿಂಗಳಿಂದ ಬಾಕಿ ಇದ್ದು ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಶೂ–ಸಾಕ್ಸ್ ಕೊಡುವುದಕ್ಕೆ ಹಣವಿಲ್ಲ’ ಎಂದು ಟೀಕಿಸಿದರು.</p>.<p>‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುವ ಭೀತಿ ಎದುರಾಗಿದೆ. ಹೀಗಾಗಿ ಸಭೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ’ ಎಂದು ದೂರಿದರು.</p>.<p>‘ಯುದ್ಧದ ಕಾರಣದಿಂದಾಗಿ ದೇಶದಲ್ಲಿ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ವಿಧಿಸುತ್ತಿರುವ ಸುಂಕವನ್ನು ಕಡಿಮೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ನೆಲವಣ್ಣಿ ಮಂಜುನಾಥ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-43-1380499588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>