<p>ಹೊನ್ನಾಳಿ: ‘ಮೀನುಗಾರರ ಕುಟುಂಬದ ಆರ್ಥಿಕ ಮಟ್ಟ ಸುಧಾರಿಸಲು ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.</p>.<p>ಮೀನುಗಾರಿಕೆ ಇಲಾಖೆ ವತಿಯಿಂದ ಈಚೆಗೆ 15 ಫಲಾನುಭವಿಗಳಿಗೆ ಮಿನು ಹಿಡಿಯುವ ಸಲಕರಣೆಗಳ ಕಿಟ್ ವಿತರಿಸಿ ಮಾತನಾಡಿದರು.</p>.<p>‘ಜಿಲ್ಲಾ ಪಂಚಾಯಿತಿ ಮತ್ತು ರಾಜ್ಯ ವಲಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮೀನುಗಾರಿಕೆಯ ಸಲಕರಣೆಗಳುಳ್ಳ ಕಿಟ್ ವಿತರಿಸಲಾಗಿದೆ. ಈ ಹಿಂದೆ ಮೀನುಗಾರಿಕೆ ಕಿಟ್ ಪಡೆಯಲು ನೀಡುತ್ತಿದ್ದ ₹10,000 ಸಹಾಯಧನವನ್ನು 2026-27ನೇ ಸಾಲಿನಿಂದ ₹20,000ಕ್ಕೆ ಹೆಚ್ಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>‘ವಿಶೇಷ ಯೋಜನೆಯಡಿ ಈಗಾಗಲೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 35 ಅರ್ಹ ಫಲಾನುಭವಿಗಳಿಗೆ ದೋಣಿ, ಹರಿಗೋಲು ಸೇರಿ ವಿವಿಧ ಪರಿಕರಗಳನ್ನು ವಿತರಿಸಲಾಗಿದೆ’ ಎಂದರು.</p>.<p>‘ಮತ್ಸ್ಯ ಆಶ್ರಯ ಯೋಜನೆಯಡಿ 2024-25ನೇ ಸಾಲಿನಲ್ಲಿ ಎರಡು ಹಂತಗಳಲ್ಲಿ ಒಟ್ಟು 35 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ’ ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಡಿ. ಅಣ್ಣಪ್ಪಸ್ವಾಮಿ ಹೇಳಿದರು.</p>.<p>ಸಹಾಯಕ ನಿರ್ದೇಶಕರಾದ ಸುಮಾ, ಸಿಬ್ಬಂದಿ ಸುಮಾ, ಬಸವರಾಜ್, ಕೌಶಿಕ್ ಗಿರೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-43-870210442</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ‘ಮೀನುಗಾರರ ಕುಟುಂಬದ ಆರ್ಥಿಕ ಮಟ್ಟ ಸುಧಾರಿಸಲು ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.</p>.<p>ಮೀನುಗಾರಿಕೆ ಇಲಾಖೆ ವತಿಯಿಂದ ಈಚೆಗೆ 15 ಫಲಾನುಭವಿಗಳಿಗೆ ಮಿನು ಹಿಡಿಯುವ ಸಲಕರಣೆಗಳ ಕಿಟ್ ವಿತರಿಸಿ ಮಾತನಾಡಿದರು.</p>.<p>‘ಜಿಲ್ಲಾ ಪಂಚಾಯಿತಿ ಮತ್ತು ರಾಜ್ಯ ವಲಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮೀನುಗಾರಿಕೆಯ ಸಲಕರಣೆಗಳುಳ್ಳ ಕಿಟ್ ವಿತರಿಸಲಾಗಿದೆ. ಈ ಹಿಂದೆ ಮೀನುಗಾರಿಕೆ ಕಿಟ್ ಪಡೆಯಲು ನೀಡುತ್ತಿದ್ದ ₹10,000 ಸಹಾಯಧನವನ್ನು 2026-27ನೇ ಸಾಲಿನಿಂದ ₹20,000ಕ್ಕೆ ಹೆಚ್ಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>‘ವಿಶೇಷ ಯೋಜನೆಯಡಿ ಈಗಾಗಲೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 35 ಅರ್ಹ ಫಲಾನುಭವಿಗಳಿಗೆ ದೋಣಿ, ಹರಿಗೋಲು ಸೇರಿ ವಿವಿಧ ಪರಿಕರಗಳನ್ನು ವಿತರಿಸಲಾಗಿದೆ’ ಎಂದರು.</p>.<p>‘ಮತ್ಸ್ಯ ಆಶ್ರಯ ಯೋಜನೆಯಡಿ 2024-25ನೇ ಸಾಲಿನಲ್ಲಿ ಎರಡು ಹಂತಗಳಲ್ಲಿ ಒಟ್ಟು 35 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ’ ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಡಿ. ಅಣ್ಣಪ್ಪಸ್ವಾಮಿ ಹೇಳಿದರು.</p>.<p>ಸಹಾಯಕ ನಿರ್ದೇಶಕರಾದ ಸುಮಾ, ಸಿಬ್ಬಂದಿ ಸುಮಾ, ಬಸವರಾಜ್, ಕೌಶಿಕ್ ಗಿರೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-43-870210442</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>