<p>ಹೊನ್ನಾಳಿ: ‘ತಾಲ್ಲೂಕಿನ ಕೋಣನತಲೆ ಗ್ರಾಮದಲ್ಲಿ ಗುಡ್ಡದ ಬೇವಿನಹಳ್ಳಿ, ಜಿ.ಟಿ. ಕಟ್ಟಿ, ಮುಗಿನಗೊಂದಿ, ಹರಗನಹಳ್ಳಿ, ಹಿರೇಗೋಣಿಗೆರೆ ಗ್ರಾಮಗಳ ಆಂಜನೇಯಸ್ವಾಮಿ ದೇವರ ಪುರಪ್ರವೇಶ ಏ. 26ರಂದು ನಡೆಯಲಿದೆ’ ಎಂದು ಗ್ರಾಮದ ಎನ್. ನಾಗಪ್ಪ ಹಾಗೂ ಡಿ.ಎಸ್. ನಾಗೇಂದ್ರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>27ರಂದು ಬೆಳಗಿನ ಜಾವ 4.15ಕ್ಕೆ ಹಳೇಊರು ಆಂಜನೇಯ ಸ್ವಾಮಿ ಹಾಗೂ ಒಳಕಲ್ಲು ಚೌಡಮ್ಮ ದೇವರುಗಳಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ನಂತರ ಐರಣಿ ಮಠದ ಶ್ರೀಗಳಿಂದ 9.45ಕ್ಕೆ ಕಳಸಾರೋಹಣ, 11 ಗಂಟೆಗೆ ಧರ್ಮಸಭೆ ನಡೆಯಲಿದೆ.</p>.<p>ಬಸವ ಸದ್ಗುರು ಬಸವರಾಜ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಾರೂಢ ಭಾರತಿ ಸ್ವಾಮೀಜಿ, ರಾಜನಹಳ್ಳಿಯ ಪ್ರಸನ್ನಾನಂದ ಸ್ವಾಮೀಜಿ, ನಂದಿಗುಡಿಯ ಸಿದ್ಧರಾಮೇಶ್ವರ ಸ್ವಾಮೀಜಿ, ಹೊಸಹಳ್ಳಿ ವೇಮನ ಮಠದ ವೇಮನಾನಂದ ಸ್ವಾಮೀಜಿ, ರಟ್ಟೇಹಳ್ಳಿ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಶಾಸಕ ಡಿ.ಜಿ. ಶಾಂತನಗೌಡ ಉದ್ಘಾಟಿಸಲಿದ್ದಾರೆ. ಎನ್. ನಾಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಬಯಲು ಸೀಮೆ ಮಂಡಳಿಯ ಅಧ್ಯಕ್ಷರಾದ ಎಚ್.ಬಿ. ಮಂಜಪ್ಪ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ತಾಲ್ಲೂಕಿನ ವಿವಿಧ ಪಕ್ಷಗಳ ಮುಖಂಡರು, ಅಧಿಕಾರಿಗಳು ಆಗಮಿಸಲಿದ್ದಾರೆ.</p>.<p>ವಾಲ್ಮೀಕಿ ಸಮುದಾಯದ ಅಧ್ಯಕ್ಷ ನಾಗೇಂದ್ರಪ್ಪ, ಅಧ್ಯಕ್ಷ ಜಿ.ಬಿ. ಮಲ್ಲನಗೌಡ, ಕಾರ್ಯದರ್ಶಿ ಬಿ.ಎನ್. ಲೋಕೇಶ್, ಮುಖಂಡರಾದ ಸುಭಾಶ್ ಚಂದ್ರ, ಬಿ.ಎಚ್. ಹಾಲಪ್ಪ, ಬಿ.ಸಿ. ಹನುಮಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-43-1509824030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ‘ತಾಲ್ಲೂಕಿನ ಕೋಣನತಲೆ ಗ್ರಾಮದಲ್ಲಿ ಗುಡ್ಡದ ಬೇವಿನಹಳ್ಳಿ, ಜಿ.ಟಿ. ಕಟ್ಟಿ, ಮುಗಿನಗೊಂದಿ, ಹರಗನಹಳ್ಳಿ, ಹಿರೇಗೋಣಿಗೆರೆ ಗ್ರಾಮಗಳ ಆಂಜನೇಯಸ್ವಾಮಿ ದೇವರ ಪುರಪ್ರವೇಶ ಏ. 26ರಂದು ನಡೆಯಲಿದೆ’ ಎಂದು ಗ್ರಾಮದ ಎನ್. ನಾಗಪ್ಪ ಹಾಗೂ ಡಿ.ಎಸ್. ನಾಗೇಂದ್ರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>27ರಂದು ಬೆಳಗಿನ ಜಾವ 4.15ಕ್ಕೆ ಹಳೇಊರು ಆಂಜನೇಯ ಸ್ವಾಮಿ ಹಾಗೂ ಒಳಕಲ್ಲು ಚೌಡಮ್ಮ ದೇವರುಗಳಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ನಂತರ ಐರಣಿ ಮಠದ ಶ್ರೀಗಳಿಂದ 9.45ಕ್ಕೆ ಕಳಸಾರೋಹಣ, 11 ಗಂಟೆಗೆ ಧರ್ಮಸಭೆ ನಡೆಯಲಿದೆ.</p>.<p>ಬಸವ ಸದ್ಗುರು ಬಸವರಾಜ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಾರೂಢ ಭಾರತಿ ಸ್ವಾಮೀಜಿ, ರಾಜನಹಳ್ಳಿಯ ಪ್ರಸನ್ನಾನಂದ ಸ್ವಾಮೀಜಿ, ನಂದಿಗುಡಿಯ ಸಿದ್ಧರಾಮೇಶ್ವರ ಸ್ವಾಮೀಜಿ, ಹೊಸಹಳ್ಳಿ ವೇಮನ ಮಠದ ವೇಮನಾನಂದ ಸ್ವಾಮೀಜಿ, ರಟ್ಟೇಹಳ್ಳಿ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.</p>.<p>ಶಾಸಕ ಡಿ.ಜಿ. ಶಾಂತನಗೌಡ ಉದ್ಘಾಟಿಸಲಿದ್ದಾರೆ. ಎನ್. ನಾಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಬಯಲು ಸೀಮೆ ಮಂಡಳಿಯ ಅಧ್ಯಕ್ಷರಾದ ಎಚ್.ಬಿ. ಮಂಜಪ್ಪ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ತಾಲ್ಲೂಕಿನ ವಿವಿಧ ಪಕ್ಷಗಳ ಮುಖಂಡರು, ಅಧಿಕಾರಿಗಳು ಆಗಮಿಸಲಿದ್ದಾರೆ.</p>.<p>ವಾಲ್ಮೀಕಿ ಸಮುದಾಯದ ಅಧ್ಯಕ್ಷ ನಾಗೇಂದ್ರಪ್ಪ, ಅಧ್ಯಕ್ಷ ಜಿ.ಬಿ. ಮಲ್ಲನಗೌಡ, ಕಾರ್ಯದರ್ಶಿ ಬಿ.ಎನ್. ಲೋಕೇಶ್, ಮುಖಂಡರಾದ ಸುಭಾಶ್ ಚಂದ್ರ, ಬಿ.ಎಚ್. ಹಾಲಪ್ಪ, ಬಿ.ಸಿ. ಹನುಮಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-43-1509824030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>