<p><strong>ಹೊನ್ನಾಳಿ</strong>: ‘ಅನಕ್ಷರಸ್ಥರಿಗೆ ಸ್ವಯಂಸೇವಕರ ಮೂಲಕ ಅಕ್ಷರಜ್ಞಾನವನ್ನುಂಟು ಮಾಡಿ ದೇಶದ ಅನಕ್ಷರತೆಯನ್ನು ಹೋಗಲಾಡಿಸಲು ಸ್ವಯಂಸೇವಕರು ಶ್ರಮಿಸಬೇಕು’ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮಹೇಶ್ ದೊಡ್ಡಮನಿ ಹೇಳಿದರು.</p>.<p>ಮಂಗಳವಾರ ಸರ್ಕಾರಿ ನೌಕರರ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಆಶ್ರಯದಲ್ಲಿ 2025ನೇ ಸಾಲಿನಲ್ಲಿ ಎಲ್ಲರಿಗೂ ಶಿಕ್ಷಣ ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ ನವಭಾರತ, ವಯಸ್ಕರ ಶಿಕ್ಷಣ ಎಂಬ ಕಾರ್ಯಕ್ರಮಗಳ ಮೂಲಕ ಅನಕ್ಷರತೆ ಹೋಗಲಾಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಹೊನ್ನಾಳಿ ತಾಲ್ಲೂಕಿನ ಯಕ್ಕನಹಳ್ಳಿ, ಬೇಲಿಮಲ್ಲೂರು, ಹಿರೇಗೋಣಿಗೆರೆ, ಚಿನ್ನಿಕಟ್ಟೆ, ಹನುಮಸಾಗರ ಈ ಐದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 124 ಸ್ವಯಂ ಸೇವಕರ ಮೂಲಕ 2,475 ಅನಕ್ಷರಸ್ಥರನ್ನು ಗುರುತಿಸಿದ್ದು, ಅವರನ್ನು ಸಾಕ್ಷರರನ್ನಾಗಿ ಮಾಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ. ನಿಂಗಪ್ಪ ಅವರು ಮಾತನಾಡಿ, ‘ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಾಕ್ಷರತೆಯನ್ನುಂಟು ಮಾಡಲು ಎಲ್ಲ ರೀತಿಯ ಸಹಕಾರ ಕೊಡಬೇಕು. ಸ್ವಯಂಸೇವಕರಿಗೆ ₹ 2,500 ಗೌರವಧನವನ್ನು ಜಿಲ್ಲಾ ಪಂಚಾಯಿತಿಯಿಂದ ಕೊಡಲಾಗುವುದು. ಒಬ್ಬ ಅನಕ್ಷರಸ್ಥರನ್ನು ಸ್ವಯಂ ಸೇವಕರು ಗುರುತಿಸಿದರೆ ಅವರಿಗೆ ₹ 5 ಸಹಾಯಧನ ನೀಡಲಿದೆ’ ಎಂದರು.</p>.<p>ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ. ತಿಪ್ಪೇಶಪ್ಪ ಮಾತನಾಡಿ, ‘ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾಕ್ಷರತಾ ಇಲಾಖೆಯ ಅಧಿಕಾರಿಗಳು ಸಾಕ್ಷರಾಭ್ಯಾಸ ಮಾಡಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಸ್ವಯಂಸೇವಕರು ಭಾಗಿಯಾಗಿದ್ದರು.</p>.<p>ಸಮಾರಂಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ. ರಾಮಪ್ಪ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಸುರೇಶ್, ಸೌಮ್ಯಶ್ರೀ, ತಾಲ್ಲೂಕು ವಯಸ್ಕರ ಶಿಕ್ಷಣ ಅಧಿಕಾರಿ (ನೋಡೆಲ್ ಅಧಿಕಾರಿ) ಸುನೀಲ್, ಬಿಆರ್ಪಿ ಅರುಣ್ಕುಮಾರ್ ಉಪಸ್ಥಿತರಿದ್ದರು. ಬಿಆರ್ಪಿ ಮಲ್ಲೇಶ್ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ‘ಅನಕ್ಷರಸ್ಥರಿಗೆ ಸ್ವಯಂಸೇವಕರ ಮೂಲಕ ಅಕ್ಷರಜ್ಞಾನವನ್ನುಂಟು ಮಾಡಿ ದೇಶದ ಅನಕ್ಷರತೆಯನ್ನು ಹೋಗಲಾಡಿಸಲು ಸ್ವಯಂಸೇವಕರು ಶ್ರಮಿಸಬೇಕು’ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮಹೇಶ್ ದೊಡ್ಡಮನಿ ಹೇಳಿದರು.</p>.<p>ಮಂಗಳವಾರ ಸರ್ಕಾರಿ ನೌಕರರ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಆಶ್ರಯದಲ್ಲಿ 2025ನೇ ಸಾಲಿನಲ್ಲಿ ಎಲ್ಲರಿಗೂ ಶಿಕ್ಷಣ ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ ನವಭಾರತ, ವಯಸ್ಕರ ಶಿಕ್ಷಣ ಎಂಬ ಕಾರ್ಯಕ್ರಮಗಳ ಮೂಲಕ ಅನಕ್ಷರತೆ ಹೋಗಲಾಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಹೊನ್ನಾಳಿ ತಾಲ್ಲೂಕಿನ ಯಕ್ಕನಹಳ್ಳಿ, ಬೇಲಿಮಲ್ಲೂರು, ಹಿರೇಗೋಣಿಗೆರೆ, ಚಿನ್ನಿಕಟ್ಟೆ, ಹನುಮಸಾಗರ ಈ ಐದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 124 ಸ್ವಯಂ ಸೇವಕರ ಮೂಲಕ 2,475 ಅನಕ್ಷರಸ್ಥರನ್ನು ಗುರುತಿಸಿದ್ದು, ಅವರನ್ನು ಸಾಕ್ಷರರನ್ನಾಗಿ ಮಾಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ. ನಿಂಗಪ್ಪ ಅವರು ಮಾತನಾಡಿ, ‘ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಾಕ್ಷರತೆಯನ್ನುಂಟು ಮಾಡಲು ಎಲ್ಲ ರೀತಿಯ ಸಹಕಾರ ಕೊಡಬೇಕು. ಸ್ವಯಂಸೇವಕರಿಗೆ ₹ 2,500 ಗೌರವಧನವನ್ನು ಜಿಲ್ಲಾ ಪಂಚಾಯಿತಿಯಿಂದ ಕೊಡಲಾಗುವುದು. ಒಬ್ಬ ಅನಕ್ಷರಸ್ಥರನ್ನು ಸ್ವಯಂ ಸೇವಕರು ಗುರುತಿಸಿದರೆ ಅವರಿಗೆ ₹ 5 ಸಹಾಯಧನ ನೀಡಲಿದೆ’ ಎಂದರು.</p>.<p>ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ. ತಿಪ್ಪೇಶಪ್ಪ ಮಾತನಾಡಿ, ‘ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾಕ್ಷರತಾ ಇಲಾಖೆಯ ಅಧಿಕಾರಿಗಳು ಸಾಕ್ಷರಾಭ್ಯಾಸ ಮಾಡಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಸ್ವಯಂಸೇವಕರು ಭಾಗಿಯಾಗಿದ್ದರು.</p>.<p>ಸಮಾರಂಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ. ರಾಮಪ್ಪ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಸುರೇಶ್, ಸೌಮ್ಯಶ್ರೀ, ತಾಲ್ಲೂಕು ವಯಸ್ಕರ ಶಿಕ್ಷಣ ಅಧಿಕಾರಿ (ನೋಡೆಲ್ ಅಧಿಕಾರಿ) ಸುನೀಲ್, ಬಿಆರ್ಪಿ ಅರುಣ್ಕುಮಾರ್ ಉಪಸ್ಥಿತರಿದ್ದರು. ಬಿಆರ್ಪಿ ಮಲ್ಲೇಶ್ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>