<p><strong>ಹೊನ್ನಾಳಿ</strong>: ಬುದ್ಧಿವಂತಿಕೆ ಹಾಗೂ ಜ್ಞಾನಕ್ಕೆ ತಕ್ಕಂತೆ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ದೇಶ ಸೇವೆ ಮಾಡಿ ಎಂದು ಐಎಎಸ್ ಇನ್ಸೈಟ್ಸ್ ಸಂಸ್ಥಾಪಕ ಜಿ.ಬಿ. ವಿನಯ್ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಶುಕ್ರವಾರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ವೇಳೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಆಲ್ ಇಂಡಿಯಾ ಸರ್ವೀಸ್ ಎಂದು ಕರೆಯಲಾಗುವ ಐಎಎಸ್, ಐಪಿಎಸ್, ಐಆರ್ಎಸ್ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿವೆ. ಕ್ಲಾಟ್ ಪರೀಕ್ಷೆ ಬಗ್ಗೆ ತಿಳಿದುಕೊಳ್ಳಿ. ಏಷ್ಯಾದಲ್ಲಿಯೇ ಅತ್ಯುತ್ತಮ ಕಾನೂನು ಕಾಲೇಜು ಎನಿಸಿರುವ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ನಲ್ಲಿ ಓದಿದವರಿಗೆ ವಾರ್ಷಿಕ ₹2 ಕೋಟಿ ವೇತನವಿದೆ. ನೂರಾರು ಕಾರ್ಪೊರೆಟ್ ಕಂಪನಿಗಳಿದ್ದು, ಅಲ್ಲಿಯೂ ಅಧಿಕ ವೇತನವಿದೆ’ ಎಂದರು.</p>.<p>‘ಪಠ್ಯದ ಜೊತೆ ಇತರೆ ಪುಸ್ತಕಗಳನ್ನು ಓದಿ. ಉತ್ತಮ ಸಾಹಿತ್ಯದ ಪುಸ್ತಕಗಳಿಂದ ಜ್ಞಾನ ವೃದ್ಧಿಸುತ್ತದೆ. ನಿಮ್ಮ ಶಕ್ತಿ ಇಮ್ಮಡಿಯಾಗಿ, ಪ್ರಬುದ್ಧರಾಗುತ್ತೀರಿ’ ಎಂದು ಸಲಹೆ ನೀಡಿದರು.</p>.<p>ಉಪಪ್ರಾಂಶಪಾಲ ಎ.ಕೆ. ಚನ್ನೇಶ್ ಸಂವಾದ ನಡೆಸಿಕೊಟ್ಟರು. ಪ್ರಾಂಶುಪಾಲ ಧನಂಜಯ್, ಎಸ್ಡಿಎಂಸಿ ಅಧ್ಯಕ್ಷ ಕರಿಬಸಪ್ಪ, ಉಪಾಧ್ಯಕ್ಷೆ ಉಷಾ, ಸದಸ್ಯರಾದ ಪರಮೇಶ್ವರ್, ಪರಮೇಶ್ವರನಾಯ್ಕ, ಲೋಕೇಶಪ್ಪ, ರೂಪಾಬೀರಪ್ಪ ಉಪಸ್ಥಿತರಿದ್ದರು. ನೂರಾರು ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ಬುದ್ಧಿವಂತಿಕೆ ಹಾಗೂ ಜ್ಞಾನಕ್ಕೆ ತಕ್ಕಂತೆ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ದೇಶ ಸೇವೆ ಮಾಡಿ ಎಂದು ಐಎಎಸ್ ಇನ್ಸೈಟ್ಸ್ ಸಂಸ್ಥಾಪಕ ಜಿ.ಬಿ. ವಿನಯ್ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಶುಕ್ರವಾರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ವೇಳೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಆಲ್ ಇಂಡಿಯಾ ಸರ್ವೀಸ್ ಎಂದು ಕರೆಯಲಾಗುವ ಐಎಎಸ್, ಐಪಿಎಸ್, ಐಆರ್ಎಸ್ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿವೆ. ಕ್ಲಾಟ್ ಪರೀಕ್ಷೆ ಬಗ್ಗೆ ತಿಳಿದುಕೊಳ್ಳಿ. ಏಷ್ಯಾದಲ್ಲಿಯೇ ಅತ್ಯುತ್ತಮ ಕಾನೂನು ಕಾಲೇಜು ಎನಿಸಿರುವ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ನಲ್ಲಿ ಓದಿದವರಿಗೆ ವಾರ್ಷಿಕ ₹2 ಕೋಟಿ ವೇತನವಿದೆ. ನೂರಾರು ಕಾರ್ಪೊರೆಟ್ ಕಂಪನಿಗಳಿದ್ದು, ಅಲ್ಲಿಯೂ ಅಧಿಕ ವೇತನವಿದೆ’ ಎಂದರು.</p>.<p>‘ಪಠ್ಯದ ಜೊತೆ ಇತರೆ ಪುಸ್ತಕಗಳನ್ನು ಓದಿ. ಉತ್ತಮ ಸಾಹಿತ್ಯದ ಪುಸ್ತಕಗಳಿಂದ ಜ್ಞಾನ ವೃದ್ಧಿಸುತ್ತದೆ. ನಿಮ್ಮ ಶಕ್ತಿ ಇಮ್ಮಡಿಯಾಗಿ, ಪ್ರಬುದ್ಧರಾಗುತ್ತೀರಿ’ ಎಂದು ಸಲಹೆ ನೀಡಿದರು.</p>.<p>ಉಪಪ್ರಾಂಶಪಾಲ ಎ.ಕೆ. ಚನ್ನೇಶ್ ಸಂವಾದ ನಡೆಸಿಕೊಟ್ಟರು. ಪ್ರಾಂಶುಪಾಲ ಧನಂಜಯ್, ಎಸ್ಡಿಎಂಸಿ ಅಧ್ಯಕ್ಷ ಕರಿಬಸಪ್ಪ, ಉಪಾಧ್ಯಕ್ಷೆ ಉಷಾ, ಸದಸ್ಯರಾದ ಪರಮೇಶ್ವರ್, ಪರಮೇಶ್ವರನಾಯ್ಕ, ಲೋಕೇಶಪ್ಪ, ರೂಪಾಬೀರಪ್ಪ ಉಪಸ್ಥಿತರಿದ್ದರು. ನೂರಾರು ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>