<p><strong>ಹೊನ್ನಾಳಿ:</strong> ಪಟ್ಟಣದಲ್ಲಿ ಸುಗಮ ಸಂಚಾರಕ್ಕಾಗಿ ಒಂದು ಬದಿ ಪಾರ್ಕಿಂಗ್ ವ್ಯವಸ್ಥೆಗೆ ತೀರ್ಮಾನ ಕೈಗೊಂಡಿದ್ದು, ವರ್ತಕರು ಸಹಕಾರ ನೀಡಬೇಕು ಎಂದು ಚನ್ನಗಿರಿ ಉಪವಿಭಾಗದ ಎಎಸ್ಪಿ ಸ್ಯಾಮ್ ವರ್ಗೀಸ್ ಹೇಳಿದರು. </p>.<p>ಬುಧವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸುಗಮ ಸಂಚಾರ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. </p>.<p>ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕೆನರಾ ಬ್ಯಾಂಕ್ವರೆಗೂ ದ್ವಿಚಕ್ರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಗೆ ತೀರ್ಮಾನಿಸಲಾಗಿದೆ. ವಾಹನಗಳ ಮಾಲೀಕರು ರಸ್ತೆಯ ಒಂದು ಬದಿಯಲ್ಲಿ ಪೊಲೀಸರು ಗುರುತು ಮಾಡಿರುವ ಸ್ಥಳದಲ್ಲೇ ವಾಹನಗಳನ್ನು ನಿಲ್ಲಿಸಬೇಕು ಎಂದರು. </p>.<p>ಉಪ ವಿಭಾಗಾಧಿಕಾರಿ ವಿ.ಅಭಿಷೇಕ್ ಮಾತನಾಡಿ, ಪುರಸಭೆಯಿಂದ ಯಾವುದೇ ಟ್ರೇಡ್ ಪರವಾನಗಿ ತೆಗೆದುಕೊಳ್ಳದ ಅನಧಿಕೃತ ಅಂಗಡಿ ಹಾಗೂ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಮುಖ್ಯಾಧಿಕಾರಿ ಟಿ. ಲೀಲಾವತಿ ಅವರಿಗೆ ಸೂಚಿಸಿದರು. </p>.<p>ಪ್ರತಿ ಬುಧವಾರ ಕೆನರಾ ಬ್ಯಾಂಕ್ ಸರ್ಕಲ್ನಲ್ಲಿ ಎತ್ತುಗಳ ವ್ಯಾಪಾರದ ವೇಳೆ ಸಂಚಾರ ವ್ಯವಸ್ಥೆ ಹಡಗೆಡುತ್ತದೆ. ಇದರಿಂದ ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಹೇಳಿದರು. </p>.<p>ಸಿಪಿಐ ಸುನಿಲ್ಕುಮಾರ್ ಮಾತನಾಡಿ, ಸರ್ಕಾರಿ ಬಸ್ಗಳನ್ನು ನಿಲುಗಡೆ ಮಾಡಲು ಸ್ಥಳ ನಿಗದಿಯಾಗಿದ್ದರೂ, ಚಾಲಕರು ಎಲ್ಲೆಂದರಲ್ಲಿ ಬಸ್ಗಳನ್ನು ನಿಲ್ಲಿಸುತ್ತಾರೆ. ಈ ಬಗ್ಗೆ ಸರ್ಕಾರಿ ಬಸ್ ಡಿಪೋದ ವ್ಯವಸ್ಥಾಪಕರು ಕ್ರಮ ಕೈಗೊಳ್ಳಬೇಕು. ರಸ್ತೆಯ ಇಕ್ಕೆಲಗಳಲ್ಲಿ ತಳ್ಳುವ ಗಾಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡಲಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಇನ್ನು ಮುಂದೆ ಇದಕ್ಕೆ ಅವಕಾಶ ಕೊಡಬಾರದು ಎಂದರು. </p>.<p>ಪುರಸಭೆ ಅಧ್ಯಕ್ಷ ಮೈಲಪ್ಪ, ಉಪಾಧ್ಯಕ್ಷೆ ಸಾವಿತ್ರಮ್ಮ ವಿಜೇಂದ್ರಪ್ಪ, ಸದಸ್ಯರಾದ ಕೆ.ವಿ.ಶ್ರೀಧರ್, ರಂಗನಾಥ್, ಹೊಸಕೇರಿ ಸುರೇಶ್, ಗ್ರೇಡ್ –2 ತಹಶೀಲ್ದಾರ್ ಸುರೇಶ್, ಎಂಜಿನಿಯರ್ ದೇವರಾಜ್ ಹಾಗೂ ವರ್ತಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಪಟ್ಟಣದಲ್ಲಿ ಸುಗಮ ಸಂಚಾರಕ್ಕಾಗಿ ಒಂದು ಬದಿ ಪಾರ್ಕಿಂಗ್ ವ್ಯವಸ್ಥೆಗೆ ತೀರ್ಮಾನ ಕೈಗೊಂಡಿದ್ದು, ವರ್ತಕರು ಸಹಕಾರ ನೀಡಬೇಕು ಎಂದು ಚನ್ನಗಿರಿ ಉಪವಿಭಾಗದ ಎಎಸ್ಪಿ ಸ್ಯಾಮ್ ವರ್ಗೀಸ್ ಹೇಳಿದರು. </p>.<p>ಬುಧವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸುಗಮ ಸಂಚಾರ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. </p>.<p>ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕೆನರಾ ಬ್ಯಾಂಕ್ವರೆಗೂ ದ್ವಿಚಕ್ರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಗೆ ತೀರ್ಮಾನಿಸಲಾಗಿದೆ. ವಾಹನಗಳ ಮಾಲೀಕರು ರಸ್ತೆಯ ಒಂದು ಬದಿಯಲ್ಲಿ ಪೊಲೀಸರು ಗುರುತು ಮಾಡಿರುವ ಸ್ಥಳದಲ್ಲೇ ವಾಹನಗಳನ್ನು ನಿಲ್ಲಿಸಬೇಕು ಎಂದರು. </p>.<p>ಉಪ ವಿಭಾಗಾಧಿಕಾರಿ ವಿ.ಅಭಿಷೇಕ್ ಮಾತನಾಡಿ, ಪುರಸಭೆಯಿಂದ ಯಾವುದೇ ಟ್ರೇಡ್ ಪರವಾನಗಿ ತೆಗೆದುಕೊಳ್ಳದ ಅನಧಿಕೃತ ಅಂಗಡಿ ಹಾಗೂ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಮುಖ್ಯಾಧಿಕಾರಿ ಟಿ. ಲೀಲಾವತಿ ಅವರಿಗೆ ಸೂಚಿಸಿದರು. </p>.<p>ಪ್ರತಿ ಬುಧವಾರ ಕೆನರಾ ಬ್ಯಾಂಕ್ ಸರ್ಕಲ್ನಲ್ಲಿ ಎತ್ತುಗಳ ವ್ಯಾಪಾರದ ವೇಳೆ ಸಂಚಾರ ವ್ಯವಸ್ಥೆ ಹಡಗೆಡುತ್ತದೆ. ಇದರಿಂದ ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಹೇಳಿದರು. </p>.<p>ಸಿಪಿಐ ಸುನಿಲ್ಕುಮಾರ್ ಮಾತನಾಡಿ, ಸರ್ಕಾರಿ ಬಸ್ಗಳನ್ನು ನಿಲುಗಡೆ ಮಾಡಲು ಸ್ಥಳ ನಿಗದಿಯಾಗಿದ್ದರೂ, ಚಾಲಕರು ಎಲ್ಲೆಂದರಲ್ಲಿ ಬಸ್ಗಳನ್ನು ನಿಲ್ಲಿಸುತ್ತಾರೆ. ಈ ಬಗ್ಗೆ ಸರ್ಕಾರಿ ಬಸ್ ಡಿಪೋದ ವ್ಯವಸ್ಥಾಪಕರು ಕ್ರಮ ಕೈಗೊಳ್ಳಬೇಕು. ರಸ್ತೆಯ ಇಕ್ಕೆಲಗಳಲ್ಲಿ ತಳ್ಳುವ ಗಾಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡಲಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಇನ್ನು ಮುಂದೆ ಇದಕ್ಕೆ ಅವಕಾಶ ಕೊಡಬಾರದು ಎಂದರು. </p>.<p>ಪುರಸಭೆ ಅಧ್ಯಕ್ಷ ಮೈಲಪ್ಪ, ಉಪಾಧ್ಯಕ್ಷೆ ಸಾವಿತ್ರಮ್ಮ ವಿಜೇಂದ್ರಪ್ಪ, ಸದಸ್ಯರಾದ ಕೆ.ವಿ.ಶ್ರೀಧರ್, ರಂಗನಾಥ್, ಹೊಸಕೇರಿ ಸುರೇಶ್, ಗ್ರೇಡ್ –2 ತಹಶೀಲ್ದಾರ್ ಸುರೇಶ್, ಎಂಜಿನಿಯರ್ ದೇವರಾಜ್ ಹಾಗೂ ವರ್ತಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>