<p><strong>ಹೊನ್ನಾಳಿ</strong>: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಕಾರ್ಡ್) ಪ್ರಸಕ್ತ ಸಾಲಿಗೆ ₹ 44.01 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಕೆ.ಜಿ. ರಮೇಶ್ ಹೇಳಿದರು. </p>.<p>ಪಟ್ಟಣದ ಹಿರೇಕಲ್ಮಠದ ಚನ್ನಪ್ಪಸ್ವಾಮಿ ಸಮುದಾಯ ಭವನದಲ್ಲಿ ನಡೆದ ಬ್ಯಾಂಕ್ನ 87ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p>.<p>ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ ನಮ್ಮ ಬ್ಯಾಂಕ್ ತನ್ನ ಲಾಭಾಂಶದ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ. ಇದಕ್ಕೆ ಬ್ಯಾಂಕ್ನ ಎಲ್ಲಾ ಸದಸ್ಯರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಸಹಕಾರ ಕಾರಣ ಎಂದರು. </p>.<p>ಹೊನ್ನಾಳಿ ಪಟ್ಟಣದಲ್ಲಿ 1938ರಲ್ಲಿ ಸ್ಥಾಪನೆಗೊಂಡ ಪಿಎಲ್ಡಿ ಬ್ಯಾಂಕ್, ತನ್ನ ಅನೇಕ ಏಳು ಬೀಳುಗಳ ನಡುವೆ ರೈತರಿಗೆ ಸಾಲಸೌಲಭ್ಯವನ್ನು ಒದಗಿಸಿಕೊಡುವ ಕೆಲಸ ಮಾಡಿದೆ. ನಮ್ಮ ಬ್ಯಾಂಕಿನ ಕಾರ್ಯವ್ಯಾಪ್ತಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕನ್ನು ಹೊಂದಿದೆ. ಒಟ್ಟು 6,123 ಸದಸ್ಯರನ್ನು ಹೊಂದಿದೆ ಎಂದರು. </p>.<p>ಜಿಲ್ಲಾ ಸಹಕಾರಿ ಬ್ಯಾಂಕ್ನ ವ್ಯವಸ್ಥಾಪಕಿ ಶ್ವೇತಾ, ಹೊನ್ನಾಳಿಯ ಈ ಬ್ಯಾಂಕ್ ಜಿಲ್ಲೆಯಲ್ಲಿ ಮೂರನೇ ಸ್ಥಾನ, ರಾಜ್ಯದಲ್ಲಿ 43ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಅತ್ಯುತ್ತಮ ಬ್ಯಾಂಕ್ ಆಗಿ ಸೇವೆ ಸಲ್ಲಿಸುತ್ತಿದೆ ಎಂದು ತಿಳಿಸಿದರು. </p>.<p>ಬ್ಯಾಂಕ್ನ ನಿರ್ದೇಶಕ ರಾಘವೇಂದ್ರ ಅನುಪಾಲನಾ ವರದಿ ಮಂಡಿಸಿದರು. ನಿರ್ದೇಶಕ ಕೆ.ವಿ. ನಾಗರಾಜ್ ಲೆಕ್ಕ ಪರಿಶೋಧಕರ ಆಯ್ಕೆ ವಿಷಯ ಮಂಡಿಸಿದರು. ನಿರ್ದೇಶಕ ಎಂ.ಜಿ.ಆರ್. ಮಂಜುನಾಥ್ ಮಾತನಾಡಿದರು. ಬ್ಯಾಂಕ್ನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. </p>.<p>ಬ್ಯಾಂಕ್ನ ಉಪಾಧ್ಯಕ್ಷೆ ರುದ್ರಮ್ಮ ಹೊಟ್ಯಾಪುರ, ನಿರ್ದೇಶಕರಾದ ಜಿ. ಶಂಕರಪ್ಪ, ಸಿ.ಎಚ್.ಸಿದ್ದಪ್ಪ, ಎಸ್.ಕುಬೇರನಾಯ್ಕ, ಕೆ. ಚೇತನ್, ಎಚ್.ಡಿ. ಸುನೀಲ್ಕುಮಾರ್, ಅನಸೂಯಮ್ಮ, ಆಶಾ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ನ ವ್ಯವಸ್ಥಾಪಕ ಸಿ.ಎನ್. ವಿಶಾಲಾಕ್ಷಿ ಹಾಗೂ ಸಿಬ್ಬಂದಿ ಹಾಗೂ ರೈತ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಕಾರ್ಡ್) ಪ್ರಸಕ್ತ ಸಾಲಿಗೆ ₹ 44.01 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಕೆ.ಜಿ. ರಮೇಶ್ ಹೇಳಿದರು. </p>.<p>ಪಟ್ಟಣದ ಹಿರೇಕಲ್ಮಠದ ಚನ್ನಪ್ಪಸ್ವಾಮಿ ಸಮುದಾಯ ಭವನದಲ್ಲಿ ನಡೆದ ಬ್ಯಾಂಕ್ನ 87ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p>.<p>ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ ನಮ್ಮ ಬ್ಯಾಂಕ್ ತನ್ನ ಲಾಭಾಂಶದ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ. ಇದಕ್ಕೆ ಬ್ಯಾಂಕ್ನ ಎಲ್ಲಾ ಸದಸ್ಯರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಸಹಕಾರ ಕಾರಣ ಎಂದರು. </p>.<p>ಹೊನ್ನಾಳಿ ಪಟ್ಟಣದಲ್ಲಿ 1938ರಲ್ಲಿ ಸ್ಥಾಪನೆಗೊಂಡ ಪಿಎಲ್ಡಿ ಬ್ಯಾಂಕ್, ತನ್ನ ಅನೇಕ ಏಳು ಬೀಳುಗಳ ನಡುವೆ ರೈತರಿಗೆ ಸಾಲಸೌಲಭ್ಯವನ್ನು ಒದಗಿಸಿಕೊಡುವ ಕೆಲಸ ಮಾಡಿದೆ. ನಮ್ಮ ಬ್ಯಾಂಕಿನ ಕಾರ್ಯವ್ಯಾಪ್ತಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕನ್ನು ಹೊಂದಿದೆ. ಒಟ್ಟು 6,123 ಸದಸ್ಯರನ್ನು ಹೊಂದಿದೆ ಎಂದರು. </p>.<p>ಜಿಲ್ಲಾ ಸಹಕಾರಿ ಬ್ಯಾಂಕ್ನ ವ್ಯವಸ್ಥಾಪಕಿ ಶ್ವೇತಾ, ಹೊನ್ನಾಳಿಯ ಈ ಬ್ಯಾಂಕ್ ಜಿಲ್ಲೆಯಲ್ಲಿ ಮೂರನೇ ಸ್ಥಾನ, ರಾಜ್ಯದಲ್ಲಿ 43ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಅತ್ಯುತ್ತಮ ಬ್ಯಾಂಕ್ ಆಗಿ ಸೇವೆ ಸಲ್ಲಿಸುತ್ತಿದೆ ಎಂದು ತಿಳಿಸಿದರು. </p>.<p>ಬ್ಯಾಂಕ್ನ ನಿರ್ದೇಶಕ ರಾಘವೇಂದ್ರ ಅನುಪಾಲನಾ ವರದಿ ಮಂಡಿಸಿದರು. ನಿರ್ದೇಶಕ ಕೆ.ವಿ. ನಾಗರಾಜ್ ಲೆಕ್ಕ ಪರಿಶೋಧಕರ ಆಯ್ಕೆ ವಿಷಯ ಮಂಡಿಸಿದರು. ನಿರ್ದೇಶಕ ಎಂ.ಜಿ.ಆರ್. ಮಂಜುನಾಥ್ ಮಾತನಾಡಿದರು. ಬ್ಯಾಂಕ್ನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. </p>.<p>ಬ್ಯಾಂಕ್ನ ಉಪಾಧ್ಯಕ್ಷೆ ರುದ್ರಮ್ಮ ಹೊಟ್ಯಾಪುರ, ನಿರ್ದೇಶಕರಾದ ಜಿ. ಶಂಕರಪ್ಪ, ಸಿ.ಎಚ್.ಸಿದ್ದಪ್ಪ, ಎಸ್.ಕುಬೇರನಾಯ್ಕ, ಕೆ. ಚೇತನ್, ಎಚ್.ಡಿ. ಸುನೀಲ್ಕುಮಾರ್, ಅನಸೂಯಮ್ಮ, ಆಶಾ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ನ ವ್ಯವಸ್ಥಾಪಕ ಸಿ.ಎನ್. ವಿಶಾಲಾಕ್ಷಿ ಹಾಗೂ ಸಿಬ್ಬಂದಿ ಹಾಗೂ ರೈತ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>