<p>ಹೊನ್ನಾಳಿ: ‘ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಅವರ ಜತೆ ಸೌಜನ್ಯದಿಂದ ವರ್ತಿಸಬೇಕು’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ಪೊಲೀಸರಿಗೆ ಸಲಹೆ ನೀಡಿದರು.</p>.<p>ಶನಿವಾರ ಪಟ್ಟಣದ ದೇವನಾಯಕನಹಳ್ಳಿಯಲ್ಲಿರುವ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯಲ್ಲಿನ ಕುಂದು– ಕೊರತೆಗಳನ್ನು ಪರಿಶೀಲಿಸಿದ ವೇಳೆ ಅವರು ಮಾತನಾಡಿದರು.</p>.<p>‘ವಾಹನ ತಪಾಸಣೆ ಅಥವಾ ದಂಡದ ಮೊತ್ತ ವಸೂಲಿ ಮಾಡುವಾಗ ಸಾರ್ವಜನಿಕರ ಜತೆ ಸ್ನೇಹದಿಂದ ವರ್ತಿಸಬೇಕು’ ಎಂದು ಹೇಳಿದರು.</p>.<p>‘ಹೊನ್ನಾಳಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕವನ್ನು ಸಂಪರ್ಕಿಸುವ ಕೇಂದ್ರವಾಗಿದೆ. ಇಲ್ಲಿನ ತುಂಗಭದ್ರಾ ನದಿ ಕೂಡ ಉತ್ತರ ಹಾಗೂ ದಕ್ಷಿಣ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಅಲ್ಲದೆ ಮಲೆನಾಡನ್ನು ಕೂಡ ಸಂಪರ್ಕಿಸುವ ಈ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವವರು ಎಲ್ಲರೂ ಧನ್ಯರು’ ಎಂದು ಹೇಳಿದರು.</p>.<p>‘ಉತ್ತರದಿಂದ ದಕ್ಷಿಣಕ್ಕೆ ಬರುವ ವಾಹನಗಳ ತಪಾಸಣೆಯ ಬಗ್ಗೆ ಬಹಳ ಎಚ್ಚರಿಕೆ ಇರಬೇಕು. ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ. ಹೀಗಾಗಿ ಹೊನ್ನಾಳಿ ತಾಲ್ಲೂಕಿನಾದ್ಯಂತ ರಸ್ತೆ ಸುರಕ್ಷತೆ ಬಗ್ಗೆ ಯುವಕರಿಗೆ ಜಾಗೃತಿ ಮೂಡಿಸಬೇಕು. ಮಾದಕ ವಸ್ತುಗಳ ಸೇವನೆಯಿಂದಾಗುವ ಅನಾಹುತಗಳ ಬಗ್ಗೆಯೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಿಪಿಐಗೆ ಸೂಚಿಸಿದರು.</p>.<p>ಠಾಣೆ ನವೀಕರಣದ ಬಗ್ಗೆ ಮೆಚ್ಚುಗೆ: ಕಳೆದ ವರ್ಷ ಹೊನ್ನಾಳಿ ಠಾಣೆಯನ್ನು ಹೈಟೆಕ್ ಪೊಲೀಸ್ ಠಾಣೆಯನ್ನಾಗಿ ನವೀಕರಣ ಮಾಡಿರುವುದನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದೇ ರೀತಿಯಲ್ಲಿ ಎಲ್ಲ ಪೊಲೀಸ್ ಠಾಣೆಗಳು ಇರಬೇಕು ಎಂದರು.</p>.<p>ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ, ಡಿವೈಎಸ್ಪಿ ಬಸವರಾಜ್, ಪೊಲೀಸ್ ಇನ್ಸ್ಪೆಕ್ಟರ್ ಎಚ್. ಸುನಿಲ್ಕುಮಾರ್ ಹಾಗೂ ಠಾಣಾ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-43-1084904116</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ‘ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಅವರ ಜತೆ ಸೌಜನ್ಯದಿಂದ ವರ್ತಿಸಬೇಕು’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ಪೊಲೀಸರಿಗೆ ಸಲಹೆ ನೀಡಿದರು.</p>.<p>ಶನಿವಾರ ಪಟ್ಟಣದ ದೇವನಾಯಕನಹಳ್ಳಿಯಲ್ಲಿರುವ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯಲ್ಲಿನ ಕುಂದು– ಕೊರತೆಗಳನ್ನು ಪರಿಶೀಲಿಸಿದ ವೇಳೆ ಅವರು ಮಾತನಾಡಿದರು.</p>.<p>‘ವಾಹನ ತಪಾಸಣೆ ಅಥವಾ ದಂಡದ ಮೊತ್ತ ವಸೂಲಿ ಮಾಡುವಾಗ ಸಾರ್ವಜನಿಕರ ಜತೆ ಸ್ನೇಹದಿಂದ ವರ್ತಿಸಬೇಕು’ ಎಂದು ಹೇಳಿದರು.</p>.<p>‘ಹೊನ್ನಾಳಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕವನ್ನು ಸಂಪರ್ಕಿಸುವ ಕೇಂದ್ರವಾಗಿದೆ. ಇಲ್ಲಿನ ತುಂಗಭದ್ರಾ ನದಿ ಕೂಡ ಉತ್ತರ ಹಾಗೂ ದಕ್ಷಿಣ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಅಲ್ಲದೆ ಮಲೆನಾಡನ್ನು ಕೂಡ ಸಂಪರ್ಕಿಸುವ ಈ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವವರು ಎಲ್ಲರೂ ಧನ್ಯರು’ ಎಂದು ಹೇಳಿದರು.</p>.<p>‘ಉತ್ತರದಿಂದ ದಕ್ಷಿಣಕ್ಕೆ ಬರುವ ವಾಹನಗಳ ತಪಾಸಣೆಯ ಬಗ್ಗೆ ಬಹಳ ಎಚ್ಚರಿಕೆ ಇರಬೇಕು. ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ. ಹೀಗಾಗಿ ಹೊನ್ನಾಳಿ ತಾಲ್ಲೂಕಿನಾದ್ಯಂತ ರಸ್ತೆ ಸುರಕ್ಷತೆ ಬಗ್ಗೆ ಯುವಕರಿಗೆ ಜಾಗೃತಿ ಮೂಡಿಸಬೇಕು. ಮಾದಕ ವಸ್ತುಗಳ ಸೇವನೆಯಿಂದಾಗುವ ಅನಾಹುತಗಳ ಬಗ್ಗೆಯೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಿಪಿಐಗೆ ಸೂಚಿಸಿದರು.</p>.<p>ಠಾಣೆ ನವೀಕರಣದ ಬಗ್ಗೆ ಮೆಚ್ಚುಗೆ: ಕಳೆದ ವರ್ಷ ಹೊನ್ನಾಳಿ ಠಾಣೆಯನ್ನು ಹೈಟೆಕ್ ಪೊಲೀಸ್ ಠಾಣೆಯನ್ನಾಗಿ ನವೀಕರಣ ಮಾಡಿರುವುದನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದೇ ರೀತಿಯಲ್ಲಿ ಎಲ್ಲ ಪೊಲೀಸ್ ಠಾಣೆಗಳು ಇರಬೇಕು ಎಂದರು.</p>.<p>ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ, ಡಿವೈಎಸ್ಪಿ ಬಸವರಾಜ್, ಪೊಲೀಸ್ ಇನ್ಸ್ಪೆಕ್ಟರ್ ಎಚ್. ಸುನಿಲ್ಕುಮಾರ್ ಹಾಗೂ ಠಾಣಾ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-43-1084904116</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>