<p><strong>ಹೊನ್ನಾಳಿ:</strong> ಸರ್ಕಾರಿ ಶಾಲೆ, ಕಾಲೇಜುಗಳಿಗೆ ಸಾಕಷ್ಟು ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆ, ಕಾಲೇಜುಗಳಿಗೆ ದಾಖಲಿಸುವ ಮೂಲಕ ಬೆಂಬಲ ನೀಡಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.</p>.<p>ಸೋಮವಾರ ಟಿ.ಬಿ. ವೃತ್ತದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿ ಅವರು ಮಾತನಾಡಿದರು.</p>.<p>‘ಶಾಸಕರು ಕಾಲೇಜಿಗೆ ಆಗಾಗ್ಗೆ ಭೇಟಿ ನೀಡುವ ಮೂಲಕ ಇಲ್ಲಿನ ಕುಂದು ಕೊರತೆಗಳನ್ನು ಈಡೇರಿಸುತ್ತಿದ್ದಾರೆ. ಸದ್ಯಕ್ಕೆ ಎರಡು ‘ಡಿ’ ದರ್ಜೆ ನೌಕರರ ಹುದ್ದೆಗಳ ಕೊರತೆ ಇದ್ದು, ಅದನ್ನು ತುಂಬಿಕೊಡಬೇಕು’ ಎಂದು ಪ್ರಾಂಶುಪಾಲ ರಾಮಚಂದ್ರಪ್ಪ ಕೋರಿದರು.</p>.<p>‘ಕಾಲೇಜಿನ ಆವರಣ ಗೋಡೆಗೆ ಹೊಂದಿಕೊಂಡಂತೆ ಗಿಡಗಂಟಿಗಳು ಬೆಳೆದಿದ್ದು, ಅವನ್ನು ತೆರವುಗೊಳಿಸಿಕೊಡಬೇಕು. ಕಾಲೇಜು ಮೈದಾನ ತಗ್ಗಿನಿಂದ ಕೂಡಿದ್ದು, ಮಳೆ ನೀರು ಸಂಗ್ರಹವಾಗುತ್ತಿದೆ. ಆದ್ದರಿಂದ ಮೈದಾನಕ್ಕೆ ಮಣ್ಣು ತುಂಬಿಸಿ ಎತ್ತರ ಮಾಡಿಸಬೇಕು. ತ್ಯಾಜ್ಯದ ನೀರು ಹೊರಹೋಗಲು ಪೈಪ್ಲೈನ್ಗಳನ್ನು ಅಳವಡಿಸಿಕೊಡಬೇಕು’ ಎಂದು ಮನವಿ ಮಾಡಿದರು.</p>.<p>ಕಾಲೇಜಿನ ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು, ಸಿಡಿಸಿ ಸಮಿತಿ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಸರ್ಕಾರಿ ಶಾಲೆ, ಕಾಲೇಜುಗಳಿಗೆ ಸಾಕಷ್ಟು ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆ, ಕಾಲೇಜುಗಳಿಗೆ ದಾಖಲಿಸುವ ಮೂಲಕ ಬೆಂಬಲ ನೀಡಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.</p>.<p>ಸೋಮವಾರ ಟಿ.ಬಿ. ವೃತ್ತದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿ ಅವರು ಮಾತನಾಡಿದರು.</p>.<p>‘ಶಾಸಕರು ಕಾಲೇಜಿಗೆ ಆಗಾಗ್ಗೆ ಭೇಟಿ ನೀಡುವ ಮೂಲಕ ಇಲ್ಲಿನ ಕುಂದು ಕೊರತೆಗಳನ್ನು ಈಡೇರಿಸುತ್ತಿದ್ದಾರೆ. ಸದ್ಯಕ್ಕೆ ಎರಡು ‘ಡಿ’ ದರ್ಜೆ ನೌಕರರ ಹುದ್ದೆಗಳ ಕೊರತೆ ಇದ್ದು, ಅದನ್ನು ತುಂಬಿಕೊಡಬೇಕು’ ಎಂದು ಪ್ರಾಂಶುಪಾಲ ರಾಮಚಂದ್ರಪ್ಪ ಕೋರಿದರು.</p>.<p>‘ಕಾಲೇಜಿನ ಆವರಣ ಗೋಡೆಗೆ ಹೊಂದಿಕೊಂಡಂತೆ ಗಿಡಗಂಟಿಗಳು ಬೆಳೆದಿದ್ದು, ಅವನ್ನು ತೆರವುಗೊಳಿಸಿಕೊಡಬೇಕು. ಕಾಲೇಜು ಮೈದಾನ ತಗ್ಗಿನಿಂದ ಕೂಡಿದ್ದು, ಮಳೆ ನೀರು ಸಂಗ್ರಹವಾಗುತ್ತಿದೆ. ಆದ್ದರಿಂದ ಮೈದಾನಕ್ಕೆ ಮಣ್ಣು ತುಂಬಿಸಿ ಎತ್ತರ ಮಾಡಿಸಬೇಕು. ತ್ಯಾಜ್ಯದ ನೀರು ಹೊರಹೋಗಲು ಪೈಪ್ಲೈನ್ಗಳನ್ನು ಅಳವಡಿಸಿಕೊಡಬೇಕು’ ಎಂದು ಮನವಿ ಮಾಡಿದರು.</p>.<p>ಕಾಲೇಜಿನ ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು, ಸಿಡಿಸಿ ಸಮಿತಿ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>