<p><strong>ಹೊನ್ನಾಳಿ:</strong> ‘ತಾಲ್ಲೂಕಿನ ಗಡಿಭಾಗದಿಂದ ಆರಂಭವಾಗುವ ತುಮ್ಮಿನಕಟ್ಟೆ ರಸ್ತೆಯಲ್ಲಿ ಬರುವ ಖಬರಸ್ಥಾನದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ ವಿಸ್ತರಣೆ ಹಾಗೂ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಕಳಪೆಯಿಂದ ಕೂಡಿದೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಎಚ್ಚರಿಸಿದರು. </p>.<p>ಖಬರಸ್ತಾನದ ಬಳಿ ನಡೆಯುತ್ತಿರುವ ಚರಂಡಿ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಮಾತನಾಡಿದರು. </p>.<p>‘ತುಮ್ಮಿನಕಟ್ಟೆ ರಸ್ತೆಯ ಎಡಭಾಗದಲ್ಲಿ ಕಡಿಮೆ ಜಾಗವನ್ನು ತೆಗೆದುಕೊಳ್ಳಲಾಗಿದೆ. ಬಲಭಾಗದಲ್ಲಿ ಹೆಚ್ಚು ಜಾಗವನ್ನು ಕ್ರಮಿಸಿಕೊಂಡು ಕಾಮಗಾರಿ ಕೈಗೊಳ್ಳಲಾಗಿದೆ. ಪಟ್ಟಣದೊಳಗೆ ಅಂಕುಡೊಂಕಾಗಿ ಚರಂಡಿ ನಿರ್ಮಿಸಲಾಗಿದೆ’ ಎಂದರು. </p>.<p>‘ಖಬರಸ್ಥಾನದ ಬಳಿ ನಡೆಯುತ್ತಿರುವ ಚರಂಡಿಗೆ ಬಳಸಿದ ಸಿಮೆಂಟ್ ಉದುರುತ್ತಿದೆ, ಚರಂಡಿ ಪಕ್ಕಕ್ಕೆ ಗ್ರಾವೆಲ್ ಬಳಸದೇ ರಸ್ತೆಯಲ್ಲಿಯೇ ಸಿಕ್ಕ ಹೊಳೆಮಣ್ಣು ಬಳಸಲಾಗಿದೆ. ಚರಂಡಿ ಕಾಮಗಾರಿಯಲ್ಲಿ ಗುಣಮಟ್ಟದ ಜಲ್ಲಿಕಲ್ಲುಗಳನ್ನು ಬಳಸಿಲ್ಲ’ ಎಂದು ದೂರಿದರು.</p>.<p>‘ಕಾಮಗಾರಿಯನ್ನು ಸರಿಪಡಿಸುವವರೆಗೂ ಬಿಲ್ ಮಾಡಬಾರದು’ ಎಂದರು. </p>.<p>ಬಿಜೆಪಿ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಪುರಸಭೆ ಮಾಜಿ ಅಧ್ಯಕ್ಷ ರಂಗನಾಥ್, ಶ್ರೀಧರ್, ಬಾಬು, ಮುಖಂಡರಾದ ಎಂ.ಎಸ್. ಫಾಲಾಕ್ಷಪ್ಪ, ಎಸ್.ಎಸ್. ಬೀರಪ್ಪ, ಪೇಟೆ ಪ್ರಶಾಂತ್, ರಾಘವೇಂದ್ರ, ನೆಲಹೊನ್ನೆ ಮಂಜುನಾಥ್ ಸೇರಿದಂತೆ ನೂರಾರು ಜನ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ‘ತಾಲ್ಲೂಕಿನ ಗಡಿಭಾಗದಿಂದ ಆರಂಭವಾಗುವ ತುಮ್ಮಿನಕಟ್ಟೆ ರಸ್ತೆಯಲ್ಲಿ ಬರುವ ಖಬರಸ್ಥಾನದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ ವಿಸ್ತರಣೆ ಹಾಗೂ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಕಳಪೆಯಿಂದ ಕೂಡಿದೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಎಚ್ಚರಿಸಿದರು. </p>.<p>ಖಬರಸ್ತಾನದ ಬಳಿ ನಡೆಯುತ್ತಿರುವ ಚರಂಡಿ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಮಾತನಾಡಿದರು. </p>.<p>‘ತುಮ್ಮಿನಕಟ್ಟೆ ರಸ್ತೆಯ ಎಡಭಾಗದಲ್ಲಿ ಕಡಿಮೆ ಜಾಗವನ್ನು ತೆಗೆದುಕೊಳ್ಳಲಾಗಿದೆ. ಬಲಭಾಗದಲ್ಲಿ ಹೆಚ್ಚು ಜಾಗವನ್ನು ಕ್ರಮಿಸಿಕೊಂಡು ಕಾಮಗಾರಿ ಕೈಗೊಳ್ಳಲಾಗಿದೆ. ಪಟ್ಟಣದೊಳಗೆ ಅಂಕುಡೊಂಕಾಗಿ ಚರಂಡಿ ನಿರ್ಮಿಸಲಾಗಿದೆ’ ಎಂದರು. </p>.<p>‘ಖಬರಸ್ಥಾನದ ಬಳಿ ನಡೆಯುತ್ತಿರುವ ಚರಂಡಿಗೆ ಬಳಸಿದ ಸಿಮೆಂಟ್ ಉದುರುತ್ತಿದೆ, ಚರಂಡಿ ಪಕ್ಕಕ್ಕೆ ಗ್ರಾವೆಲ್ ಬಳಸದೇ ರಸ್ತೆಯಲ್ಲಿಯೇ ಸಿಕ್ಕ ಹೊಳೆಮಣ್ಣು ಬಳಸಲಾಗಿದೆ. ಚರಂಡಿ ಕಾಮಗಾರಿಯಲ್ಲಿ ಗುಣಮಟ್ಟದ ಜಲ್ಲಿಕಲ್ಲುಗಳನ್ನು ಬಳಸಿಲ್ಲ’ ಎಂದು ದೂರಿದರು.</p>.<p>‘ಕಾಮಗಾರಿಯನ್ನು ಸರಿಪಡಿಸುವವರೆಗೂ ಬಿಲ್ ಮಾಡಬಾರದು’ ಎಂದರು. </p>.<p>ಬಿಜೆಪಿ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಪುರಸಭೆ ಮಾಜಿ ಅಧ್ಯಕ್ಷ ರಂಗನಾಥ್, ಶ್ರೀಧರ್, ಬಾಬು, ಮುಖಂಡರಾದ ಎಂ.ಎಸ್. ಫಾಲಾಕ್ಷಪ್ಪ, ಎಸ್.ಎಸ್. ಬೀರಪ್ಪ, ಪೇಟೆ ಪ್ರಶಾಂತ್, ರಾಘವೇಂದ್ರ, ನೆಲಹೊನ್ನೆ ಮಂಜುನಾಥ್ ಸೇರಿದಂತೆ ನೂರಾರು ಜನ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>