<p><strong>ಹೊನ್ನಾಳಿ</strong>: ತಾಲ್ಲೂಕಿನಲ್ಲಿ 39,716 ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಗುರಿ ಇದ್ದು, ಅ. 4 ರಂದು ಮಧ್ಯಾಹ್ನ 12ಕ್ಕೆ 34,432 ಕುಟುಂಬಗಳನ್ನು ಸರ್ವೇ ಮಾಡಲಾಗಿದೆ ಎಂದು ತಹಶೀಲ್ದಾರ್ ಸಿ. ರಾಜೇಶ್ ಕುಮಾರ್ ಹೇಳಿದರು.</p>.<p>ಶನಿವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಅಂತಿಮ ಹಂತದ ಸಮೀಕ್ಷಾ ಕಾರ್ಯಾಚರಣೆಯ ಸಭೆಯಲ್ಲಿ ಮಾತನಾಡಿದರು.</p>.<p>ಸಮೀಕ್ಷೆಗೆ 360 ಗಣತಿದಾರರು, 18 ಜನ ಮೇಲ್ವಿಚಾರಕರು ಹಾಗೂ 20 ಜನ ಸಮೀಕ್ಷಾದಾರರನ್ನು ನೇಮಿಸಲಾಗಿದೆ. ಈ ತಂಡ ಈಗಾಗಲೇ ಶೇ 86.89 ರಷ್ಟು ಸಮೀಕ್ಷಾ ಕಾರ್ಯವನ್ನು ಮುಗಿಸಿದೆ. ಇನ್ನೊಂದೆರಡು ದಿನಗಳಲ್ಲಿ ನೂರರಷ್ಟು ಗಣತಿ ಕಾರ್ಯವನ್ನು ಮುಗಿಸುವ ವಿಶ್ವಾಸವಿದೆ ಎಂದು ತಿಳಿಸಿದರು.</p>.<p>ಇದೂವರೆಗು ಚುರುಕಾಗಿ ಗಣತಿ ಕಾರ್ಯ ನಡೆದಿತ್ತು. ಈಗ ಅಂತಿಮ ಹಂತಕ್ಕೆ ತಲುಪಿದ್ದು, ಕರಾರುವಕ್ಕಾಗಿ ಗಣತಿ ಮಾಡಬೇಕಾಗಿರುವುದರಿಂದ ಸ್ವಲ್ಪ ನಿಧಾನವಾಗಿ ಗಣತಿ ಮಾಡಬೇಕಾಗಿದೆ ಎಂದು ಹೇಳಿದರು.</p>.<p>ಅಂದಾಜು 95 ಶಿಕ್ಷಕರು ನೂರಕ್ಕೆ ನೂರರಷ್ಟು ಗಣತಿ ಕಾರ್ಯವನ್ನು ಮುಗಿಸಿದ್ದು, ಅವರನ್ನು ಅಭಿನಂದಿಸಲಾಯಿತು ಎಂದು ತಿಳಿಸಿದರು.</p>.<p>ಸಮೀಕ್ಷೆಗೆ ಸಂಬಂಧಿಸಿದಂತೆ ಹೊನ್ನಾಳಿ, ನ್ಯಾಮತಿ ಅವಳಿ ತಾಲ್ಲೂಕಿನ ನೋಡಲ್ ಅಧಿಕಾರಿಯಾಗಿ ದೂಡಾ ಆಯುಕ್ತರಾದ ಹುಲ್ಮನಿ ತಿಮ್ಮಣ್ಣ ಕಾರ್ಯನಿರ್ವಹಿಸುತ್ತಿದ್ದು, ಮೂರು ದಿನಗಳ ಹಿಂದೆ ಅವಳಿ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಗಣತಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದ್ದರು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ತಾಲ್ಲೂಕಿನಲ್ಲಿ 39,716 ಕುಟುಂಬಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಗುರಿ ಇದ್ದು, ಅ. 4 ರಂದು ಮಧ್ಯಾಹ್ನ 12ಕ್ಕೆ 34,432 ಕುಟುಂಬಗಳನ್ನು ಸರ್ವೇ ಮಾಡಲಾಗಿದೆ ಎಂದು ತಹಶೀಲ್ದಾರ್ ಸಿ. ರಾಜೇಶ್ ಕುಮಾರ್ ಹೇಳಿದರು.</p>.<p>ಶನಿವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಅಂತಿಮ ಹಂತದ ಸಮೀಕ್ಷಾ ಕಾರ್ಯಾಚರಣೆಯ ಸಭೆಯಲ್ಲಿ ಮಾತನಾಡಿದರು.</p>.<p>ಸಮೀಕ್ಷೆಗೆ 360 ಗಣತಿದಾರರು, 18 ಜನ ಮೇಲ್ವಿಚಾರಕರು ಹಾಗೂ 20 ಜನ ಸಮೀಕ್ಷಾದಾರರನ್ನು ನೇಮಿಸಲಾಗಿದೆ. ಈ ತಂಡ ಈಗಾಗಲೇ ಶೇ 86.89 ರಷ್ಟು ಸಮೀಕ್ಷಾ ಕಾರ್ಯವನ್ನು ಮುಗಿಸಿದೆ. ಇನ್ನೊಂದೆರಡು ದಿನಗಳಲ್ಲಿ ನೂರರಷ್ಟು ಗಣತಿ ಕಾರ್ಯವನ್ನು ಮುಗಿಸುವ ವಿಶ್ವಾಸವಿದೆ ಎಂದು ತಿಳಿಸಿದರು.</p>.<p>ಇದೂವರೆಗು ಚುರುಕಾಗಿ ಗಣತಿ ಕಾರ್ಯ ನಡೆದಿತ್ತು. ಈಗ ಅಂತಿಮ ಹಂತಕ್ಕೆ ತಲುಪಿದ್ದು, ಕರಾರುವಕ್ಕಾಗಿ ಗಣತಿ ಮಾಡಬೇಕಾಗಿರುವುದರಿಂದ ಸ್ವಲ್ಪ ನಿಧಾನವಾಗಿ ಗಣತಿ ಮಾಡಬೇಕಾಗಿದೆ ಎಂದು ಹೇಳಿದರು.</p>.<p>ಅಂದಾಜು 95 ಶಿಕ್ಷಕರು ನೂರಕ್ಕೆ ನೂರರಷ್ಟು ಗಣತಿ ಕಾರ್ಯವನ್ನು ಮುಗಿಸಿದ್ದು, ಅವರನ್ನು ಅಭಿನಂದಿಸಲಾಯಿತು ಎಂದು ತಿಳಿಸಿದರು.</p>.<p>ಸಮೀಕ್ಷೆಗೆ ಸಂಬಂಧಿಸಿದಂತೆ ಹೊನ್ನಾಳಿ, ನ್ಯಾಮತಿ ಅವಳಿ ತಾಲ್ಲೂಕಿನ ನೋಡಲ್ ಅಧಿಕಾರಿಯಾಗಿ ದೂಡಾ ಆಯುಕ್ತರಾದ ಹುಲ್ಮನಿ ತಿಮ್ಮಣ್ಣ ಕಾರ್ಯನಿರ್ವಹಿಸುತ್ತಿದ್ದು, ಮೂರು ದಿನಗಳ ಹಿಂದೆ ಅವಳಿ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಗಣತಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದ್ದರು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>