<p><strong>ಹೊನ್ನಾಳಿ:</strong> ‘ಸಾಧು, ಸಂತರ ಸಹವಾಸದಿಂದ ಪುಣ್ಯಕ್ಷೇತ್ರಗಳಿಗೆ ಹೋಗಿ ಬಂದಷ್ಟು ಪುಣ್ಯ ಲಭಿಸುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಮಠ–ಮಾನ್ಯಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕರೆದುಕೊಂಡು ಬಂದು ಸನ್ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು.</p>.<p>ಪಟ್ಟಣದ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಶನಿವಾರ ನಡೆದ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿರೇಕಲ್ಮಠವು ಈ ಭಾಗದ ಭಕ್ತರ ಒಳಿತಿಗೋಸ್ಕರ ಹಲವಾರು ಪೂಜಾ ಕೈಂಕರ್ಯ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಭಕ್ತರು ಕುಟುಂಬ ಸಮೇತರಾಗಿ ಪಾಲ್ಗೊಂಡು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬಗಳ ಆಚರಣೆಯಿಂದ ಮನುಕುಲಕ್ಕೆ ಒಳಿತಾಗುತ್ತಿದ್ದು, ಹಬ್ಬಗಳ ವಿಧಿ, ವಿಧಾನಗಳನ್ನು ಅರಿತು ಆಚರಣೆ ಮಾಡಬೇಕು’ ಎಂದು ಗೋವಿನಕೋವಿ ಹಾಲಸ್ವಾಮಿ ಮಠದ ಶಿವಯೋಗಿ ಮಹಾಲಿಂಗ ಹಾಲಸ್ವಾಮೀಜಿ ತಿಳಿಸಿದರು.</p>.<p>‘ದೇವಿ ಪುರಾಣ ವಾಚನದಿಂದ ನಮಗೆಲ್ಲರಿಗೂ ನೆಮ್ಮದಿ, ಶಾಂತಿ ದೊರಕುತ್ತದೆ, ಹಿರೇಕಲ್ಮಠದ ನವರಾತ್ರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ದೇವಿಯ ಆಶೀರ್ವಾದದ ಜೊತೆಗೆ ಗುರುವಿನ ದರ್ಶನಾಶೀರ್ವಾದವು ಲಭಿಸುತ್ತದೆ’ ಎಂದು ದೃಷ್ಟಾಂತಗಳ ಮೂಲಕ ಹೇಳಿದರು.</p>.<p>ಕುವೆಂಪು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಜಿ.ಪ್ರಶಾಂತ್ ನಾಯಕ್ ಅವರು ನವರಾತ್ರಿ ಹಬ್ಬದ ಆಚರಣೆಯ ಬಗ್ಗೆ ಉಪನ್ಯಾಸ ನೀಡಿದರು.</p>.<p>ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು, ಚನ್ನಯ್ಯ ಬೆನ್ನೂರಮಠ, ಎಚ್.ಎಂ.ರುದ್ರೇಶ್, ನಾರಾಯಣ ಪವಾರ್, ಮಲ್ಲಣ್ಣ ಅಂಗಡಿ, ಮೃತ್ಯುಂಜಯ ಪಾಟೀಲ್, ಎನ್.ಪಿ.ಸುರೇಶ್ ಕುಂಬಾರ್, ಸುದೀಪ್, ಅವಿನಾಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ‘ಸಾಧು, ಸಂತರ ಸಹವಾಸದಿಂದ ಪುಣ್ಯಕ್ಷೇತ್ರಗಳಿಗೆ ಹೋಗಿ ಬಂದಷ್ಟು ಪುಣ್ಯ ಲಭಿಸುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಮಠ–ಮಾನ್ಯಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕರೆದುಕೊಂಡು ಬಂದು ಸನ್ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು.</p>.<p>ಪಟ್ಟಣದ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಶನಿವಾರ ನಡೆದ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿರೇಕಲ್ಮಠವು ಈ ಭಾಗದ ಭಕ್ತರ ಒಳಿತಿಗೋಸ್ಕರ ಹಲವಾರು ಪೂಜಾ ಕೈಂಕರ್ಯ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಭಕ್ತರು ಕುಟುಂಬ ಸಮೇತರಾಗಿ ಪಾಲ್ಗೊಂಡು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬಗಳ ಆಚರಣೆಯಿಂದ ಮನುಕುಲಕ್ಕೆ ಒಳಿತಾಗುತ್ತಿದ್ದು, ಹಬ್ಬಗಳ ವಿಧಿ, ವಿಧಾನಗಳನ್ನು ಅರಿತು ಆಚರಣೆ ಮಾಡಬೇಕು’ ಎಂದು ಗೋವಿನಕೋವಿ ಹಾಲಸ್ವಾಮಿ ಮಠದ ಶಿವಯೋಗಿ ಮಹಾಲಿಂಗ ಹಾಲಸ್ವಾಮೀಜಿ ತಿಳಿಸಿದರು.</p>.<p>‘ದೇವಿ ಪುರಾಣ ವಾಚನದಿಂದ ನಮಗೆಲ್ಲರಿಗೂ ನೆಮ್ಮದಿ, ಶಾಂತಿ ದೊರಕುತ್ತದೆ, ಹಿರೇಕಲ್ಮಠದ ನವರಾತ್ರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ದೇವಿಯ ಆಶೀರ್ವಾದದ ಜೊತೆಗೆ ಗುರುವಿನ ದರ್ಶನಾಶೀರ್ವಾದವು ಲಭಿಸುತ್ತದೆ’ ಎಂದು ದೃಷ್ಟಾಂತಗಳ ಮೂಲಕ ಹೇಳಿದರು.</p>.<p>ಕುವೆಂಪು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಜಿ.ಪ್ರಶಾಂತ್ ನಾಯಕ್ ಅವರು ನವರಾತ್ರಿ ಹಬ್ಬದ ಆಚರಣೆಯ ಬಗ್ಗೆ ಉಪನ್ಯಾಸ ನೀಡಿದರು.</p>.<p>ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು, ಚನ್ನಯ್ಯ ಬೆನ್ನೂರಮಠ, ಎಚ್.ಎಂ.ರುದ್ರೇಶ್, ನಾರಾಯಣ ಪವಾರ್, ಮಲ್ಲಣ್ಣ ಅಂಗಡಿ, ಮೃತ್ಯುಂಜಯ ಪಾಟೀಲ್, ಎನ್.ಪಿ.ಸುರೇಶ್ ಕುಂಬಾರ್, ಸುದೀಪ್, ಅವಿನಾಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>