<p><strong>ಹೊನ್ನಾಳಿ:</strong> ‘ಪ್ರತಿಭಾ ಪುರಸ್ಕಾರ ಸಮಾರಂಭಗಳಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪುರಸ್ಕರಿಸಿದರೆ ಅವರ ಜವಾಬ್ದಾರಿಗಳನ್ನು ಮತ್ತಷ್ಟು ಹೆಚ್ಚಿಸಿದಂತಾಗುತ್ತದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ತಮ್ಮ ತಂದೆ– ತಾಯಿ ಹೆಸರಿನಲ್ಲಿ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎ.ಉಮಾಪತಿ ಅವರ ತಂದೆ ಹೆಸರಿನಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೇವಲ ಅಂಕಗಳಿಕೆಗೋಸ್ಕರ ಓದುವುದು ಸರಿಯಲ್ಲ. ಸಂಸ್ಕಾರ ಹಾಗೂ ಮೌಲ್ಯಾಧಾರಿತ ಜೀವನ ನಡೆಸುವುದು, ಸನ್ಮಾರ್ಗದಲ್ಲಿ ಮುನ್ನಡೆದು ಸಮಾಜಮುಖಿ ಬದುಕು ನಡೆಸುವುದು, ನೈತಿಕ ಶಿಕ್ಷಣ ಪಡೆದು ಸತ್ಪ್ರಜೆಯನ್ನಾಗಿ ಮಾಡುವುದು ನಿಜವಾದ ಶಿಕ್ಷಣ’ ಎಂದರು.</p>.<p>ಪ್ರಾಂಶುಪಾಲ ಧನಂಜಯ್, ಎಚ್.ಎ. ಉಮಾಪತಿ, ಉಪನ್ಯಾಸಕ ರಾಘವೇಂದ್ರರಾವ್, ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದಲ್ಲಿ ತೃತೀಯ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಗಗನಾ ಮಾತನಾಡಿದರು.</p>.<p>ಉಪನ್ಯಾಸಕರಾದ ಗೀತಾ, ರಾಘವೇಂದ್ರ, ಹರಾಳು ಮಹಾಬಲೇಶ್, ಅಶೋಕ್, ಗ್ರಂಥಪಾಲಕ ನಾಗರಾಜ್ನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ‘ಪ್ರತಿಭಾ ಪುರಸ್ಕಾರ ಸಮಾರಂಭಗಳಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪುರಸ್ಕರಿಸಿದರೆ ಅವರ ಜವಾಬ್ದಾರಿಗಳನ್ನು ಮತ್ತಷ್ಟು ಹೆಚ್ಚಿಸಿದಂತಾಗುತ್ತದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ತಮ್ಮ ತಂದೆ– ತಾಯಿ ಹೆಸರಿನಲ್ಲಿ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎ.ಉಮಾಪತಿ ಅವರ ತಂದೆ ಹೆಸರಿನಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೇವಲ ಅಂಕಗಳಿಕೆಗೋಸ್ಕರ ಓದುವುದು ಸರಿಯಲ್ಲ. ಸಂಸ್ಕಾರ ಹಾಗೂ ಮೌಲ್ಯಾಧಾರಿತ ಜೀವನ ನಡೆಸುವುದು, ಸನ್ಮಾರ್ಗದಲ್ಲಿ ಮುನ್ನಡೆದು ಸಮಾಜಮುಖಿ ಬದುಕು ನಡೆಸುವುದು, ನೈತಿಕ ಶಿಕ್ಷಣ ಪಡೆದು ಸತ್ಪ್ರಜೆಯನ್ನಾಗಿ ಮಾಡುವುದು ನಿಜವಾದ ಶಿಕ್ಷಣ’ ಎಂದರು.</p>.<p>ಪ್ರಾಂಶುಪಾಲ ಧನಂಜಯ್, ಎಚ್.ಎ. ಉಮಾಪತಿ, ಉಪನ್ಯಾಸಕ ರಾಘವೇಂದ್ರರಾವ್, ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದಲ್ಲಿ ತೃತೀಯ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಗಗನಾ ಮಾತನಾಡಿದರು.</p>.<p>ಉಪನ್ಯಾಸಕರಾದ ಗೀತಾ, ರಾಘವೇಂದ್ರ, ಹರಾಳು ಮಹಾಬಲೇಶ್, ಅಶೋಕ್, ಗ್ರಂಥಪಾಲಕ ನಾಗರಾಜ್ನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>