<p>ಹೊನ್ನಾಳಿ: ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಒಟ್ಟು 10 ಸ್ಥಾನಗಳ ಬದಲು 9 ಸ್ಥಾನಗಳಿಗೆ ಮಾತ್ರ ಚುನಾವಣಾಧಿಕಾರಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಅಭ್ಯರ್ಥಿ ಶಿವರಾಜ್ ಪಾಟೀಲ್ ದೂರಿದ್ದಾರೆ.</p>.<p>ಸಾಮಾನ್ಯ ಕ್ಷೇತ್ರಕ್ಕೆ 7, ಮಹಿಳಾ ಮೀಸಲು ಕ್ಷೇತ್ರದ 3 ಸ್ಥಾನಗಳಿಗೆ ಚುನಾವಣೆ ನಡೆಸಬೇಕಿತ್ತು, ಈ ಕುರಿತು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ತಾಲ್ಲೂಕು ಘಟಕದ ಮುಖ್ಯ ಚುನಾವಣಾಧಿಕಾರಿ ಏಕಾಏಕಿಯಾಗಿ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಿರಿಸಿದ್ದ 7 ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಡಿತಗೊಳಿಸಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಚುನಾವಣೆ ಪ್ರಕ್ರಿಯೆ ಆರಂಭಗೊಂಡ ನಂತರ ಹೀಗೆ ಸ್ಥಾನಗಳನ್ನು ಕಡಿತ ಮಾಡಲು ಚುನಾವಣಾಧಿಕಾರಿಗೆ ಅಧಿಕಾರ ಇಲ್ಲ’ ಎಂದು ಹೇಳಿದರು.</p>.<p>‘ಈ ಬಗ್ಗೆ ಪ್ರಶ್ನಿಸಿದರೆ ಚುನಾವಣಾಧಿಕಾರಿ ಸಮರ್ಪಕವಾಗಿ ಉತ್ತರ ನೀಡಲಿಲ್ಲ, ಲಿಖಿತ ಮನವಿ ಸಲ್ಲಿಸಿದರೂ ಸ್ವೀಕರಿಸಲಿಲ್ಲ’ ಎಂದು ದೂರಿದರು.</p>.<p>‘ಚುನಾವಣಾಧಿಕಾರಿ ಕೆ. ಮಹಾಂತೇಶ್ ಅವರು ತಮಗೆ ಆರೋಗ್ಯ ಸರಿ ಇಲ್ಲ. ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಕೋರಿ ಶಿಕ್ಷಕರ ಸಂಘದ ಕಾರ್ಯದರ್ಶಿಗೆ ಲಿಖಿತ ಮನವಿ ಸಲಿಸಿರುವುದು ಅನುಮಾನ ಮೂಡಿಸಿದೆ’ ಎಂದರು. ಪ್ರಮುಖರಾದ ಎ.ಕೆ. ನಾಗೇಶಪ್ಪ, ಎ.ಜಿ. ಚಂದ್ರಪ್ಪ, ಎ.ಕೆ. ರಾಮಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-43-1561290557</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಒಟ್ಟು 10 ಸ್ಥಾನಗಳ ಬದಲು 9 ಸ್ಥಾನಗಳಿಗೆ ಮಾತ್ರ ಚುನಾವಣಾಧಿಕಾರಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಅಭ್ಯರ್ಥಿ ಶಿವರಾಜ್ ಪಾಟೀಲ್ ದೂರಿದ್ದಾರೆ.</p>.<p>ಸಾಮಾನ್ಯ ಕ್ಷೇತ್ರಕ್ಕೆ 7, ಮಹಿಳಾ ಮೀಸಲು ಕ್ಷೇತ್ರದ 3 ಸ್ಥಾನಗಳಿಗೆ ಚುನಾವಣೆ ನಡೆಸಬೇಕಿತ್ತು, ಈ ಕುರಿತು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ತಾಲ್ಲೂಕು ಘಟಕದ ಮುಖ್ಯ ಚುನಾವಣಾಧಿಕಾರಿ ಏಕಾಏಕಿಯಾಗಿ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಿರಿಸಿದ್ದ 7 ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಡಿತಗೊಳಿಸಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಚುನಾವಣೆ ಪ್ರಕ್ರಿಯೆ ಆರಂಭಗೊಂಡ ನಂತರ ಹೀಗೆ ಸ್ಥಾನಗಳನ್ನು ಕಡಿತ ಮಾಡಲು ಚುನಾವಣಾಧಿಕಾರಿಗೆ ಅಧಿಕಾರ ಇಲ್ಲ’ ಎಂದು ಹೇಳಿದರು.</p>.<p>‘ಈ ಬಗ್ಗೆ ಪ್ರಶ್ನಿಸಿದರೆ ಚುನಾವಣಾಧಿಕಾರಿ ಸಮರ್ಪಕವಾಗಿ ಉತ್ತರ ನೀಡಲಿಲ್ಲ, ಲಿಖಿತ ಮನವಿ ಸಲ್ಲಿಸಿದರೂ ಸ್ವೀಕರಿಸಲಿಲ್ಲ’ ಎಂದು ದೂರಿದರು.</p>.<p>‘ಚುನಾವಣಾಧಿಕಾರಿ ಕೆ. ಮಹಾಂತೇಶ್ ಅವರು ತಮಗೆ ಆರೋಗ್ಯ ಸರಿ ಇಲ್ಲ. ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಕೋರಿ ಶಿಕ್ಷಕರ ಸಂಘದ ಕಾರ್ಯದರ್ಶಿಗೆ ಲಿಖಿತ ಮನವಿ ಸಲಿಸಿರುವುದು ಅನುಮಾನ ಮೂಡಿಸಿದೆ’ ಎಂದರು. ಪ್ರಮುಖರಾದ ಎ.ಕೆ. ನಾಗೇಶಪ್ಪ, ಎ.ಜಿ. ಚಂದ್ರಪ್ಪ, ಎ.ಕೆ. ರಾಮಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-43-1561290557</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>