<p><strong>ಹೊನ್ನಾಳಿ</strong>: ತಾಯಿಯ ಹೆಸರಿನಲ್ಲಿ ಸಸಿ ನೆಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪರಿಸರ ದಿನಾಚರಣೆಯಂದು ಕರೆ ನೀಡಿದ ಬಳಿಕ ಈವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಶಾಲಾ, ಕಾಲೇಜುಗಳಲ್ಲಿ 1,250 ಸಸಿಗಳನ್ನು ನೆಡಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಪಟ್ಟಣದ ಚನ್ನಪ್ಪಸ್ವಾಮಿ ವಿದ್ಯಾಪೀಠ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಗುರುವಾರ ಸಸಿನೆಡುವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮೋದಿಯವರು ಯಾವುದೇ ಹೇಳಿಕೆ ಕೊಟ್ಟು ಕೆಲಸ ಆರಂಭಿಸಿದರೆ, ಅದಕ್ಕೊಂದು ಅರ್ಥ ಮತ್ತು ವೈಜ್ಞಾನಿಕ ಕಾರಣ ಇರುತ್ತದೆ. ಇದನ್ನು ಸಮರ್ಪಣಾ ಮನೋಭಾವದಿಂದ ಸ್ವೀಕರಿಸಿ, ಅನೇಕ ಕೆಲಸಗಳ ಮಧ್ಯೆಯೂ ಸಸಿ ನೆಡುವ ಕಾರ್ಯಕ್ರಮ ಮಾಡಿದ್ದೇನೆ’ ಎಂದರು.</p>.<p>ಎಸ್ಜೆವಿಪಿ ಬಿಇಡಿ ಕಾಲೇಜು, ಎಸ್ಎಂಎಸ್ ಪ್ರಥಮ ದರ್ಜೆ ಕಾಲೇಜು, ಎಸ್ಜೆಜೆ ಪ್ರೌಢಶಾಲೆ ಮತ್ತು ಐಟಿಐ ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ತಾಯಿಯ ಹೆಸರಿನಲ್ಲಿ ಸಸಿ ನೆಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪರಿಸರ ದಿನಾಚರಣೆಯಂದು ಕರೆ ನೀಡಿದ ಬಳಿಕ ಈವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಶಾಲಾ, ಕಾಲೇಜುಗಳಲ್ಲಿ 1,250 ಸಸಿಗಳನ್ನು ನೆಡಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>ಪಟ್ಟಣದ ಚನ್ನಪ್ಪಸ್ವಾಮಿ ವಿದ್ಯಾಪೀಠ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಗುರುವಾರ ಸಸಿನೆಡುವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮೋದಿಯವರು ಯಾವುದೇ ಹೇಳಿಕೆ ಕೊಟ್ಟು ಕೆಲಸ ಆರಂಭಿಸಿದರೆ, ಅದಕ್ಕೊಂದು ಅರ್ಥ ಮತ್ತು ವೈಜ್ಞಾನಿಕ ಕಾರಣ ಇರುತ್ತದೆ. ಇದನ್ನು ಸಮರ್ಪಣಾ ಮನೋಭಾವದಿಂದ ಸ್ವೀಕರಿಸಿ, ಅನೇಕ ಕೆಲಸಗಳ ಮಧ್ಯೆಯೂ ಸಸಿ ನೆಡುವ ಕಾರ್ಯಕ್ರಮ ಮಾಡಿದ್ದೇನೆ’ ಎಂದರು.</p>.<p>ಎಸ್ಜೆವಿಪಿ ಬಿಇಡಿ ಕಾಲೇಜು, ಎಸ್ಎಂಎಸ್ ಪ್ರಥಮ ದರ್ಜೆ ಕಾಲೇಜು, ಎಸ್ಜೆಜೆ ಪ್ರೌಢಶಾಲೆ ಮತ್ತು ಐಟಿಐ ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>