ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಿವಮೊಗ್ಗದ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಹಾಗೂ ದಾವಣಗೆರೆಯ ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ಗೆ ಬಂದ ಬೆದರಿಕೆ ಪತ್ರ ವೈಯಕ್ತಿಕ ವಿಚಾರವಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಳೊಂದಿಗೆ ಚರ್ಚಿಸಲಾಗಿದ್ದು, ಗೂಂಡಾಗಿರಿ ನಡೆಸುತ್ತಿರುವವರ ಮೇಲೆ ಎರಡು–ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.