<p><strong>ಸಾಸ್ವೆಹಳ್ಳಿ</strong>: ಸಮೀಪದ ಹೊಸಹಳ್ಳಿ ಎರಡನೇ ಕ್ಯಾಂಪ್ನಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೊಲಕ್ಕೆ ನೀರು ಹರಿಸಲು ರಸ್ತೆ ಮಧ್ಯೆಯೇ ಕಾಲುವೆ ತೋಡಿ, ಆ ಮಣ್ಣನ್ನು ರಸ್ತೆಗೆ ಏರಿ ರೂಪದಲ್ಲಿ ಹಾಕಿ ಸಂಚಾರ ಬಂದ್ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ರಸ್ತೆಯು ಲಿಂಗಾಪುರ ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ಹೊಸಹಳ್ಳಿ ಎರಡನೇ ಕ್ಯಾಂಪ್ನ ಕುಡಿಯುವ ನೀರಿನ ಟ್ಯಾಂಕ್ಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಜನ ನಿತ್ಯ ಓಡಾಡುವ ರಸ್ತೆಯನ್ನು ಸ್ವಂತ ಹಿತಾಸಕ್ತಿಗಾಗಿ ಬಂದ್ ಮಾಡಿರುವುದು ವಿಪರ್ಯಾಸ ಎಂದು ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಸ್ಥಳೀಯ ನಿವಾಸಿಗಳಾದ ಹರೀಶ್, ನಾಗರಾಜ್, ರಾಘವೇಂದ್ರ ಮತ್ತು ಗೋಪಾಲ್ ಅವರು, ಸಿಸಿ ರಸ್ತೆ ನಿರ್ಮಾಣವಾಗಿದ್ದರೂ ಕಾಲುವೆಯನ್ನು ಮುಚ್ಚದ ಕಾರಣ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ ಪೈಪ್ ಅಳವಡಸಿ ಅಥವಾ ಕಾಲುವೆ ಮುಚ್ಚಿ ಎಂದು ಒತ್ತಾಯಿಸಿದರು.</p>.<p>ಈ ಸಮಸ್ಯೆಯ ಕುರಿತು ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ</strong>: ಸಮೀಪದ ಹೊಸಹಳ್ಳಿ ಎರಡನೇ ಕ್ಯಾಂಪ್ನಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೊಲಕ್ಕೆ ನೀರು ಹರಿಸಲು ರಸ್ತೆ ಮಧ್ಯೆಯೇ ಕಾಲುವೆ ತೋಡಿ, ಆ ಮಣ್ಣನ್ನು ರಸ್ತೆಗೆ ಏರಿ ರೂಪದಲ್ಲಿ ಹಾಕಿ ಸಂಚಾರ ಬಂದ್ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ರಸ್ತೆಯು ಲಿಂಗಾಪುರ ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ಹೊಸಹಳ್ಳಿ ಎರಡನೇ ಕ್ಯಾಂಪ್ನ ಕುಡಿಯುವ ನೀರಿನ ಟ್ಯಾಂಕ್ಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಜನ ನಿತ್ಯ ಓಡಾಡುವ ರಸ್ತೆಯನ್ನು ಸ್ವಂತ ಹಿತಾಸಕ್ತಿಗಾಗಿ ಬಂದ್ ಮಾಡಿರುವುದು ವಿಪರ್ಯಾಸ ಎಂದು ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಸ್ಥಳೀಯ ನಿವಾಸಿಗಳಾದ ಹರೀಶ್, ನಾಗರಾಜ್, ರಾಘವೇಂದ್ರ ಮತ್ತು ಗೋಪಾಲ್ ಅವರು, ಸಿಸಿ ರಸ್ತೆ ನಿರ್ಮಾಣವಾಗಿದ್ದರೂ ಕಾಲುವೆಯನ್ನು ಮುಚ್ಚದ ಕಾರಣ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ ಪೈಪ್ ಅಳವಡಸಿ ಅಥವಾ ಕಾಲುವೆ ಮುಚ್ಚಿ ಎಂದು ಒತ್ತಾಯಿಸಿದರು.</p>.<p>ಈ ಸಮಸ್ಯೆಯ ಕುರಿತು ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>