ಪೂಜಾರಿ ಕೆಲಸ ಮಾಡುವ ಸತೀಶ, ಲಾರಿ ಚಾಲಕ ಲೋಕೇಶ ಕೊಟ್ಟೂರು ಕಡೆಯಿಂದ ಹರಪನಹಳ್ಳಿ ಕಡೆಗೆ ಮಂಗಳವಾರ ಬರುತ್ತಿದ್ದಾಗ ಸ್ಥಳೀಯರ ಸಹಕಾರದಿಂದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಅವರನ್ನು ವಿಚಾರಿಸಿದಾಗ ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1, ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ವಿಡುಪನಕಲ್ ಠಾಣೆ ವ್ಯಾಪ್ತಿಯಲ್ಲಿ 1, ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 1, ದಾವಣಗೆರೆ ಜಿಲ್ಲೆಯ ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಪ್ರಕರಣಗಳು, ಆಜಾದ್ ನಗರ ಠಾಣೆ ವ್ಯಾಪ್ತಿಯಲ್ಲಿ 1 ಹಾಗೂ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು. ಹೀಗೆ ಒಟ್ಟು ಎಂಟು ಕಡೆ ಕಳವು ಮಾಡಿರುವುದನ್ನು ಬಾಯಿ ಬಿಟ್ಟಿದ್ದಾರೆ.