<p><strong>ದಾವಣಗೆರೆ</strong>: ಕರ್ನಾಟಕ ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಅಧ್ಯಕ್ಷರಾಗಿ ಹರಿಹರದ ಮಾಜಿ ಶಾಸಕ, ದೊಡ್ಡಬಾತಿಯ ಭದ್ರಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಎಚ್.ಎಸ್. ಶಿವಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಬೆಂಗಳೂರಿನ ಮಹಾಮಂಡಳದ ಕಚೇರಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಈಚೆಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಬೆಳಗಾವಿಯ ಚಿಕ್ಕೋಡಿ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸಂದೀಪ್ ಪಾಟೀಲ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p>.<p>ಮಹಾಮಂಡಳದ ನಿರ್ದೇಶಕ ಸ್ಥಾನಗಳಿಗೆ ಜ.11ರಂದು ನಡೆದ ಚುನಾವಣೆಯಲ್ಲಿ ಎಚ್.ಎಸ್. ಶಿವಶಂಕರ್ 5ನೇ ಬಾರಿಗೆ ಪುನರಾಯ್ಕೆ ಆಗಿದ್ದರು. ಸಹಕಾರಿ ತತ್ವದ ಆಧಾರದಲ್ಲಿ ಸ್ಥಾಪನೆಯಾದ ರಾಜ್ಯದ 20 ಸಕ್ಕರೆ ಕಾರ್ಖಾನೆಗಳು ಮಹಾಮಂಡಳದ ವ್ಯಾಪ್ತಿಯಲ್ಲಿವೆ.</p>.<p>‘20 ವರ್ಷಗಳಿಂದ ಮಹಾಮಂಡಳದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಸಹಕಾರ ತತ್ವದಡಿ ರಚನೆಯಾದ ಸಕ್ಕರೆ ಕಾರ್ಖಾನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವಿನ ನಿರೀಕ್ಷೆಯಲ್ಲಿವೆ. ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ಸಿಕ್ಕರೆ ಸಹಕಾರ ಸಕ್ಕರೆ ಕಾರ್ಖಾನೆಗಳಿಗೂ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಶ್ರಮಿಸಲಿದ್ದೇನೆ’ ಎಂದು ಶಿವಶಂಕರ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕರ್ನಾಟಕ ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಅಧ್ಯಕ್ಷರಾಗಿ ಹರಿಹರದ ಮಾಜಿ ಶಾಸಕ, ದೊಡ್ಡಬಾತಿಯ ಭದ್ರಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಎಚ್.ಎಸ್. ಶಿವಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಬೆಂಗಳೂರಿನ ಮಹಾಮಂಡಳದ ಕಚೇರಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಈಚೆಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಬೆಳಗಾವಿಯ ಚಿಕ್ಕೋಡಿ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸಂದೀಪ್ ಪಾಟೀಲ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p>.<p>ಮಹಾಮಂಡಳದ ನಿರ್ದೇಶಕ ಸ್ಥಾನಗಳಿಗೆ ಜ.11ರಂದು ನಡೆದ ಚುನಾವಣೆಯಲ್ಲಿ ಎಚ್.ಎಸ್. ಶಿವಶಂಕರ್ 5ನೇ ಬಾರಿಗೆ ಪುನರಾಯ್ಕೆ ಆಗಿದ್ದರು. ಸಹಕಾರಿ ತತ್ವದ ಆಧಾರದಲ್ಲಿ ಸ್ಥಾಪನೆಯಾದ ರಾಜ್ಯದ 20 ಸಕ್ಕರೆ ಕಾರ್ಖಾನೆಗಳು ಮಹಾಮಂಡಳದ ವ್ಯಾಪ್ತಿಯಲ್ಲಿವೆ.</p>.<p>‘20 ವರ್ಷಗಳಿಂದ ಮಹಾಮಂಡಳದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಸಹಕಾರ ತತ್ವದಡಿ ರಚನೆಯಾದ ಸಕ್ಕರೆ ಕಾರ್ಖಾನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವಿನ ನಿರೀಕ್ಷೆಯಲ್ಲಿವೆ. ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ಸಿಕ್ಕರೆ ಸಹಕಾರ ಸಕ್ಕರೆ ಕಾರ್ಖಾನೆಗಳಿಗೂ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಶ್ರಮಿಸಲಿದ್ದೇನೆ’ ಎಂದು ಶಿವಶಂಕರ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>