<p><strong>ದಾವಣಗೆರೆ: </strong>ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ನಡೆದ ಬೃಹತ್ ಲೋಕ್ ಅದಾಲತ್ನಲ್ಲಿ 6,041 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.</p>.<p>ಒಟ್ಟು 8,412 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅವುಗಳಲ್ಲಿ 6,041 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹11.06 ಕೋಟಿ ಪರಿಹಾರ ಕೊಡಿಸಲಾಯಿತು.</p>.<p>ಕೊರೊನಾ ಕಾರಣದಿಂದಾಗಿ ಮಾಸ್ಕ್ ಅನ್ನು ಕಡ್ಡಾಯ ಮಾಡಲಾಗಿತ್ತು. ಅಂತರವನ್ನು ಕಾಯ್ದುಕೊಂಡು ವಿಚಾರಣೆ ನಡೆಸಲಾಯಿತು.</p>.<p>ರಾಜೀಯಾಗಬಲ್ಲ 45 ಕ್ರಿಮಿನಲ್ ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹2.04 ಲಕ್ಷ ಪರಿಹಾರ ಕೊಡಿಸಲಾಗಿದೆ. 132 ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಯಲ್ಲಿ ಮುಗಿಸಲಾಗಿದ್ದು, ₹2.30 ಕೋಟಿ ಪರಿಹಾರ ನೀಡುವಂತೆ ತೀರ್ಪು ನೀಡಲಾಗಿದೆ.</p>.<p>ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ 30 ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ ₹ 76.15 ಲಕ್ಷ ಪರಿಹಾರ ಒದಗಿಸಲಾಯಿತು. ಬಾಕಿ 19 ಪ್ರಕರಣಗಳನ್ನು ₹ 40.41 ಲಕ್ಷ ಪರಿಹಾರ ಕೊಡಿಸಲಾಯಿತು.</p>.<p>ಹಣ ವಸೂಲಾತಿ ಸಂಬಂಧ 23 ಪ್ರಕರಣ ಇತ್ಯರ್ಥಪಡಿಸಿ ₹25.75 ಲಕ್ಷ ಕೊಡಿಸಲಾಯಿತು.ವಾಹನ ಅಪಘಾತಕ್ಕೆ ಸಂಬಂಧಿಸಿದಂತೆ 70 ಪ್ರಕರಣಗಳು ರಾಜೀಯಲ್ಲಿ ಮುಗಿಸಲಾಯಿತು. ಸಂತ್ರಸ್ತರಿಗೆ ₹ 2.31 ಕೋಟಿ ಪರಿಹಾರ ಒದಗಿಸಲಾಯಿತು. ಕಾರ್ಮಿಕರಿಗೆ ಪರಿಹಾರ ಕೊಡಿಸುವ ಸಂಬಂಧ ಯಾವೊಂದು ಪ್ರಕರಣಗಳು ಇತ್ಯರ್ಥಗೊಂಡಿಲ್ಲ.</p>.<p>ವಿದ್ಯುತ್ಗೆ ಸಂಬಂಧಪಟ್ಟಂತೆ 150 ಪ್ರಕರಣಗಳನ್ನು ಇತ್ಯರ್ಥಪಡಿಸಿ ₹5.71 ಲಕ್ಷ ಪರಿಹಾರ ಕೊಡಿಸಲಾಯಿತು. ನಿರ್ದಿಷ್ಟ ಕಾರ್ಯಕ್ಷಮತೆ ಪ್ರಕರಣ ಸಂಬಂಧ 7 ಪ್ರಕರಣಗಳು ಇತ್ಯರ್ಥಗೊಂಡು 43.87 ಲಕ್ಷ ಪರಿಹಾರ ನೀಡಲಾಯಿತು. 145 ಇತರೆ ಸಿವಿಲ್ ಪ್ರಕರಣಗಳು ಇತ್ಯರ್ಥಗೊಂಡು ₹1.41 ಕೋಟಿ ಪರಿಹಾರ ಕೊಡಿಸಲಾಯಿತು.</p>.<p>3908 ಪೆಟ್ಟಿ ಕೇಸ್ಗಳು ರಾಜಿಯಲ್ಲಿ ಮುಗಿದಿದ್ದು, ₹ 36.19 ಲಕ್ಷ, 41 ಇತರೆ ಅಪರಾಧ ಪ್ರಕರಣಗಳ ಸಂಬಂಧ 19.03 ಲಕ್ಷ ಪರಿಹಾರ ಕೊಡಿಸಲಾಯಿತು.</p>.<p><strong>ನೀರಿನ ಬಿಲ್ಲುಗಳು, ಭೂವಿವಾದ</strong></p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗೀತಾ ಕೆ.ಬಿ. ನೇತೃತ್ವದಲ್ಲಿ ಜಿಲ್ಲೆಯ ಎಲ್ಲ 24 ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್ ನಡೆಯಿತು.</p>.<p>ಪ್ರಕರಣ ಇತ್ಯರ್ಥಗೊಳ್ಳಲು ಸಹಕರಿಸಿದ ಹಣಕಾಸಿನ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸರು, ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ ಅವರು ಅಭಿನಂದನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ನಡೆದ ಬೃಹತ್ ಲೋಕ್ ಅದಾಲತ್ನಲ್ಲಿ 6,041 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.</p>.<p>ಒಟ್ಟು 8,412 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅವುಗಳಲ್ಲಿ 6,041 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹11.06 ಕೋಟಿ ಪರಿಹಾರ ಕೊಡಿಸಲಾಯಿತು.</p>.<p>ಕೊರೊನಾ ಕಾರಣದಿಂದಾಗಿ ಮಾಸ್ಕ್ ಅನ್ನು ಕಡ್ಡಾಯ ಮಾಡಲಾಗಿತ್ತು. ಅಂತರವನ್ನು ಕಾಯ್ದುಕೊಂಡು ವಿಚಾರಣೆ ನಡೆಸಲಾಯಿತು.</p>.<p>ರಾಜೀಯಾಗಬಲ್ಲ 45 ಕ್ರಿಮಿನಲ್ ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹2.04 ಲಕ್ಷ ಪರಿಹಾರ ಕೊಡಿಸಲಾಗಿದೆ. 132 ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಯಲ್ಲಿ ಮುಗಿಸಲಾಗಿದ್ದು, ₹2.30 ಕೋಟಿ ಪರಿಹಾರ ನೀಡುವಂತೆ ತೀರ್ಪು ನೀಡಲಾಗಿದೆ.</p>.<p>ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ 30 ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ ₹ 76.15 ಲಕ್ಷ ಪರಿಹಾರ ಒದಗಿಸಲಾಯಿತು. ಬಾಕಿ 19 ಪ್ರಕರಣಗಳನ್ನು ₹ 40.41 ಲಕ್ಷ ಪರಿಹಾರ ಕೊಡಿಸಲಾಯಿತು.</p>.<p>ಹಣ ವಸೂಲಾತಿ ಸಂಬಂಧ 23 ಪ್ರಕರಣ ಇತ್ಯರ್ಥಪಡಿಸಿ ₹25.75 ಲಕ್ಷ ಕೊಡಿಸಲಾಯಿತು.ವಾಹನ ಅಪಘಾತಕ್ಕೆ ಸಂಬಂಧಿಸಿದಂತೆ 70 ಪ್ರಕರಣಗಳು ರಾಜೀಯಲ್ಲಿ ಮುಗಿಸಲಾಯಿತು. ಸಂತ್ರಸ್ತರಿಗೆ ₹ 2.31 ಕೋಟಿ ಪರಿಹಾರ ಒದಗಿಸಲಾಯಿತು. ಕಾರ್ಮಿಕರಿಗೆ ಪರಿಹಾರ ಕೊಡಿಸುವ ಸಂಬಂಧ ಯಾವೊಂದು ಪ್ರಕರಣಗಳು ಇತ್ಯರ್ಥಗೊಂಡಿಲ್ಲ.</p>.<p>ವಿದ್ಯುತ್ಗೆ ಸಂಬಂಧಪಟ್ಟಂತೆ 150 ಪ್ರಕರಣಗಳನ್ನು ಇತ್ಯರ್ಥಪಡಿಸಿ ₹5.71 ಲಕ್ಷ ಪರಿಹಾರ ಕೊಡಿಸಲಾಯಿತು. ನಿರ್ದಿಷ್ಟ ಕಾರ್ಯಕ್ಷಮತೆ ಪ್ರಕರಣ ಸಂಬಂಧ 7 ಪ್ರಕರಣಗಳು ಇತ್ಯರ್ಥಗೊಂಡು 43.87 ಲಕ್ಷ ಪರಿಹಾರ ನೀಡಲಾಯಿತು. 145 ಇತರೆ ಸಿವಿಲ್ ಪ್ರಕರಣಗಳು ಇತ್ಯರ್ಥಗೊಂಡು ₹1.41 ಕೋಟಿ ಪರಿಹಾರ ಕೊಡಿಸಲಾಯಿತು.</p>.<p>3908 ಪೆಟ್ಟಿ ಕೇಸ್ಗಳು ರಾಜಿಯಲ್ಲಿ ಮುಗಿದಿದ್ದು, ₹ 36.19 ಲಕ್ಷ, 41 ಇತರೆ ಅಪರಾಧ ಪ್ರಕರಣಗಳ ಸಂಬಂಧ 19.03 ಲಕ್ಷ ಪರಿಹಾರ ಕೊಡಿಸಲಾಯಿತು.</p>.<p><strong>ನೀರಿನ ಬಿಲ್ಲುಗಳು, ಭೂವಿವಾದ</strong></p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗೀತಾ ಕೆ.ಬಿ. ನೇತೃತ್ವದಲ್ಲಿ ಜಿಲ್ಲೆಯ ಎಲ್ಲ 24 ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್ ನಡೆಯಿತು.</p>.<p>ಪ್ರಕರಣ ಇತ್ಯರ್ಥಗೊಳ್ಳಲು ಸಹಕರಿಸಿದ ಹಣಕಾಸಿನ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸರು, ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ ಅವರು ಅಭಿನಂದನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>