<p>ದಾವಣಗೆರೆ: 2ಎ ಮೀಸಲಾತಿಗೆ ಒತ್ತಾಯಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಜ.29ಕ್ಕೆ ದಾವಣಗೆರೆಗೆ ಬರಲಿದ್ದು, ಅಂದು ನಡೆಯುವ ಸಮಾವೇಶದಲ್ಲಿ ಸಮಾಜದ 5 ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸುವರು ಎಂದು ಅಖಿಲ ಭಾರತ ಪಂಚಮಸಾಲಿ ಮಹಿಳಾ ಸಂಘ (ಚೆನ್ನಮ್ಮ ಬಳಗ)ದ ರಾಜ್ಯ ಘಟಕದ ಅಧ್ಯಕ್ಷ ವೀಣಾ ಕಾಶೆಪ್ಪನವರ್ ಹೇಳಿದರು.</p>.<p>‘ಮನೆಯಿಂದ ಹೊರಬಾರದ ಸಮಾಜದ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣ, ಉದ್ಯೋಗ ಹಾಗೂ ಭವಿಷ್ಯಕ್ಕಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದು ‘ಕುರ್ಚಿಗಿ’ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈ ಸಮಾಜದವರ ಬೆವರಿನಿಂದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾರೆ. ಮೀಸಲಾತಿ ಜಾರಿಗೆ ತರುವ ಮೂಲಕ ಈ ಸಮಾಜದ ಋಣ ತೀರಿಸಬೇಕು. ಪಾದಯಾತ್ರೆ ದಾವಣಗೆರೆ ದಾಟುವಷ್ಟರಲ್ಲಿ ಹಕ್ಕೊತ್ತಾಯ ನೀಡಬೇಕು. ಬೆಂಗಳೂರು ತಲುಪಿದರೂ ಮೀಸಲಾತಿ ನೀಡದಿದ್ದರೆ, ಖಡ್ಗಕ್ಕೆ ಪೂಜೆ ಮಾಡುವ ಮೂಲಕ ಮಹಿಳೆಯರು ಒಂದು ದಿನ ಉಪವಾಸ ಕೈಗೊಳ್ಳುತ್ತೇವೆ’ ಎಂದು ಎಚ್ಚರಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಂಜುಳಾ, ಲಕ್ಷ್ಮಿ ಕರಿಬಸಪ್ಪ, ವಿಜಯಾ, ಆಶಾ, ಮಂಜುಳಾ ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: 2ಎ ಮೀಸಲಾತಿಗೆ ಒತ್ತಾಯಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಜ.29ಕ್ಕೆ ದಾವಣಗೆರೆಗೆ ಬರಲಿದ್ದು, ಅಂದು ನಡೆಯುವ ಸಮಾವೇಶದಲ್ಲಿ ಸಮಾಜದ 5 ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸುವರು ಎಂದು ಅಖಿಲ ಭಾರತ ಪಂಚಮಸಾಲಿ ಮಹಿಳಾ ಸಂಘ (ಚೆನ್ನಮ್ಮ ಬಳಗ)ದ ರಾಜ್ಯ ಘಟಕದ ಅಧ್ಯಕ್ಷ ವೀಣಾ ಕಾಶೆಪ್ಪನವರ್ ಹೇಳಿದರು.</p>.<p>‘ಮನೆಯಿಂದ ಹೊರಬಾರದ ಸಮಾಜದ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣ, ಉದ್ಯೋಗ ಹಾಗೂ ಭವಿಷ್ಯಕ್ಕಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದು ‘ಕುರ್ಚಿಗಿ’ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈ ಸಮಾಜದವರ ಬೆವರಿನಿಂದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾರೆ. ಮೀಸಲಾತಿ ಜಾರಿಗೆ ತರುವ ಮೂಲಕ ಈ ಸಮಾಜದ ಋಣ ತೀರಿಸಬೇಕು. ಪಾದಯಾತ್ರೆ ದಾವಣಗೆರೆ ದಾಟುವಷ್ಟರಲ್ಲಿ ಹಕ್ಕೊತ್ತಾಯ ನೀಡಬೇಕು. ಬೆಂಗಳೂರು ತಲುಪಿದರೂ ಮೀಸಲಾತಿ ನೀಡದಿದ್ದರೆ, ಖಡ್ಗಕ್ಕೆ ಪೂಜೆ ಮಾಡುವ ಮೂಲಕ ಮಹಿಳೆಯರು ಒಂದು ದಿನ ಉಪವಾಸ ಕೈಗೊಳ್ಳುತ್ತೇವೆ’ ಎಂದು ಎಚ್ಚರಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಂಜುಳಾ, ಲಕ್ಷ್ಮಿ ಕರಿಬಸಪ್ಪ, ವಿಜಯಾ, ಆಶಾ, ಮಂಜುಳಾ ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>