ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮತ ಚಲಾಯಿಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿ, ‘ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ. ಜನರು ಬಿಜೆಪಿ ಮೇಲೆ ಬೇಜಾರಾಗಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ. ಅದರಲ್ಲಿ ತಪ್ಪೇನಿದೆ? ಮುಂದಿನ ಚುನಾವಣೆ ಬರಲಿ ನಾನು ಕೇಳುತ್ತೇನೆ’ ಎಂದು ಹೇಳಿದರು.