ದಾವಣಗೆರೆ: ‘ರೈತಪರ, ಕನ್ನಡಪರ ಹೋರಾಟ ಸೇರಿದಂತೆ ಅನೇಕ ಚಳವಳಿಯಲ್ಲಿ ಪಾಲ್ಗೊಂಡು ನೂರಾರು ಕೇಸುಗಳನ್ನು ಹಾಕಿಸಿಕೊಂಡಿರುವವನು ನಾನು, ಸಕ್ರಿಯ ರಾಜಕಾರಣದಲ್ಲಿರುವವನೇ ಹೊರತು ರೆಡಿಮೇಡ್ ಫುಡ್ ಅಲ್ಲ. ನಿನ್ನೆ ಮೊನ್ನೆ ಬಂದು ನನ್ನ ವಿರುದ್ಧ ಮಾತಾಡುವವರಿಗೆ ನಾನು ಮಹತ್ವಕೊಡಬೇಕಿಲ್ಲ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿರುಗೇಟು ನೀಡಿದರು.