‘ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಶಾಸಕರಿಗೂ ಅವಕಾಶ ನೀಡಬೇಕಿತ್ತು. ಪಕ್ಷದ ವರಿಷ್ಠರು, ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಸಚಿವಸ್ಥಾನಗಳನ್ನು ಹಂಚಿಕೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಯಾರು ಸಚಿವರಾದರೂ ಪರವಾಗಿಲ್ಲ ಎಂದು ಹೇಳುತ್ತಲೇ ಐವರು ಶಾಸಕರಲ್ಲಿ ಪ್ರೊ. ಲಿಂಗಣ್ಣ ಅವರನ್ನು ಬಿಟ್ಟು ಉಳಿದ ನಾಲ್ವರು ಲಾಬಿ ಮಾಡಿದ್ದಾರೆ. ಆದರೆ ಸಿಕ್ಕಿಲ್ಲ. ಇನ್ನೂ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಬಾಕಿ ಇದೆ. ಅದರಲ್ಲಿ ಒಂದನ್ನು ಜಿಲ್ಲೆಗೆ ನೀಡಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ತಿಳಿಸಿದರು.