ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಸಚಿವ ಸ್ಥಾನ ಕೇಳಲ್ಲ: ಸಂಸದ ಸಿದ್ದೇಶ್ವರ

Last Updated 29 ಅಕ್ಟೋಬರ್ 2020, 4:13 IST
ಅಕ್ಷರ ಗಾತ್ರ

ದಾವಣಗೆರೆ: ‘ಸುರೇಶ್‌ ಅಂಗಡಿ ಅವರ ನಿಧನದಿಂದ ತೆರವಾಗಿರುವ ಕೇಂದ್ರ ಸಚಿವ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ. ಲಾಬಿ ಮಾಡಲ್ಲ. ಯಾರಲ್ಲಿಯೂ ಕೇಳಲ್ಲ. ಅವರಾಗಿ ಕೊಟ್ಟರೆ ನಿಭಾಯಿಸುತ್ತೇನೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.

‘ಹಿಂದೆಯೂ ನಾನು ಸಚಿವ ಸ್ಥಾನ ಕೇಳಿ ಪಡೆದಿದ್ದಲ್ಲ. ಈಗಲೂ ಆ ಕೆಲಸ ಮಾಡುವುದಿಲ್ಲ’ ಎಂದು ಸುದ್ದಿಗಾರರ ಪ್ರಶ್ನೆಗೆ ಬುಧವಾರ ಉತ್ತರಿಸಿದರು.

ರಾಜ್ಯ ಸರ್ಕಾರದಲ್ಲಿ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನಮಾನ ಕೊಡುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ‘ಹರಪನಹಳ್ಳಿ ಸೇರಿ ನನ್ನ ಕ್ಷೇತ್ರದಲ್ಲಿ 6 ಮಂದಿ ಶಾಸಕರು ಇದ್ದಾರೆ. ಆರರಲ್ಲಿ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸಬಹುದು. ಆದರೆ ಆ ಒಬ್ಬರು ಯಾರು ಎಂಬುದನ್ನು ಆರು ಮಂದಿ ಶಾಸಕರು ಕುಳಿತು ಆಯ್ಕೆ ಮಾಡಿಕೊಳ್ಳಬೇಕು. ಮಾತಿನಲ್ಲಿ ಯಾರಿಗಾದರೂ ಒಬ್ಬರಿಗೆ ಎಂದು ಹೇಳುತ್ತಾ ಒಳಗೊಳಗೆ ಎಲ್ಲರೂ ಪ್ರಯತ್ನಿಸಿದರೆ ಕಷ್ಟ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT