‘ಅಮಾನತು ಆದ ನಾಲ್ಕು ದಿನಗಳಲ್ಲೇ ಬೆಳಗಾವಿಯ ಕೆಎಟಿಯ ಮೊರೆ ಹೋದೆ. ಎಲ್ಲಾ ದಾಖಲೆಗಳನ್ನು ಒದಗಿಸಿದೆ. ತೀರ್ಪು ನನ್ನ ಪರವಾಗಿ ಬಂತು. ಆಗ ಕಲಬುರ್ಗಿ ಜಿಲ್ಲೆಯ ಸೇಡಂಗೆ ತಾಲ್ಲೂಕು ಆಸ್ಪತ್ರೆಗೆ ನಿಯೋಜನೆ ಮಾಡಲಾಯಿತು. ಪುನಃ ಡಿಸೆಂಬರ್ ತಿಂಗಳಲ್ಲಿ ಕೆಎಟಿ ಮೊರೆಹೋದೆ. 2020ರ ಜನವರಿಯಲ್ಲಿ ತೀರ್ಪು ಬಂದಿದ್ದು, ಉನ್ನತ ಅಧಿಕಾರಿಗಳು ನನಗೆ ಈವರೆಗೂ ಜಿಲ್ಲಾ ಮಟ್ಟದ ಹುದ್ದೆ ತೋರಿಸಿಲ್ಲ’ ಎಂದು ಆರೋಪಿಸುತ್ತಾರೆ.