ಮುಖ್ಯಾಧಿಕಾರಿ ಎಚ್. ನಿರಂಜನಿ ಮಾತನಾಡಿ, ‘ಬೀದಿ ಬದಿ ವ್ಯಾಪಾರಿಗಳು ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಜನರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನಮ್ಮ ಸಿಬ್ಬಂದಿ ಎಷ್ಟು ಹೇಳಿದರೂ ಅದನ್ನು ದೌರ್ಜನ್ಯ ಎಂದು ಬಿಂಬಿಸುತ್ತಿದ್ದಾರೆ. ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ನಾವು ರಸ್ತೆ ಸುರಕ್ಷತಾ ಸಂಚಾರದ ಕಡೆಗೂ ಗಮನ ಕೊಡಬೇಕಾಗಿದೆ. ಅಪಘಾತ, ಅನಾಹುತಗಳು ನಡೆದರೆ ಯಾರು ಹೊಣೆ’ ಎಂದು ಪ್ರಶ್ನಿಸಿದರು.