<p>ದಾವಣಗೆರೆ: ಸಿನಿಯಾರಿಟಿ ಲೆಕ್ಕ ಹಾಕಿದರೆ ರಾಜ್ಯದಲ್ಲಿ ನಾನೇ ಮೊದಲಿಗ. ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಹೇಳಿದರು.</p>.<p>ದಾವಣಗೆರೆ ತಾಲ್ಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮಾತನಾಡಿದ ಅವರು, ‘ ಬಿಜೆಪಿ ವರಿಷ್ಠ ಅರುಣ್ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದವರನ್ನು ಭೇಟಿ ಮಾಡಿ ಜಿಲ್ಲೆಯ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನಕ್ಕೆ ಮನವಿ ಮಾಡಿದ್ದೇವೆ. ನೀಡದಿದ್ದರೆ ಬೇಸರವಾಗುವುದಿಲ್ಲ’ ಎಂದು ಹೇಳಿದರು.</p>.<p>‘ಜಿಲ್ಲೆಯವರು ಉಸ್ತುವಾರಿ ಸಚಿವರಾದರೆ ಕೆಲಸಗಳು ಸುಗಮವಾಗಿ ನಡೆಯುತ್ತವೆ ಎನ್ನುವ ಉದ್ದೇಶದಿಂದ ಜಿಲ್ಲೆಯವರಿಗೆ ಸಚಿವ ಸ್ಥಾನಕ್ಕೆ ಮನವಿ ಮಾಡಿದ್ದೇವೆ.ಯಾವುದೇ ಲಾಬಿ ಮಾಡಿಲ್ಲ. ಸಚಿವ ಸ್ಥಾನ ನೀಡದಿದ್ದರೂ ಅಸಂತೋಷವಿಲ್ಲ. ಎಲ್ಲರೂ ಸೇರಿ ಒಳ್ಳೆಯ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.</p>.<p>‘ಸಚಿವ ಸ್ಥಾನಕ್ಕೆ ಕೇಂದ್ರದ ವರಿಷ್ಠರು ಯಾವ ಮಾನದಂಡ ಅನುಸರಿಸುತ್ತಾರೋ ಗೊತ್ತಿಲ್ಲ. ನಮ್ಮಲ್ಲಿ ಹಲವು ಹಿರಿಯರು ಇದ್ದರೂ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದರು. ಇದರಿಂದಾಗಿ ಸಿನಿಯಾರಿಟಿ ಲೆಕ್ಕಕ್ಕೆ ಬರುತ್ತದೊ, ಇಲ್ಲವೋ ಗೊತ್ತಿಲ್ಲ’ ಎಂದು ತಿಳಿಸಿದರು. <br /><br />‘ಬಿಜೆಪಿ ವಲಸೆ ಬಂದ ಶಾಸಕರಿಗೆ ಮೊದಲು ಸಚಿವ ಸ್ಥಾನ ನೀಡಬೇಕು. ಅವರು ಬಂದ ಮೇಲೆ ನಮ್ಮ ಸರ್ಕಾರ ರಚನೆಯಾಗಿದೆ. ನಮ್ಮ ಸರ್ಕಾರ ಈ ಬಗ್ಗೆ ಯಾಕೆ ಚಿಂತೆ ಮಾಡುತ್ತದೋ ಗೊತ್ತಿಲ್ಲ. ನಾವು 110 ಸ್ಥಾನ ಪಡೆದುಕೊಂಡರೂ ಅವರು ಬಂದ ಮೇಲೆ ನಮ್ಮ ಸರ್ಕಾರ ಬಂದಿದೆ. ಮಾತು ಕೊಟ್ಟಂತೆ ಅವರಿಗೆ ಆದ್ಯತೆ ಕೊಡಲೇಬೇಕು’ ಎಂದು ರವೀಂದ್ರನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಸಿನಿಯಾರಿಟಿ ಲೆಕ್ಕ ಹಾಕಿದರೆ ರಾಜ್ಯದಲ್ಲಿ ನಾನೇ ಮೊದಲಿಗ. ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಹೇಳಿದರು.</p>.<p>ದಾವಣಗೆರೆ ತಾಲ್ಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮಾತನಾಡಿದ ಅವರು, ‘ ಬಿಜೆಪಿ ವರಿಷ್ಠ ಅರುಣ್ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದವರನ್ನು ಭೇಟಿ ಮಾಡಿ ಜಿಲ್ಲೆಯ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನಕ್ಕೆ ಮನವಿ ಮಾಡಿದ್ದೇವೆ. ನೀಡದಿದ್ದರೆ ಬೇಸರವಾಗುವುದಿಲ್ಲ’ ಎಂದು ಹೇಳಿದರು.</p>.<p>‘ಜಿಲ್ಲೆಯವರು ಉಸ್ತುವಾರಿ ಸಚಿವರಾದರೆ ಕೆಲಸಗಳು ಸುಗಮವಾಗಿ ನಡೆಯುತ್ತವೆ ಎನ್ನುವ ಉದ್ದೇಶದಿಂದ ಜಿಲ್ಲೆಯವರಿಗೆ ಸಚಿವ ಸ್ಥಾನಕ್ಕೆ ಮನವಿ ಮಾಡಿದ್ದೇವೆ.ಯಾವುದೇ ಲಾಬಿ ಮಾಡಿಲ್ಲ. ಸಚಿವ ಸ್ಥಾನ ನೀಡದಿದ್ದರೂ ಅಸಂತೋಷವಿಲ್ಲ. ಎಲ್ಲರೂ ಸೇರಿ ಒಳ್ಳೆಯ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.</p>.<p>‘ಸಚಿವ ಸ್ಥಾನಕ್ಕೆ ಕೇಂದ್ರದ ವರಿಷ್ಠರು ಯಾವ ಮಾನದಂಡ ಅನುಸರಿಸುತ್ತಾರೋ ಗೊತ್ತಿಲ್ಲ. ನಮ್ಮಲ್ಲಿ ಹಲವು ಹಿರಿಯರು ಇದ್ದರೂ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದರು. ಇದರಿಂದಾಗಿ ಸಿನಿಯಾರಿಟಿ ಲೆಕ್ಕಕ್ಕೆ ಬರುತ್ತದೊ, ಇಲ್ಲವೋ ಗೊತ್ತಿಲ್ಲ’ ಎಂದು ತಿಳಿಸಿದರು. <br /><br />‘ಬಿಜೆಪಿ ವಲಸೆ ಬಂದ ಶಾಸಕರಿಗೆ ಮೊದಲು ಸಚಿವ ಸ್ಥಾನ ನೀಡಬೇಕು. ಅವರು ಬಂದ ಮೇಲೆ ನಮ್ಮ ಸರ್ಕಾರ ರಚನೆಯಾಗಿದೆ. ನಮ್ಮ ಸರ್ಕಾರ ಈ ಬಗ್ಗೆ ಯಾಕೆ ಚಿಂತೆ ಮಾಡುತ್ತದೋ ಗೊತ್ತಿಲ್ಲ. ನಾವು 110 ಸ್ಥಾನ ಪಡೆದುಕೊಂಡರೂ ಅವರು ಬಂದ ಮೇಲೆ ನಮ್ಮ ಸರ್ಕಾರ ಬಂದಿದೆ. ಮಾತು ಕೊಟ್ಟಂತೆ ಅವರಿಗೆ ಆದ್ಯತೆ ಕೊಡಲೇಬೇಕು’ ಎಂದು ರವೀಂದ್ರನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>