<p><strong>ಹರಪನಹಳ್ಳಿ:</strong> 35 ದಿನಗಳ ಹಿಂದೆ ಕಾಣೆಯಾಗಿದ್ದ ಆಟೊ ಚಾಲಕ ಸಂತೋಷ್ (19) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.</p>.<p>ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆರೋಪಿಗಳು ಸಂತೋಷನ ಕೊಲೆಗೈದು ಅರಣ್ಯದಲ್ಲಿ ಬಿಸಾಡಿದ್ದರು. 12ನೇ ವಾರ್ಡ್ ಗುಡೆಕಟ್ಟಿಕೇರಿ ಆಟೊ ಚಾಲಕರಾದ ದುರುಗೇಶ್ (25), ಕಾರ್ತಿಕ್ (21) ಬಂಧಿತ ಆರೋಪಿಗಳು.</p>.<p class="Subhead"><strong>ಘಟನೆ ವಿವರ:</strong> ದುರಗೇಶನ ಅಕ್ಕನ ಮಗಳಾದ ಕೊಟ್ಟೂರಿನ ಆಶಾಳನ್ನು ಸಂತೋಷ್ 2019ರಿಂದ ಪ್ರೀತಿಸುತ್ತಿದ್ದ. ಈ ಸಂಬಂಧ ಇಬ್ಬರ ನಡುವೆ ಜಗಳವಾಗಿತ್ತು. ಹಿರಿಯರು ಇಬ್ಬರಿಗೂ ಜಗಳ ಆಡದಂತೆ ಬುದ್ಧಿಮಾತು ಹೇಳಿದ್ದರು. ನಂತರ ದುರುಗೇಶ್ ಆಶಾಳನ್ನು ವಿವಾಹವಾಗಿದ್ದನು. ಮದುವೆ ಬಳಿಕವೂ ಸಂತೋಷ್, ಆಶಾಳೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿರುವ ವಿಚಾರ ದುರುಗೇಶ್ಗೆ ಗೊತ್ತಾಗಿದೆ. ಇದರಿಂದ ಕೋಪಗೊಂಡ ದುರುಗೇಶ್, ಪ್ರಕರಣದ 2ನೇ ಆರೋಪಿ ಕಾರ್ತಿಕ್ ಸಹಾಯ ಪಡೆದು ಸಂತೋಷ್ನನ್ನು ಕಳೆದ ಫೆಬ್ರುವರಿ 26ರ ರಾತ್ರಿ 11.30ಕ್ಕೆ ಹಡಗಲಿ ರಸ್ತೆ ಕೆಇಬಿ ಪಕ್ಕದ ನೀರಿನ ಟ್ಯಾಂಕ್ ಬಳಿ ಕರೆದುಕೊಂಡು ಹೋಗಿ, ಹೊಡೆದು ಸಾಯಿಸಿ ಹಡಗಲಿ ತಾಲ್ಲೂಕಿನ ಕುಮಾರನಹಳ್ಳಿ ತಾಂಡಾ ಬಳಿ ಇರುವ ಅರಣ್ಯದಲ್ಲಿ ಬೀಸಾಡಿ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ವಿಷಯವನ್ನು ಇಬ್ಬರೂ ಆರೋಪಿಗಳು ಸ್ನೇಹಿತರಾದ ರಾಘವೇಂದ್ರ ಮತ್ತು ಮಧುಸೂದನ್ ಅವರ ಬಳಿ ಹಂಚಿಕೊಂಡಿದ್ದರಿಂದ ವಿಷಯ ಬೆಳಕಿಗೆ ಬಂದಿದೆ. ಸಂತೋಷ್ ಕಾಣೆಯಾಗಿದ್ದ ಬಗ್ಗೆ ಮಾರ್ಚ್ 3ರಂದು ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> 35 ದಿನಗಳ ಹಿಂದೆ ಕಾಣೆಯಾಗಿದ್ದ ಆಟೊ ಚಾಲಕ ಸಂತೋಷ್ (19) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.</p>.<p>ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆರೋಪಿಗಳು ಸಂತೋಷನ ಕೊಲೆಗೈದು ಅರಣ್ಯದಲ್ಲಿ ಬಿಸಾಡಿದ್ದರು. 12ನೇ ವಾರ್ಡ್ ಗುಡೆಕಟ್ಟಿಕೇರಿ ಆಟೊ ಚಾಲಕರಾದ ದುರುಗೇಶ್ (25), ಕಾರ್ತಿಕ್ (21) ಬಂಧಿತ ಆರೋಪಿಗಳು.</p>.<p class="Subhead"><strong>ಘಟನೆ ವಿವರ:</strong> ದುರಗೇಶನ ಅಕ್ಕನ ಮಗಳಾದ ಕೊಟ್ಟೂರಿನ ಆಶಾಳನ್ನು ಸಂತೋಷ್ 2019ರಿಂದ ಪ್ರೀತಿಸುತ್ತಿದ್ದ. ಈ ಸಂಬಂಧ ಇಬ್ಬರ ನಡುವೆ ಜಗಳವಾಗಿತ್ತು. ಹಿರಿಯರು ಇಬ್ಬರಿಗೂ ಜಗಳ ಆಡದಂತೆ ಬುದ್ಧಿಮಾತು ಹೇಳಿದ್ದರು. ನಂತರ ದುರುಗೇಶ್ ಆಶಾಳನ್ನು ವಿವಾಹವಾಗಿದ್ದನು. ಮದುವೆ ಬಳಿಕವೂ ಸಂತೋಷ್, ಆಶಾಳೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿರುವ ವಿಚಾರ ದುರುಗೇಶ್ಗೆ ಗೊತ್ತಾಗಿದೆ. ಇದರಿಂದ ಕೋಪಗೊಂಡ ದುರುಗೇಶ್, ಪ್ರಕರಣದ 2ನೇ ಆರೋಪಿ ಕಾರ್ತಿಕ್ ಸಹಾಯ ಪಡೆದು ಸಂತೋಷ್ನನ್ನು ಕಳೆದ ಫೆಬ್ರುವರಿ 26ರ ರಾತ್ರಿ 11.30ಕ್ಕೆ ಹಡಗಲಿ ರಸ್ತೆ ಕೆಇಬಿ ಪಕ್ಕದ ನೀರಿನ ಟ್ಯಾಂಕ್ ಬಳಿ ಕರೆದುಕೊಂಡು ಹೋಗಿ, ಹೊಡೆದು ಸಾಯಿಸಿ ಹಡಗಲಿ ತಾಲ್ಲೂಕಿನ ಕುಮಾರನಹಳ್ಳಿ ತಾಂಡಾ ಬಳಿ ಇರುವ ಅರಣ್ಯದಲ್ಲಿ ಬೀಸಾಡಿ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ವಿಷಯವನ್ನು ಇಬ್ಬರೂ ಆರೋಪಿಗಳು ಸ್ನೇಹಿತರಾದ ರಾಘವೇಂದ್ರ ಮತ್ತು ಮಧುಸೂದನ್ ಅವರ ಬಳಿ ಹಂಚಿಕೊಂಡಿದ್ದರಿಂದ ವಿಷಯ ಬೆಳಕಿಗೆ ಬಂದಿದೆ. ಸಂತೋಷ್ ಕಾಣೆಯಾಗಿದ್ದ ಬಗ್ಗೆ ಮಾರ್ಚ್ 3ರಂದು ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>