<p><strong>ಹೊನ್ನಾಳಿ:</strong> ತಾಲ್ಲೂಕಿನ ಬೇಲಿ ಮಲ್ಲೂರು ಗ್ರಾಮದ ಸಮೀಪದಲ್ಲಿರುವ ತುಂಗಭದ್ರಾ ನದಿಯಲ್ಲಿನ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗಳ ಮೇಲೆ ಸಿಪಿಐ ಸುನೀಲ್ಕುಮಾರ್ ದಾಳಿ ನಡೆಸಿ, ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಸಿಪಿಐ ಸುನೀಲ್ ಕುಮಾರ್, ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ಮರಳು ತುಂಬಿದ 5 ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಸರ್ಕಾರದಿಂದ ಯಾವುದೇ ಪರವಾನಿಗೆ ಪಡೆದಿಲ್ಲವಾದ್ದರಿಂದ ಅಕ್ರಮ ಸಾಗಣೆದಾರರ ಮೇಲೆ ( ಚಾಲಕರು ಮತ್ತು ಮಾಲೀಕರ ಮೇಲೆ ) ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವರದಿ ನೀಡಲಾಗಿದೆ ಎಂದು ತಿಳಿಸಿದರು. </p>.<p>ದಾವಣಗೆರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ನಿರ್ದೇಶಕಿ ರಶ್ಮೀ ಮಾತನಾಡಿ, ಪೊಲೀಸರಿಂದ ವರದಿ ಬಂದ ತಕ್ಷಣ ದಂಡ ವಸೂಲಿ ಮಾಡಲಾಗುವುದು. ಅಕ್ರಮ ಸಾಗಾಣಿಕೆದಾರರ ಮೇಲೆ ಪೊಲೀಸರೇ ದೂರು ದಾಖಲಿಸುತ್ತಾರೆ ಎಂದು ಹೇಳಿದರು.</p>.<p>ಆದರೆ ಸಿಪಿಐ ಸುನೀಲ್ಕುಮಾರ್, ಗಣಿ, ಭೂ ವಿಜ್ಞಾನ ಇಲಾಖೆಯಿಂದ ಶಿಫಾರಸ್ಸು ಮಾಡಿದರೆ ಮಾತ್ರ ನಾವು ದೂರು ಸ್ವೀಕರಿಸುತ್ತೇವೆ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಈ ಎರಡು ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇರುವುದರಿಂದ ಅಕ್ರಮ ಮರಳು ಸಾಗಾಣಿಕೆದಾರರ ಮೇಲೆ ಸರಿಯಾದ ಕ್ರಮ ಜರುಗಿಸುತ್ತಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. </p>.<p>ಫೋನ್ ಸ್ವೀಕರಿಸದ ಅಧಿಕಾರಿ: ಹೊನ್ನಾಳಿ ಮತ್ತು ನ್ಯಾಮತಿ ಭಾಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಶಿವಪ್ರಸಾದ್ ಅವರಿಗೆ ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿದರೆ ಕರೆಗಳನ್ನು ಸ್ವೀಕರಿಸಲಿಲ್ಲ. ಈ ಬಗ್ಗೆ ಹಿರಿಯ ಅಧಿಕಾರಿ ರಶ್ಮೀ ಅವರ ಗಮನಕ್ಕೆ ತರಲಾಯಿತು. ಅವರು ಸಾಕಷ್ಟು ಎಚ್ಚರಿಕೆ ನೀಡಿದ್ದರೂ ಅವರ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನೊಮ್ಮೆ ಹೀಗೆ ಮಾಡಿದರೆ ನೋಟಿಸ್ ಕೊಡಲಾಗುವುದು ಎಂದು ಹೇಳಿದರು. </p>
<p><strong>ಹೊನ್ನಾಳಿ:</strong> ತಾಲ್ಲೂಕಿನ ಬೇಲಿ ಮಲ್ಲೂರು ಗ್ರಾಮದ ಸಮೀಪದಲ್ಲಿರುವ ತುಂಗಭದ್ರಾ ನದಿಯಲ್ಲಿನ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗಳ ಮೇಲೆ ಸಿಪಿಐ ಸುನೀಲ್ಕುಮಾರ್ ದಾಳಿ ನಡೆಸಿ, ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಸಿಪಿಐ ಸುನೀಲ್ ಕುಮಾರ್, ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ಮರಳು ತುಂಬಿದ 5 ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಸರ್ಕಾರದಿಂದ ಯಾವುದೇ ಪರವಾನಿಗೆ ಪಡೆದಿಲ್ಲವಾದ್ದರಿಂದ ಅಕ್ರಮ ಸಾಗಣೆದಾರರ ಮೇಲೆ ( ಚಾಲಕರು ಮತ್ತು ಮಾಲೀಕರ ಮೇಲೆ ) ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವರದಿ ನೀಡಲಾಗಿದೆ ಎಂದು ತಿಳಿಸಿದರು. </p>.<p>ದಾವಣಗೆರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ನಿರ್ದೇಶಕಿ ರಶ್ಮೀ ಮಾತನಾಡಿ, ಪೊಲೀಸರಿಂದ ವರದಿ ಬಂದ ತಕ್ಷಣ ದಂಡ ವಸೂಲಿ ಮಾಡಲಾಗುವುದು. ಅಕ್ರಮ ಸಾಗಾಣಿಕೆದಾರರ ಮೇಲೆ ಪೊಲೀಸರೇ ದೂರು ದಾಖಲಿಸುತ್ತಾರೆ ಎಂದು ಹೇಳಿದರು.</p>.<p>ಆದರೆ ಸಿಪಿಐ ಸುನೀಲ್ಕುಮಾರ್, ಗಣಿ, ಭೂ ವಿಜ್ಞಾನ ಇಲಾಖೆಯಿಂದ ಶಿಫಾರಸ್ಸು ಮಾಡಿದರೆ ಮಾತ್ರ ನಾವು ದೂರು ಸ್ವೀಕರಿಸುತ್ತೇವೆ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಈ ಎರಡು ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇರುವುದರಿಂದ ಅಕ್ರಮ ಮರಳು ಸಾಗಾಣಿಕೆದಾರರ ಮೇಲೆ ಸರಿಯಾದ ಕ್ರಮ ಜರುಗಿಸುತ್ತಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. </p>.<p>ಫೋನ್ ಸ್ವೀಕರಿಸದ ಅಧಿಕಾರಿ: ಹೊನ್ನಾಳಿ ಮತ್ತು ನ್ಯಾಮತಿ ಭಾಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಶಿವಪ್ರಸಾದ್ ಅವರಿಗೆ ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿದರೆ ಕರೆಗಳನ್ನು ಸ್ವೀಕರಿಸಲಿಲ್ಲ. ಈ ಬಗ್ಗೆ ಹಿರಿಯ ಅಧಿಕಾರಿ ರಶ್ಮೀ ಅವರ ಗಮನಕ್ಕೆ ತರಲಾಯಿತು. ಅವರು ಸಾಕಷ್ಟು ಎಚ್ಚರಿಕೆ ನೀಡಿದ್ದರೂ ಅವರ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನೊಮ್ಮೆ ಹೀಗೆ ಮಾಡಿದರೆ ನೋಟಿಸ್ ಕೊಡಲಾಗುವುದು ಎಂದು ಹೇಳಿದರು. </p>